ಸೋಮವಾರ, ಜೂನ್ 16, 2025
Homeeducationಬೆಂಗಳೂರಿನ ಶಾಲಾ-ಕಾಲೇಜುಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಬೆಂಗಳೂರಿನ ಶಾಲಾ-ಕಾಲೇಜುಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ

- Advertisement -

ಬೆಂಗಳೂರು : ರಾಜ್ಯಾದ್ಯಂತ ಹಿಜಬ್​ ಹಾಗೂ ಕೇಸರಿ ಶಾಲು ವಿವಾದವು ತಾರಕಕ್ಕೇರಿದೆ. ಆದರೆ ಇದು ರಾಜ್ಯ ರಾಜಧಾನಿಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಕಾರಣವಾಗಬಾರದೆಂದು ಉದ್ದೇಶಿಸಿರುವ ಪೊಲೀಸ್​ ಇಲಾಖೆಯು ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನ ಎಲ್ಲಾ ಶಾಲಾ ಕಾಲೇಜುಗಳ ಪ್ರದೇಶದಲ್ಲಿ ಸೆಕ್ಷನ್​ 144 ನಿಷೇಧಾಜ್ಞೆಯನ್ನು (144 section) ಜಾರಿ ಮಾಡಿದೆ. ಈ ಸಂಬಂಧ ನಗರ ಪೊಲೀಸ್​ ಆಯುಕ್ತರೇ ಅಧಿಕೃತ ಮಾಹಿತಿಯನ್ನು ನೀಡಿದ್ದಾರೆ.


ಇಂದಿನಿಂದ ಫೆಬ್ರವರಿ 22ರವರೆಗೂ ಈ ಆದೇಶ ಜಾರಿಯಲ್ಲಿ ಇರಲಿದೆ. ನಿಷೇಧಾಜ್ಞೆ ಜಾರಿ ಇರುವ ಪ್ರದೇಶಗಳಲ್ಲಿ ಯಾವುದೇ ಕಾರಣಕ್ಕೂ ಪ್ರತಿಭಟನೆ, ರ್ಯಾಲಿಗಳು ನಡೆಯುವಂತಿಲ್ಲ ಎಂದು ಬೆಂಗಳೂರು ನಗರ ಪೊಲೀಸ್​ ಕಮಿಷನರ್​ ಕಮಲ್​ ಪಂತ್​ ಆದೇಶ ಹೊರಡಿಸಿದ್ದಾರೆ.


ಶಾಲೆಗಳು, ಪದವಿ ಪೂರ್ವ ಕಾಲೇಜು, ಪದವಿ ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯ ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಈ ಆದೇಶವು ಅನ್ವಯವಾಗಲಿದೆ. ಸಮವಸ್ತ್ರ ವಿವಾದ ವಿಚಾರದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ಕೊಡಲು ಬಯಸದ ರಾಜ್ಯ ಸರ್ಕಾರವು ಈಗಾಗಲೇ ಶಾಲಾ – ಕಾಲೇಜುಗಳಿಗೆ ಮೂರು ದಿನಗಳ ರಜೆ ಘೋಷಣೆಯನ್ನು ಮಾಡಿದೆ. ಈ ನಡುವೆ ರಾಜ್ಯ ರಾಜಧಾನಿಯಲ್ಲಿ ಇನ್ನೂ ಒಂದು ಹೆಜ್ಜೆ ಮುಂದಡಿ ಇಟ್ಟಿರುವ ಸರ್ಕಾರವು ಎಲ್ಲಾ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ನಿಷೇಧಾಜ್ಞೆಯನ್ನು ಜಾರಿಗೊಳಿಸಿದೆ. ನಿಷೇಧಾಜ್ಞೆಯನ್ನು ಉಲ್ಲಂಘನೆ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ನಗರ ಪೊಲೀಸ್​ ಆಯುಕ್ತ ಕಮಲ್​ ಪಂತ್​ ವಾರ್ನಿಂಗ್​ ನೀಡಿದ್ದಾರೆ.


ಈ ನಡುವೆ ಹಿಜಬ್​ ವಿವಾದವನ್ನು ಪ್ರಶ್ನಿಸಿ ಉಡುಪಿ ವಿದ್ಯಾರ್ಥಿನಿಯರು ಹಾಗೂ ಪೋಷಕರು ಸಲ್ಲಿಸಿದ್ದ ಮೂರು ಪ್ರತ್ಯೇಕ ಅರ್ಜಿಗಳ ವಿಚಾರಣೆಯನ್ನು ನಡೆಸಿದ ರಾಜ್ಯ ಹೈಕೋರ್ಟ್​ ಏಕ ಸದಸ್ಯ ಪೀಠ ಪ್ರಕರಣದ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿಗಳನ್ನೊಳಗೊಂಡ ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದೆ. ಹಾಗೂ ಈ ನಡುವೆ ಯಥಾಸ್ಥಿತಿ ಕಾಯ್ದುಕೊಳ್ಳಿ ಎಂದಿರುವ ಹೈಕೋರ್ಟ್​ ಮುಂದಿನ ಆದೇಶದವರೆಗೂ ಹಿಜಬ್​ ಧರಿಸಿ ಕಾಲೇಜಿಗೆ ಬರುವಂತಿಲ್ಲ ಎಂದು ಹೇಳಿದೆ.

bengalore 144 section impose on school and college

ಇದನ್ನು ಓದಿ : ಶಾಂತಿ ಕಾಪಾಡುವಂತೆ ಮನವಿ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ

ಇದನ್ನೂ ಓದಿ : Hijab Row Karnataka High Court: ಹಿಜಾಬ್-ಕೇಸರಿ ಶಾಲು: ಹೈಕೋರ್ಟ್‌ನಲ್ಲಿ ವಾದ ಪ್ರತಿವಾದ ಹೇಗಿತ್ತು? ಮಂಡನೆಯಾದ ಅಂಶಗಳೇನು?

RELATED ARTICLES

Most Popular