ಸೋಮವಾರ, ಜೂನ್ 16, 2025
HomeeducationSchool Reopen : 22 ರಾಜ್ಯಗಳಲ್ಲಿ ಶಾಲಾರಂಭ : ಶೇ. 92ರಷ್ಟು ಶಿಕ್ಷಕರಿಗೆ ಲಸಿಕೆ ಪೂರ್ಣ

School Reopen : 22 ರಾಜ್ಯಗಳಲ್ಲಿ ಶಾಲಾರಂಭ : ಶೇ. 92ರಷ್ಟು ಶಿಕ್ಷಕರಿಗೆ ಲಸಿಕೆ ಪೂರ್ಣ

- Advertisement -

ನವದೆಹಲಿ : ಕೊರೊನಾ ವೈರಸ್‌ ಸೋಂಕಿನ ಪ್ರಕರಣಗಳು ಕಡಿಮೆಯಾದ ಬೆನ್ನಲ್ಲೇ ದೇಶದಲ್ಲಿ ಸುಮಾರು 22 ರಾಜ್ಯಗಳಲ್ಲಿ ಶಾಲಾರಂಭಗೊಂಡಿದೆ. ಅಲ್ಲದೇ ದೇಶಾದ್ಯಂತ 92% ಕ್ಕಿಂತ ಹೆಚ್ಚು ಬೋಧನಾ ಸಿಬ್ಬಂದಿ ಕೋವಿಡ್ -19 ವಿರುದ್ಧ ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ. ಶಿಕ್ಷಣ ಸಂಸ್ಥೆಗಳು ಸಹಜ ಸ್ಥಿತಿಗೆ ಮರಳಬೇಕೆಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಕರೆ ನೀಡಿದ್ದಾರೆ.

ಶಿಕ್ಷಣ ಮತ್ತು ಕೌಶಲ್ಯ ಪರಿಸರ ವ್ಯವಸ್ಥೆಗೆ ಸಂಬಂಧಿಸಿದ ಶಾಲೆಗಳು, ಸಂಸ್ಥೆಗಳು ಮತ್ತು ಕೌಶಲ್ಯ ಕೇಂದ್ರಗಳ ಬೋಧನೆ ಮತ್ತು ಬೋಧಕೇತರ ಸಿಬ್ಬಂದಿಗಳ ಲಸಿಕೆ ಪ್ರಗತಿಯನ್ನು ಪರಿಶೀಲಿಸಲಾಗಿದೆ. ದೇಶದಲ್ಲಿ ಕ್ಷಿಪ್ರ ವ್ಯಾಕ್ಸಿನೇಷನ್‌ನೊಂದಿಗೆ, ನಮ್ಮ ಶಾಲೆಗಳು ಮತ್ತು ಇತರ ಶೈಕ್ಷಣಿಕ ಮತ್ತು ಕೌಶಲ್ಯ ಸಂಸ್ಥೆಗಳಲ್ಲಿ ಮರುಸ್ಥಾಪಿತ ಸಹಜತೆ ಮತ್ತು ಚೈತನ್ಯದೊಂದಿಗೆ ನಾವು ಭವಿಷ್ಯವನ್ನು ನೋಡುತ್ತಿದ್ದೇವೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಶಿಕ್ಷಣ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ, ದೇಶದಾದ್ಯಂತ 92% ಕ್ಕಿಂತ ಹೆಚ್ಚು ಬೋಧಕ ಸಿಬ್ಬಂದಿಗೆ ಲಸಿಕೆ ನೀಡಲಾಗಿದ್ದು, ಕೇಂದ್ರ ಸರ್ಕಾರ ನಡೆಸುವ ಸಂಸ್ಥೆಗಳು ತಮ್ಮ ಬೋಧನಾ ಸಿಬ್ಬಂದಿಗಳಲ್ಲಿ 96% ಲಸಿಕೆಯನ್ನು ನೀಡುವ ದಾಖಲೆಯನ್ನು ಮಾಡಲಾಗಿದೆ. ಇನ್ನು ದೇಶದಾದ್ಯಂತ ಶಾಲೆಗಳಲ್ಲಿ ತೊಡಗಿರುವ 86% ಬೋಧಕೇತರ ಸಿಬ್ಬಂದಿಗೆ ಲಸಿಕೆಯನ್ನು ಹಾಕಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿ, ಹರಿಯಾಣ, ಉತ್ತರ ಪ್ರದೇಶ, ಮಹಾರಾಷ್ಟ್ರ, ಕೇರಳ ಮತ್ತು ಅಸ್ಸಾಂ ಸೇರಿದಂತೆ 22 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಲ್ಲಿ 1 ರಿಂದ 12 ನೇ ತರಗತಿಗಳಿಗೆ ಶಾಲೆಗಳನ್ನು ಪುನಃ ತೆರೆದಿವೆ. ಜಮ್ಮು ಮತ್ತು ಕಾಶ್ಮೀರ, ಒಡಿಶಾ, ಅರುಣಾಚಲ ಪ್ರದೇಶ, ಗೋವಾ ಮತ್ತು ಪುದುಚೇರಿ ಸೇರಿದಂತೆ ಆರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು 9 ರಿಂದ 12 ನೇ ತರಗತಿಗಳಿಗೆ ಶಾಲೆಗಳನ್ನು ಪುನರಾರಂಭಿಸಿವೆ ಎಂದಿದ್ದಾರೆ.

ಇನ್ನು ಲಡಾಖ್, ಗುಜರಾತ್, ಪಂಜಾಬ್, ನಾಗಾಲ್ಯಾಂಡ್ ಮತ್ತು ಜಾರ್ಖಂಡ್ ನಲ್ಲಿ ಶಾಲೆಗಳು ಪುನರಾರಂಭ ಆಗಿದ್ದರೂ, ಪಶ್ಚಿಮ ಬಂಗಾಳ ಮತ್ತು ಮಣಿಪುರ ಮಾತ್ರ ಇನ್ನೂ ಶಾಲೆ ಗಳನ್ನು ಪುನರಾರಂಭಿಸಿಲ್ಲ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಳೆದ ವಾರ ನವೆಂಬರ್ 16 ರಿಂದ 9 ರಿಂದ 12 ನೇ ತರಗತಿಗಳಿಗೆ ಶಾಲೆಗಳನ್ನು ತೆರೆಯಲಾಗುವುದು ಎಂದು ಘೋಷಿಸಿದ್ದಾರೆ. ಆದರೆ ಮಣಿಪುರ ಮಾತ್ರ ಶಾಲಾರಂಭದ ಕುರಿತು ಯಾವುದೇ ಮಾಹಿತಿಯನ್ನೂ ನೀಡಿಲ್ಲ.

ದೇಶದಲ್ಲಿ ಕೊರೊನಾ ವೈರಸ್‌ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಮಾರ್ಚ್ 2020 ರಿಂದ ಶಾಲೆಗಳು ಬಂದ್‌ ಆಗಿದ್ದು, ಕಳೆದ ವರ್ಷ ಅಕ್ಟೋಬರ್‌ನಲ್ಲಿ ಕೋವಿಡ್ -19 ಪರಿಸ್ಥಿತಿ ಯನ್ನು ಗಮನದಲ್ಲಿಟ್ಟುಕೊಂಡು ಮತ್ತೆ ತೆರೆಯುವ ಬಗ್ಗೆ ನಿರ್ಧರಿಸಲು ಕೇಂದ್ರವು ರಾಜ್ಯ ಸರ್ಕಾರಗಳಿಗೆ ಅವಕಾಶ ನೀಡಿತ್ತು. ಹಲವಾರು ರಾಜ್ಯಗಳು ಭಾಗಶಃ ದೈಹಿಕ ತರಗತಿಗಳನ್ನು ಪುನರಾರಂಭಿಸಿದರೂ, ಈ ವರ್ಷದ ಏಪ್ರಿಲ್‌ನಲ್ಲಿ ರೋಗದ ಎರಡನೇ ಅಲೆಯು ದೇಶವನ್ನು ಹೊಡೆದ ನಂತರ ಮತ್ತೆ ಸಂಪೂರ್ಣ ಮುಚ್ಚಲಾಗಿತ್ತು. ಈ ವರ್ಷದ ಅಗಸ್ಟ್‌ ತಿಂಗಳಿನಿಂದ ಶಿಕ್ಷಕರಿಗೆ ಕೊರೊನಾ ಲಸಿಕೆಯನ್ನು ಹಾಕಿಸಿ ಮತ್ತೆ ಶಾಲೆಗಳನ್ನು ತೆರೆಯುವ ಕಾರ್ಯವನ್ನು ಮಾಡಲಾಗಿದೆ.

ಕೊರೊನಾ ಲಸಿಕೆ ನೀಡುವ ವಿಚಾರದಲ್ಲಿ ಕೇಂದ್ರ ಸರಕಾರ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಈಗಾಗಲೇ ನೂರು ಕೋಟಿ ಭಾರತೀಯರಿಗೆ ಕೊರೊನಾ ಲಸಿಕೆಯನ್ನು ನೀಡುವ ಕಾರ್ಯವನ್ನು ಮಾಡಲಾಗಿದೆ.

ಇದನ್ನೂ ಓದಿ : ಕೊರೊನಾ 3ನೇ ಅಲೆ ಅಬ್ಬರ : ಶಾಲೆ ಸ್ಥಗಿತದ ಬಗ್ಗೆ ಶಿಕ್ಷಣ ಸಚಿವರ ಮಹತ್ವದ ಮಾಹಿತಿ

ಇದನ್ನೂ ಓದಿ : KSET ಪರೀಕ್ಷೆ ಫಲಿತಾಂಶ ಪ್ರಕಟ : ಸಹಾಯಕ ಉಪನ್ಯಾಸ ಹುದ್ದೆಗೆ ಅರ್ಹತೆ ಪಡೆದ 4779 ಮಂದಿ

(22 states reopen schools, 92% teachers vaccinated )

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular