ಭಾನುವಾರ, ಏಪ್ರಿಲ್ 27, 2025
HomeBreakingರಾಜ್ಯಾದ್ಯಂತ 6-9ನೇ ತರಗತಿಗಳು ಬಂದ್ : ರಾಜ್ಯ ಸರಕಾರದ ಅಧಿಕೃತ ಆದೇಶ

ರಾಜ್ಯಾದ್ಯಂತ 6-9ನೇ ತರಗತಿಗಳು ಬಂದ್ : ರಾಜ್ಯ ಸರಕಾರದ ಅಧಿಕೃತ ಆದೇಶ

- Advertisement -

ಬೆಂಗಳೂರು :  ಕೊರೊನಾ ವೈರಸ್ ಎರಡನೇ ಅಲೆಯ ಹಿನ್ನೆಲೆಯಲ್ಲಿ 6-9ನೇ‌ ತರಗತಿಗಳನ್ನು ಬಂದ್ ಮಾಡಿ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ.

ರಾಜ್ಯದಲ್ಲಿನ ಸರಕಾರಿ, ಅನುದಾನಿತ ಹಾಗೂ ಅನುದಾನ‌ರಹಿತ ಶಾಲೆಗಳಲ್ಲಿನ 6-9ನೇ ತರಗತಿಗಳನ್ನು ಬಂದ್ ಮಾಡಲಾಗಿದ್ದು ಮುಂದಿನ ಆದೇಶದ ವರೆಗೆ ತರಗತಿ ನಡೆಸದಂತೆ ಸರಕಾರ ಆದೇಶಿಸಿದೆ. ಆದರೆ ಅನ್ ಲೈನ್ ತರಗತಿ ನಡೆಸಲು ಅವಕಾಶ ಕಲ್ಪಿಸಲಾಗಿದ್ದು, 10, 11 ಹಾಗೂ‌ 12ನೇ‌ ತರಗತಿಗಳು ಎಂದಿನಂತೆ ನಡೆಯಲಿದೆ.

ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಈ ನಿರ್ಧಾರಕ್ಕೆ ಬರಲಾಗಿದ್ದು, ಎಸ್ಎಸ್ಎಲ್ ಸಿ ತರಗತಿಗಳು ನಡೆಯುತ್ತಿದ್ದರೂ ಕೂಡ ತರಗತಿಗಳಿಗೆ ಕಡ್ಡಾಯ ಹಾಜರಾತಿಯಿಂದ ವಿನಾಯಿತಿ ನೀಡಲಾಗಿದೆ. 6 – 9 ನೇ‌‌ ತರಗತಿಗಳಿಗೆ ಸಂಬಂಧಿಸಿದಂತೆ ಮೌಲ್ಯಾಂಕನ ಪರೀಕ್ಷೆಗಳಿಗೆ ನಡೆಸುವ ಕುರಿತು ಮುಂದಿನ ದಿನಗಳಲ್ಲಿ ಕ್ರಮಕೈಗೊಳ್ಳುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular