ಶಿವಮೊಗ್ಗ : araga jnanendra jeep accident : ಗೃಹ ಸಚಿವ ಆರಗ ಜ್ಞಾನೇಂದ್ರರ ಬೆಂಗಾವಲು ವಾಹನ ಅಪಘಾತವಾಗಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಜಂಕ್ಷನ್ನಲ್ಲಿ ಬೆಂಗಾವಲು ಜೀಪಿಗೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ತುಮಕೂರಿನಿಂದ ತೀರ್ಥಹಳ್ಳಿಗೆ ಬರುತ್ತಿದ್ದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.
ಡಿಕ್ಕಿ ಹೊಡೆದ ಕಾತು ಬೆಂಗಳೂರು ಮಾರ್ಗವಾಗಿ ತೆರಳುತ್ತಿತ್ತು ಎನ್ನಲಾಗಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕೆಎ 14 ಜಿ 1081 ಸಂಖ್ಯೆಯ ಜೀಪು ಅಪಘಾತಕ್ಕೊಳಗಾಗಿದೆ. ಅಪಘಾತದ ರಭಸಕ್ಕೆ ನೀಲಿ ಬಣ್ಣದ ಬೆಂಗಾವಲು ಜೀಪಿನ ಮುಂಭಾಗ ಭಾಗಶಃ ನುಜ್ಜು ಗುಜ್ಜಾಗಿದೆ.
ಇದನ್ನು ಓದಿ : Mangalore : ಸಾರ್ವಕರ್ ಫೋಟೋ ಪ್ರದರ್ಶಿಸಿದ್ದಕ್ಕೆ ಶಾಲಾ ಶಿಕ್ಷಕರ ವಿರುದ್ಧ ಎಸ್ಡಿಪಿಐ,ಕಾಂಗ್ರೆಸ್ ಸದಸ್ಯರ ಆಕ್ರೋಶ
ಇದನ್ನೂ ಓದಿ :Two youths stabbed in Shimoga : ಸಾವರ್ಕರ್ ಫೋಟೋ ವಿವಾದ : ಶಿವಮೊಗ್ಗದಲ್ಲಿ ಇಬ್ಬರು ಯುವಕರಿಗೆ ಚಾಕು ಇರಿತ
shivamogga news araga jnanendra jeep accident
Comments are closed.