ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಶೈಕ್ಷಣಿಕ ವರ್ಷ ವಿಳಂಭವಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಶಾಲಾ ಪಠ್ಯಗಳಲ್ಲಿ ಶೇ.30ರಷ್ಟು ಕಡಿತ ಮಾಡಲಾಗುತ್ತಿದೆ. ಇದೀಗ ಪಠ್ಯ ಕಡಿತದ ನಡುವಲ್ಲೇ ವಿವಾದಕ್ಕೆ ಕಾರಣವಾಗಿದ್ದ ಟಿಪ್ಪು ಸುಲ್ತಾನ್ ಪಾಠವನ್ನು ಕೈಬಿಡಲಾಗಿದೆ.

ಇನ್ನೂ ಮೂರು ತಿಂಗಳು ಶೈಕ್ಷಣಿಕ ವರ್ಷ ನಡೆಸುವುದು ಕಷ್ಟಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ನವೆಂಬರ್ ಅಥವಾ ಡಿಸೆಂಬರ್ ತಿಂಗಳಿನಿಂದ ಶಾಲೆಗಳನ್ನು ಪುನರಾರಂಭಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಶೇ.30ರಷ್ಟು ಪಠ್ಯಗಳನ್ನು ಕಡಿತಗೊಳಿಸಲಾಗಿದೆ. ಹೀಗಾಗಿ ಶಾಲಾ ಪಠ್ಯಗಳನ್ನು ಕಡಿತಗೊಳಿಸಲು ಸಮಿತಿಯೊಂದನ್ನು ರಚಿಸಲಾಗಿದೆ.

ಸಮಿತಿಯ ಶಿಫಾರಸ್ಸಿನಂತೆ ವಿವಾದಕ್ಕೆ ಕಾರಣವಾಗಿದ್ದ ಟಿಪ್ಪು ಪಾಠವನ್ನು 7ನೇ ತರಗತಿಯ ಪಠ್ಯದಿಂದ ಕೈಬಿಡಲಾಗಿದೆ. ಆದರೆ 6ನೇ ತರಗತಿ ಹಾಗೂ 10ನೇ ತರಗತಿಯಲ್ಲಿ ಪಠ್ಯವನ್ನು ಮುಂದುವರಿಸಲಾಗುತ್ತದೆ.

ಶಾಲಾ ಪಠ್ಯದಿಂದ ಟಿಪ್ಪು ಸುಲ್ತಾನ್ ಪಾಠವನ್ನು ಕೈಬಿಡಬೇಕೆಂದು ಸರಕಾರದ ಮೇಲೆ ಒತ್ತಡ ಹೇರಲಾಗಿತ್ತು. ಆದರೆ ರಾಜ್ಯ ಸರಕಾರ ಮಾತ್ರ ಪಠ್ಯವನ್ನು ಕಡಿತ ಮಾಡಿರಲಿಲ್ಲ. ಇದೀಗ ಕೊರೊನಾ ಹಿನ್ನೆಲೆಯಲ್ಲಿ ಟಿಪ್ಪು ಪಾಠಕ್ಕೆ ಕೋಕ್ ಕೊಡಲಾಗಿದೆ.