Praveen Nettarus final darshan : ಪ್ರವೀಣ್ ನೆಟ್ಟಾರು ಅಂತಿಮ ದರ್ಶನದಲ್ಲಿ ಹಿಂದೂ ಕಾರ್ಯಕರ್ತರ ಆಕ್ರೋಶ : ಥಂಡಾ ಹೊಡೆದ ಬಿಜೆಪಿ ನಾಯಕರು
ಮಂಗಳೂರು : Praveen Nettaru’s final darshan : ಬಿಜೆಪಿ ಯುವ ಮುಖಂಡ ಹಾಗೂ ಭಜರಂಗದಳದ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಹಿಂದೂ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾದ ಪ್ರವೀಣ್ ನೆಟ್ಟಾರು ಅಂತಿಮ ದರ್ಶನಕ್ಕೆ ಜನ ಸಾಗರವೇ ಹರಿದು ಬಂದಿದ್ದು ಬಿಜೆಪಿ ನಾಯಕರ ಎದುರು ಪ್ರಶ್ನೆಗಳ ಸುರಿಮಳೆಯನ್ನೇ ಹರಿಸಿದ್ದಾರೆ. ಹಿಂದೂ ಕಾರ್ಯಕರ್ತರ ಸಾಲು ಸಾಲು ಪ್ರಶ್ನೆಗಳಿಗೆ ಬಿಜೆಪಿ ನಾಯಕರೇ ಥಂಡಾ ಹೊಡೆದಿದ್ದಾರೆ.
ಸುಳ್ಯ ತಾಲೂಕಿನ ಬೆಳ್ಳಾರೆಯ ಬಸ್ ನಿಲ್ದಾಣದ ಸಮೀಪದಲ್ಲಿ ಪ್ರವೀಣ್ ನೆಟ್ಟಾರು ಮೃತದೇಹದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರವೀಣ್ ನೆಟ್ಟೂರು ಅಂತಿಮ ದರ್ಶನವನ್ನು ಪಡೆಯಲು ಸಾವಿರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಬೆಳ್ಳಾರೆಯತ್ತ ಧಾವಿಸಿದ್ದಾರೆ. ಹಿಂದೂ ಕಾರ್ಯಕರ್ತರು ಬೇಕೆ ಬೇಕೆ ನಮಗೆ ನ್ಯಾಯ ಬೇಕು ಎಂದು ಘೋಷಣೆ ಕೂಗುತ್ತಿರುವ ದೃಶ್ಯಗಳು ಕಂಡು ಬಂದಿದೆ.
ಪ್ರವೀಣ್ ನೆಟ್ಟಾರು ಮೃತ ದೇಹದ ಅಂತಿಮ ದರ್ಶನಕ್ಕೆ ಆಗಮಿಸಿದ ಸಚಿವರಾದ ಸುನೀಲ್ ಕುಮಾರ್, ಎಸ್.ಅಂಗಾರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ಹಿಂದೂ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ. ಹಿಂದೂ ಕಾರ್ಯಕರ್ತನ ಕೊಲೆಗೆ ನಮಗೆ ನ್ಯಾಯ ಕೊಡಿಸಿ, ಆರೋಪಿಗಳನ್ನು ಶಿಕ್ಷಿಸಿ ಎಂದು ಬಿಜೆಪಿ ನಾಯಕರನ್ನು ಸುತ್ತುವರಿದು ಹಿಂದೂ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ಅಲ್ಲದೇ ಪ್ರವೀಣ್ ನೆಟ್ಟಾರು ಹತ್ಯೆ ಆಗುತ್ತೆ ಅಂದಮೇಲೆ ಈ ರಾಜ್ಯದಲ್ಲಿ ನಮಗೆ ಭದ್ರತೆ ಎಲ್ಲಿದೆ ಎಂದು ಹಿಂದೂ ಕಾರ್ಯಕರ್ತರು ಪ್ರಶ್ನೆ ಮಾಡಿದ್ದು ಹಿಂದೂ ಕಾರ್ಯಕರ್ತರ ಸಾಲು ಸಾಲು ಪ್ರಶ್ನೆಗಳಿಗೆ ಉತ್ತರಿಸಲು ಸಾಧ್ಯವಾಗದೇ ಸಚಿವ ಸುನೀಲ್ ಕುಮಾರ್, ಎಸ್. ಅಂಗಾರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಕೈ ಕಟ್ಟಿ ತಲೆ ತಗ್ಗಿಸಿದ ದೃಶ್ಯಗಳು ಕಂಡು ಬಂತು.
ಬೆಳ್ಳಾರೆ ಬಸ್ ನಿಲ್ದಾಣದ ಸಮೀಪ ಪ್ರವೀಣ್ ನೆಟ್ಟಾರು ಅಂತಿಮ ದರ್ಶನ ಪೂರ್ಣಗೊಳ್ಳುತ್ತಿದ್ದಂತೆಯೇ ಅಲ್ಲಿಂದ ಮೃತದೇಹವು ಪ್ರವೀಣ್ ಸ್ವಗ್ರಾಮ ನೆಟ್ಟಾರುವಿಗೆ ತೆರಳಲಿದೆ. ಕುಟುಂಬಸ್ಥರು ಅಂತ್ಯಕ್ರಿಯೆಗೆ ಸಕಲ ಸಿದ್ಧತೆಯನ್ನು ಮಾಡಿಕೊಳ್ತಿದ್ದು ಬಿಲ್ಲವ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಲಿದೆ.
ಇದನ್ನು ಓದಿ : Rahul Dravid: “ರಾಹುಲ್ ದ್ರಾವಿಡ್ ಅಲ್ಲ ರಾಹುಲ್ ‘ಡೇವಿಡ್’..” ದಿ ಗ್ರೇಟ್ ವಾಲ್ ಬಿಚ್ಚಿಟ್ಟ “ಹೆಸರು” ರಹಸ್ಯ
ಇದನ್ನೂ ಓದಿ : Praveen Nettaru murder case: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಐವರು ಶಂಕಿತ ಆರೋಪಿಗಳು ವಶಕ್ಕೆ
Outrage from Hindu activists during Praveen Nettaru’s final darshan
Comments are closed.