ಬೆಂಗಳೂರು : ತಾಂತ್ರಿಕ ಕಾರಣದ ಹಿನ್ನೆಲೆಯಲ್ಲಿ ನಾಳೆ ಪ್ರಕಟವಾಗಬೇಕಿದ್ದ ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶವನ್ನು ಮುಂದೂಡಿಕೆ ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಹೇಳಿದ್ದಾರೆ.
ರಾಜ್ಯದಲ್ಲಿ ಸಿಇಟಿ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಅಗಸ್ಟ್ 20ರಂದು ಪ್ರಕಟಿಸಲಾಗುವುದು ಎಂದು ಘೋಷಣೆ ಮಾಡಲಾಗಿತ್ತು. ಇದೀಗ ಪ್ರವೇಶ ಪರೀಕ್ಷೆ ಫಲಿತಾಂಶವನ್ನು ಒಂದು ದಿನ ಮುಂದೂಡಿಕೆ ಮಾಡಲಾಗಿದ್ದು. ಅಗಸ್ಟ್ 21ರ ಶುಕ್ರವಾರ ಮಧ್ಯಾಹ್ನ 12.30ಕ್ಕೆ ಪ್ರಕಟವಾಗಲಿದೆ.
ಸಿಟಿಇ ಫಲಿತಾಂಶವನ್ನು ವಿದ್ಯಾರ್ಥಿಗಳು http://karresults.nic.in ನಲ್ಲಿ ಪಡೆಯಬಹುದಾಗಿದೆ. ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಈ ವರ್ಷ ಅಕ್ಟೋಬರ್ ಒಳಗೆ ಆನ್ಲೈನ್ ಕೌನ್ಸೆಲಿಂಗ್ ನಡೆಸುವುದಾಗಿ ಇಲಾಖೆ ಘೋಷಿಸಿದ್ದು, ವಿದ್ಯಾರ್ಥಿಗಳು ತಾವು ಇದ್ದ ಜಾಗದಿಂದಲೇ ಕೌನ್ಸೆಲಿಂಗ್ ಎದುರಿಸಬಹುದಾಗಿದೆ.