ಭಾನುವಾರ, ಏಪ್ರಿಲ್ 27, 2025
HomeeducationCET Exam 2023 : ಸಿಇಟಿ ಪರೀಕ್ಷೆ ಹಿನ್ನೆಲೆ ಪರೀಕ್ಷಾ ಪ್ರಾಧಿಕಾರದಿಂದ ಮಹತ್ವದ ಘೋಷಣೆ

CET Exam 2023 : ಸಿಇಟಿ ಪರೀಕ್ಷೆ ಹಿನ್ನೆಲೆ ಪರೀಕ್ಷಾ ಪ್ರಾಧಿಕಾರದಿಂದ ಮಹತ್ವದ ಘೋಷಣೆ

- Advertisement -

ಬೆಂಗಳೂರು : ( CET Exam 2023) ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಮೇ 20 ಮತ್ತು 21 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಜ್ಜಾಗಿದೆ. ಈ ನಡುವಲ್ಲೇ ಪರೀಕ್ಷಾ ಪ್ರಾಧಿಕಾರ ಸಿಇಟಿ ಪರೀಕ್ಷೆಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಮಾಡಿದೆ.

ಈ ಬಾರಿಯ ಸಿಇಟಿ ಪರೀಕ್ಷೆಯನ್ನು 2.6 ಲಕ್ಷ ವಿದ್ಯಾರ್ಥಿಗಳು ಬರೆಯಲಿದ್ದಾರೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ತಿಳಿಸಿದ್ದಾರೆ. ರಾಜ್ಯದಲ್ಲಿ ಒಟ್ಟು 592 ಪರೀಕ್ಷಾ ಕೇಂದ್ರಗಳಿದ್ದು, ಬೆಂಗಳೂರಿನಲ್ಲಿ ಒಟ್ಟು 122 ಕೇಂದ್ರಗಳಿವೆ. ಸುಮಾರು 23 ಸಾವಿರ ಸಿಬ್ಬಂದಿ ಪರೀಕ್ಷಾ ಕಾರ್ಯದಲ್ಲಿ ನಿರತರಾಗಿರುತ್ತಾರೆ. ಮತ್ತೊಂದೆಡೆ ನಾಳೆ ಶನಿವಾರ ಮಧ್ಯಾಹ್ನ 12.30ಕ್ಕೆ ರಾಜ್ಯದ ನೂತನ ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭ ಏರ್ಪಡಿಸಿರುವುದರಿಂದ ಪರೀಕ್ಷಾರ್ಥಿಗಳು ಟ್ರಾಫಿಕ್ ಸಮಸ್ಯೆಯಿಂದ ಪರದಾಡುವಂತಾಗಿದೆ.

ಯಾವುದೇ ಸಮಸ್ಯೆಯಾಗದಂತೆ ಎಲ್ಲ ವ್ಯವಸ್ಥೆ ಮಾಡಿದ್ದೇವೆ. ಕಂಠೀರವ ಕ್ರೀಡಾಂಗಣದ ಸುತ್ತಲಿನ ಪರೀಕ್ಷಾ ಕೇಂದ್ರಗಳ ವಿವರವನ್ನು ವೆಬ್‌ಸೈಟ್‌ನಲ್ಲಿ ಹಾಕುತ್ತೇವೆ. ಈ ಕ್ರೀಡಾಂಗಣದ ಸುತ್ತ ಪರೀಕ್ಷಾ ಕೇಂದ್ರಗಳನ್ನು ಹೊಂದಿರುವ ವಿದ್ಯಾರ್ಥಿಗಳು ಎರಡು ಗಂಟೆ ಮುಂಚಿತವಾಗಿ ಬರಬೇಕು ಎಂದು ರಮ್ಯಾ ತಿಳಿಸಿದ್ದಾರೆ. ಅಭ್ಯರ್ಥಿಗಳು 8:30 ರೊಳಗೆ ಪರೀಕ್ಷಾ ಕೇಂದ್ರಗಳಲ್ಲಿ ಹಾಜರಿರಬೇಕು. PCM ಬರೆಯುವ ವಿದ್ಯಾರ್ಥಿಗಳು ಸ್ವಲ್ಪ ಬೇಗ ಬರಬೇಕಾಗಬಹುದು. ಮಧ್ಯಾಹ್ನದ ಪರೀಕ್ಷೆಗೆ ಹಾಜರಾಗುವವರು ಟ್ರಾಫಿಕ್‌ನಲ್ಲಿ ಸಿಲುಕಿಕೊಳ್ಳುವ ಸಾಧ್ಯತೆ ಹೆಚ್ಚು. ಹೀಗಾಗಿ ಬೇಗನೆ ಪರೀಕ್ಷಾ ಕೇಂದ್ರಗಳನ್ನು ಸೇರಿಕೊಳ್ಳುವುದು ಒಳಿತು.

CET Exam 2023 : ಅಭ್ಯರ್ಥಿಗಳಿಗೆ ಮಾರ್ಗಸೂಚಿಗಳು

  • ಅಭ್ಯರ್ಥಿಗಳು ಕಪ್ಪು ಮತ್ತು ನೀಲಿ ಬಣ್ಣದ ಪೆನ್ನುಗಳನ್ನು ತರಬೇಕು.
  • ಕೈಗಡಿಯಾರಗಳು ಮತ್ತು ಆಭರಣಗಳನ್ನು ಧರಿಸುವಂತಿಲ್ಲ
  • ಹಾಫ್ ಸ್ಲೀವ್ ಶರ್ಟ್ ಧರಿಸಬೇಕು
  • ಮರೆಯದೇ ಪ್ರವೇಶ ಪತ್ರ ತರಬೇಕು
  • ಟ್ರಾಫಿಕ್ ಸಮಸ್ಯೆ ಇರುವ ಕಡೆ ಹಾಲ್ಟ್ ಟಿಕೆಟ್ ತೋರಿಸಿ ಕೇಂದ್ರಗಳನ್ನು ತಲುಪಬಹುದು
  • ಸಂಚಾರ ಪೊಲೀಸರನ್ನು ಅನುಮತಿಸಲು ರಸ್ತೆಗಳನ್ನು ಮುಚ್ಚಲಾಗಿದೆ
  • ಹಾಲ್ ಟಿಕೆಟ್ ತೋರಿಸಬೇಕು. ಜನಸಂದಣಿಯಿಂದ ಪೋಷಕರಿಗೂ ವಿರಾಮ ಸಿಗುತ್ತದೆ.

ಇದರ ಜೊತೆಗೆ ಈಗಾಗಲೇ ಮಕ್ಕಳಿಗೆ ಬಲ್ಕ್ ಸಂದೇಶಗಳನ್ನು ಕಳುಹಿಸಲಾಗುತ್ತಿದೆ. ಅಲ್ಲದೆ ದೂರವಾಣಿ ಕರೆ ಮೂಲಕ ವಿದ್ಯಾರ್ಥಿಗಳನ್ನು ಸಂಪರ್ಕಿಸಿ. ಸೇಂಟ್ ಜೋಸೆಫ್ ಕಾಲೇಜು ಕೇಂದ್ರದ ಅಭ್ಯರ್ಥಿಗಳು ಬಹಳಷ್ಟು ಸಮಸ್ಯೆಗಳನ್ನು ಎದುರಿಸುವ ಸಾಧ್ಯತೆಯಿದೆ. ಹಾಗಾಗಿ ಈ ಕೇಂದ್ರದ ವಿದ್ಯಾರ್ಥಿಗಳು ಸ್ವಲ್ಪ ಬೇಗ ಬರಬೇಕು. ಸಿಇಟಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಸಂಚಾರ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ ಎಂದು ರಮ್ಯಾ ಭರವಸೆ ನೀಡಿದ್ದಾರೆ.

ಇದನ್ನೂ ಓದಿ : ನಾಳೆಯಿಂದ ಸಿಇಟಿ ಪರೀಕ್ಷೆ : ಉಡುಪಿ ಜಿಲ್ಲೆಯಲ್ಲಿ 5,712 ವಿದ್ಯಾರ್ಥಿಗಳು

ಇದನ್ನೂ ಓದಿ : Big Breaking : 2000 ರೂಪಾಯಿ ನೋಟ್‌ ಹಿಂಪಡೆದ ಆರ್‌ಬಿಐ

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular