ಮೈಸೂರು : Mysore Palace : ಅರಮನೆ ನಗರಿ ಮೈಸೂರಿನಲ್ಲಿ ನಾಡಹಬ್ಬ ಆರಂಭಗೊಳ್ಳಲು ಇನ್ನೇನು ಕೇವಲ ಐದು ದಿನಗಳು ಮಾತ್ರ ಬಾಕಿ ಉಳಿದೆ. ಉಸ್ತುವಾರಿ ಸಚಿವ ಎಸ್,ಟಿ ಸೋಮಶೇಖರ್ , ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಬಿಜೆಪಿ ನಾಯಕರು ದಸರಾ ಕಾರ್ಯಕ್ರಮದ ಪೂರ್ವ ಸಿದ್ಧತೆಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಕಳೆದ ಎರಡು ವರ್ಷಗಳಿಂದ ಕೋವಿಡ್ ಕಾರಣದಿಂದಾಗಿ ಮೈಸೂರು ದಸರಾ ಜಂಬೂ ಸವಾರಿ ಕಾರ್ಯಕ್ರಮಗಳಿಗೆ ಆಚರಣೆಗೊಂಡಿರಲಿಲ್ಲ.ಹೀಗಾಗಿ ಈ ಬಾರಿ ಎಂದಿನಂತೆ ಅತ್ಯಂತ ವಿಜೃಂಭಣೆಯಿಂದ ಮೈಸೂರು ದಸರಾವನ್ನು ಆಯೋಜಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದೆ.
ನಾಡಹಬ್ಬ ಆಚರಣೆ ಹಿನ್ನೆಲೆಯಲ್ಲಿ ಮಂಗಳವಾರ ಮೈಸೂರು ಅರಮನೆ ದರ್ಶನಕ್ಕೆ ಸಾರ್ವಜನಿಕರಿಗೆ ನಿರ್ಬಂಧವನ್ನು ಹೇರಲಾಗಿದೆ. ಅಂಬಾ ವಿಲಾಸ ಅರಮನೆಯು ಈ ಬಾರಿಯ ನಾಡಹಬ್ಬಕ್ಕೆ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಸೆಪ್ಟೆಂಬರ್ 26ರಂದು ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್ನ ಪೂಜಾ ಕಾರ್ಯವನ್ನು ರಾಜವಂಶಸ್ಥರು ನೆರವೇರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ 10 ಗಂಟೆಯಿಂದ 1:30ರವರೆಗೆ ಸಾರ್ವಜನಿಕರಿಗೆ ಮೈಸೂರು ಅರಮನೆಯ ದರ್ಶನವನ್ನು ಪಡೆಯಲು ನಿರ್ಬಂಧ ಹೇರಲಾಗಿದೆ.
ನಾಡಹಬ್ಬ ದಸರಾದಲ್ಲಿ ಜಂಬೂ ಸವಾರಿಗೆ ಎಷ್ಟು ಪ್ರಾಮುಖ್ಯತೆ ಇದೆಯೋ ಅದೇ ರೀತಿ ಖಾಸಗಿ ದರ್ಬಾರ್ ಕೂಡ ಅತ್ಯಂತ ಮಹತ್ವವನ್ನು ಪಡೆದುಕೊಂಡಿದೆ. ಖಾಸಗಿ ದರ್ಬಾರ್ ದಸರಾ ಕಾರ್ಯಕ್ರಮದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿದೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ವಜ್ರಖಚಿತ ಸಿಂಹಾಸನವನ್ನು ಜೋಡಿಸುವ ಕಾರ್ಯವನ್ನು ಮಾಡಲಾಗುತ್ತದೆ. ಇದಕ್ಕಾಗಿ ಮೈಸೂರಿನ ಗೆಜ್ಜಗಳ್ಳಿ ಗ್ರಾಮದಿಂದ ನುರಿತ ಸಿಂಹಾಸನ ಜೋಡಣೆ ಮಾಡುವವರು ಆಗಮಿಸಲಿದ್ದಾರೆ.
ಅಕ್ಟೋಬರ್ ನಾಲ್ಕರಂದೂ ಸಹ ಸಾರ್ವಜನಿಕರಿಗೆ ಮೈಸೂರು ಅರಮನೆ ದರ್ಶನಕ್ಕೆ ನಿರ್ಬಂಧ ಇರಲಿದೆ. ಈ ದಿನದಂದು ರಾಜವಂಶಸ್ಥ ಯದುವೀರ್ ಒಡೆಯುರ್ ಆಯುಧ ಪೂಜೆಯನ್ನು ಅರಮನೆಯಲ್ಲಿ ನೆರವೇರಿಸಲಿದ್ದಾರೆ. ಇದಾಗಿ ಮಾರನೇ ದಿನ ಅಂದರೆ ಅಕ್ಟೋಬರ್ ಐದರಂದು ಯದುವೀರ್ ಒಡೆಯರ್ ವಿಜಯದಶಮಿ ಪೂಜೆಯನ್ನು ಅಂಬಾವಿಲಾಸ ಅರಮನೆಯಲ್ಲಿ ನೆರವೇರಿಸಲಿದ್ದಾರೆ. ಅಕ್ಟೋಬರ್ 20ರಂದು ಸಿಂಹಾಸನ ವಿಸರ್ಜನೆ ಕಾರ್ಯಕ್ರಮ ಇರಲಿದ್ದು ಈ ದಿನ ಕೂಡ ಸಾರ್ವಜನಿಕರು ಅರಮನೆ ಪ್ರವೇಶ ಮಾಡುವಂತಿಲ್ಲ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1:30ರವರೆಗೆ ಸಾರ್ವಜನಿಕರಿಗೆ ಅಂಬಾ ವಿಲಾಸ ಅರಮನೆ ಪ್ರವೇಶಕ್ಕೆ ನಿರ್ಬಂಧ ಇರಲಿದೆ.
ಇದನ್ನೂ ಓದಿ : India Vs Australia T20 : ಮೊಹಾಲಿಯಲ್ಲಿ ನಾಳೆ ಮೊದಲ ಪಂದ್ಯ; ಹೀಗಿದೆ ಭಾರತದ ಪ್ಲೇಯಿಂಗ್ XI
Visiting Mysore Palace will be restricted on these days