ಮಂಗಳೂರು : airport runway collapsed : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ ತಹಬಧಿಗೆ ಬರುವಂತೆ ಕಾಣುತ್ತಿಲ್ಲ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು ಭಾರೀ ಮಳೆಯಿಂದಾಗಿ ಉಂಟಾಗಬಲ್ಲ ಯಾವುದೇ ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಜಿಲ್ಲಾಡಳಿತ ಸರ್ವ ಸನ್ನದ್ಧವಾಗಿದೆ. ಮುಂಜಾಗ್ರತಾ ಕ್ರಮವಾಗಿ ಇಂದೂ ಸಹ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ದಕ್ಷಿಣ ಕನ್ನಡ ಜಿಲ್ಲಾಡಳಿತ ಆದೇಶವನ್ನು ಹೊರಡಿಸಿದೆ. ಈ ನಡುವೆ ಭಾರಿ ಮಳೆಯಿಂದಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇ ಸಮೀಪದಲ್ಲಿಯೇ ರಸ್ತೆ ಕುಸಿತಗೊಂಡಿದೆ.
ರನ್ ವೇ ಕುಸಿತದಿಂದಾಗಿ ವಿಮಾನ ನಿಲ್ದಾಣದ ಸುತ್ತ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಈಗಾಗಲೇ ಅದ್ಯಪಾಡಿಯಿಂದ ಕೈ ಕಂಬಕ್ಕೆ ತೆರಳುವ ಮಾರ್ಗವನ್ನು ಬ್ಲಾಕ್ ಮಾಡಲಾಗಿದೆ. ಭಾರೀ ಮಳೆಯಿಂದಾಗಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಈಗಾಗಲೇ ಜಿಲ್ಲಾಡಳಿತ ಸ್ಥಳಕ್ಕೆ ಧಾವಿಸಿದೆ. ರನ್ ವೇ ಸಮೀಪದಲ್ಲಿ ಉಂಟಾಗಿರುವ ರಸ್ತೆ ಕುಸಿತವನ್ನು ಸರಿಪಡಿಸುವ ಕಾರ್ಯವನ್ನು ಮಾಡಲಾಗುತ್ತಿದೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯೇ ಇರುವ ಅದ್ಯಪಾಡಿ ಪದವು ಎಂಬಲ್ಲಿ ಗುಡ್ಡ ಕುಸಿತಗೊಂಡಿದೆ. ರಸ್ತೆಗೆ ಹೊಂದಿಕೊಂಡೇ ಇರುವ ಗುಡ್ಡ ಇದಾಗಿದ್ದು ಇದೀಗ ಕುಸಿತವಾಗಿದೆ. ಏರ್ಪೋರ್ಟ್ ರನ್ ವೇನಿಂದ ಭಾರೀ ಪ್ರಮಾಣದಲ್ಲಿ ನೀರನ್ನು ಹೊರಗೆ ಹರಿ ಬಿಡಲಾಗುತ್ತಿರುವ ಹಿನ್ನೆಲೆಯಲ್ಲಿ ಈ ಅವಘಡ ಸಂಭವಿಸಿದೆ ಎಂಬುದು ಸ್ಥಳೀಯರ ಆರೋಪವಾಗಿದೆ. ಅಲ್ಲದೇ ಇಲ್ಲಿರುವ ಕಲ್ಲು ಗಣಿಗಾರಿಕೆ ಸ್ಥಳದಲ್ಲಿಯೂ ಭಾರೀ ಮಳೆಯಿಂದಾಗಿ ನೀರು ತುಂಬಿದ್ದು ಈ ಕಾರಣದಿಂದಲೂ ಗುಡ್ಡ ಕುಸಿತವಾಗಿರಬಹುದು ಎಂದು ಅಂದಾಜಿಸಲಾಗಿದೆ.
ಇನ್ನು ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತ ಮಂಡಳಿ, ಏರ್ಪೋರ್ಟ್ನಲ್ಲಿ ಕಾರ್ಯಾಚರಣೆ ಸಾಮಾನ್ಯ ರೀತಿಯಲ್ಲಿಯೇ ನಡೆಯುತ್ತಿದೆ. ರನ್ ವೇಗೆ ಯಾವುದೇ ರೀತಿಯ ಅಪಾಯ ಸಂಭವಿಸಿಲ್ಲ . ಎರಡು ದಿನಗಳ ಹಿಂದೆ ಸತತ ನೀರಿನ ಹರಿವಿನಿಂದ ಮೋರಿಯ ಬುಡ ಕೊಚ್ಚಿ ಹೋಗಿತ್ತು. ಹೀಗಾಗಿ ರಸ್ತೆಯು ಕುಸಿತಗೊಂಡಿದೆ. ಸ್ಥಳೀಯ ಅಧಿಕಾರಿಗಳು ರಸ್ತೆ ದುರಸ್ಥಿ ಕಾರ್ಯವನ್ನು ಕೈಗೊಂಡಿದ್ದಾರೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದೆ .
ಮಂಗಳೂರಿನಲ್ಲಿ ವರುಣನ ಆರ್ಭಟದಿಂದಾಗಿ ಪರಿಸ್ಥಿತಿ ಕೈ ಮೀರುತ್ತಿದ್ದು ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಜಿಲ್ಲಾಡಳಿತ ಸಕಲ ರೀತಿಯಲ್ಲಿ ರಕ್ಷಣಾ ಕಾರ್ಯಗಳನ್ನು ಕೈಗೊಳ್ಳುತ್ತಿದೆ. ಆದರೂ ಎಚ್ಚರಿಕೆಯಿಂದ ಇರುವಂತೆ ಜಿಲ್ಲೆಯ ಜನತೆಗೆ ಸೂಚನೆ ನೀಡಲಾಗಿದೆ.
ಇದನ್ನು ಓದಿ : Infosys Sudha Murty : ತಿರುಪತಿ ದೇವಸ್ಥಾನ : 42 ಲಕ್ಷ ವೆಚ್ಚದ ಧರ್ಮ ರಥ ನೀಡಿದ ಇನ್ಪೋಸಿಸ್ ಸುಧಾಮೂರ್ತಿ
ಇದನ್ನೂ ಓದಿ : Covid-19 precautionary dose : ಕೋವಿಡ್ 19 ಬೂಸ್ಟರ್ ಡೋಸ್ ನಡುವಿನ ಅಂತರ ಇಳಿಕೆ ಮಾಡಿದ ಕೇಂದ್ರ
mangalore due to heavy rain the road beside the airport runway collapsed
Comments are closed.