ಬಾಗಲಕೋಟೆ : Yatnal outraged against Siddaramaiah : ವಿಪಕ್ಷ ನಾಯಕ ಸಿದ್ದರಾಮಯ್ಯ ವಾಹನದ ಮೇಲೆ ಕೊಡಗಿನಲ್ಲಿ ಮೊಟ್ಟೆ ಎಸೆದ ವ್ಯಕ್ತಿಯ ಮೇಲೆ ನನಗೆ ಅಭಿಮಾನ ಇದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಹೇಳಿದ್ದಾರೆ . ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಈ ವಿಚಾರವಾಗಿ ಮಾತನಾಡಿದ ಯತ್ನಾಳ್, ಆ ಒಬ್ಬ ವ್ಯಕ್ತಿ ಹಿಂದೂ ಬಗ್ಗೆ ಅಭಿಮಾನ ಇಟ್ಟುಕೊಂಡಿದ್ದಾನೆ. ಆತ ಸಿದ್ದರಾಮಯ್ಯ ವಾಹನಕ್ಕೆ ಮೊಟ್ಟೆ ಹೊಡೆದಿದ್ದಾನೆ ಎಂದರೆ ಅದು ಹಿಂದೂಗಳ ಸ್ವಾಭಿಮಾನದ ಪ್ರತೀಕವಾಗಿದೆ ಎಂದು ಗುಡುಗಿದ್ದಾರೆ.
ಸಿದ್ದರಾಮಯ್ಯ ಮಾಂಸ ಸೇವಿಸಿ ದೇವಸ್ಥಾನಕ್ಕೆ ತೆರಳಿದ ವಿಚಾರವಾಗಿಯೂ ಇದೇ ವೇಳೆ ಮಾತನಾಡಿದ ಅವರು, ದೇವಸ್ಥಾನಕ್ಕೆ ಹೋಗಬೇಕಾದರೆ ಯಾವ ರೀತಿ ಹೋಗಬೇಕು,ಅದಕ್ಕೆ ಒಂದು ನಿಯಮವಿದೆ ಆ ನಿಯಮಗಳನ್ನು ಪಾಲಿಸಬೇಕು. ಕೇವಲ ಮುಸ್ಲಿಂ ಧರ್ಮದವರನ್ನು ಓಲೈಕೆ ಮಾಡಬೇಕೆಂದು ದೇಶದ ಹಿಂದೂ ಧರ್ಮದ ಬಗ್ಗೆ, ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಸಾವರ್ಕರ್ ಬಗ್ಗೆ ಮಾತನಾಡುವ ನೈತಿಕ ಹಕ್ಕು ಇಲ್ಲ ಎಂದು ಹೇಳಿದರು.
ಕೊಡಗಿನಲ್ಲಿ ಲಕ್ಷಾಂತರ ಹಿಂದೂಗಳ ಕಗ್ಗೊಲೆಯಾಗಿದೆ. ಟಿಪ್ಪು ಸುಲ್ತಾನ ಸಂಧಾನಕ್ಕೆಂದು ಕರೆದು ಲಕ್ಷಕ್ಕೂ ಅಧಿಕ ಹಿಂದೂಗಳನ್ನು ಕೊಲೆ ಮಾಡಿರುವ ಓರ್ವ ನೀಚ , ಕ್ರೂರ ವ್ಯಕ್ತಿ. ಕೊಡಗಿನಲ್ಲಿ ಈ ವ್ಯಕ್ತಿ ಬಗ್ಗೆ ಬಹಳ ದ್ವೇಷವಿದೆ ಎಂದು ಗುಡುಗಿದ್ದಾರೆ. ಸಿದ್ದರಾಮಯ್ಯಗೆ ಮೊಟ್ಟೆ ಎಸೆದಿದ್ದು ಯಾರು ? ಅವರೇನು ಬಿಜೆಪಿಯವರಲ್ಲ, ಭಜರಂಗದಳದವರಲ್ಲ, ಶ್ರೀರಾಮಸೇನೆಯವರಲ್ಲ.ಸಿದ್ದರಾಮಯ್ಯ ಹಿಂದೂಗಳ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಹಿಂದುತ್ವದ ಬಗ್ಗೆ ಅಪಮಾನ ಮಾಡಿದ್ದಾರೆ ಎಂಬ ಕಾರಣಕ್ಕೆ ಮೊಟ್ಟೆ ಎಸೆದಿದ್ದಾರೆ ಎಂದು ಹೇಳಿದರು.
ಸಾವರ್ಕರ್ ವಿವಾದಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ನೀಡಿದ್ದ ಹೇಳಿಕೆ ಹಿಂದೂ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿತ್ತು. ಸಿದ್ದರಾಮಯ್ಯ ಮಡಿಕೇರಿ ಪ್ರವಾಸ ಕೈಗೊಂಡಿದ್ದ ವೇಳೆಯಲ್ಲಿಯೇ ಬಿಜೆಪಿ ಕಾರ್ಯಕರ್ತನೋರ್ವ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದಾನೆ. ಇದು ಬಾರೀ ಆಕ್ರೋಶಕ್ಕೆ ಕಾರಣವಾಗಿದೆ.
ಇದನ್ನು ಓದಿ : KS Eshwarappa : ಸಿದ್ದರಾಮಯ್ಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡೋದನ್ನು ನೋಡಬೇಕು : ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವ್ಯಂಗ್ಯ
ಇದನ್ನೂ ಓದಿ : KS Eshwarappa : ಸಿದ್ದರಾಮಯ್ಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡೋದನ್ನು ನೋಡಬೇಕು : ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವ್ಯಂಗ್ಯ
MLA Basan Gowda Patil Yatnal outraged against Siddaramaiah
Comments are closed.