ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟ : ರಿಸಲ್ಟ್​ ನೋಡಲು ಹೀಗೆ ಮಾಡಿ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ರಾಜ್ಯಾದ್ಯಂತ ಇಂದು 2025-26ನೇ ಸಾಲಿನ ಪ್ರಥಮ ಪಿ.ಯು.ಸಿ (first puc result 2026) ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸಿದೆ. ಇದೇ ವರ್ಷದ ಪೆಭ್ರವರಿ ಹಾಗೂ ಮಾರ್ಚ್ ತಿಂಗಳಲ್ಲಿ ನಡೆದ ಪರೀಕ್ಷೆಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಪ್ರಸ್ತುತ ಈ ಪರೀಕ್ಷೆಯ ಫಲಿತಾಂಶವು ಆನ್​ಲೈನ್​ನಲ್ಲಿ ಲಭ್ಯವಿದೆ.

ಪ್ರಥಮ ಪಿಯುಸಿ ಪರೀಕ್ಷಾ ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳು karresults.nic.in ವೆಬ್​ಸೈಟ್​ನಲ್ಲಿ ತಮ್ಮ ಜನ್ಮದಿನಾಂಕ ಹಾಗೂ ನೋಂದಣಿ ಸಂಖ್ಯೆಯನ್ನು ನಮೂದಿಸುವ ಮೂಲಕ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಆನ್​ಲೈನ್​ನಲ್ಲಿ ಫಲಿತಾಂಶಗಳು ಲಭ್ಯವಿರುವುದು ಮಾತ್ರವಲ್ಲದೇ, ಕಾಲೇಜುಗಳಲ್ಲಿಯೂ ವಿದ್ಯಾರ್ಥಿಗಳಿಗೆ ತಮ್ಮ ಫಲಿತಾಂಶ ಪರೀಕ್ಷಿಸಲು ಅವಕಾಶ ನೀಡಲಾಗಿದೆ.

ತಮ್ಮ ಪ್ರಥಮ ಪಿಯುಸಿ ಮಾರ್ಕ್ಸ್​ ಕಾರ್ಡ್​ಗಳನ್ನು ಡೌನ್​ಲೋಡ್​ ಮಾಡಿಕೊಳ್ಳಲು ಮಂಡಳಿಯು ಸರಳ ವಿಧಾನಗಳ್ನು ನೀಡಿದೆ. ಇದಕ್ಕಾಗಿ ವಿದ್ಯಾರ್ಥಿಗಳು ಅಧಿಕೃತ ವೆಬ್​ಸೈಟ್​ನಲ್ಲಿ PUC Annual Exam Result 2026’ ಲಿಂಕ್​ ಮೇಲೆ ಕ್ಲಿಕ್​ ಮಾಡಬೇಕಿದೆ. ಇದಾದ ಬಳಿಕ ತಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಬಳಿಕ ವಿಜ್ಞಾನ, ಕಲೆ ಅಥವಾ ವಾಣಿಜ್ಯ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು. ಇದಾದ ಬಳಿಕ ಪರದೆಯಲ್ಲಿ ನಿಮ್ಮ ಫಲಿತಾಂಶ ಪ್ರಕಟಗೊಳ್ಳಲಿದೆ. ಇದನ್ನು ನೀವು ಭವಿಷ್ಯದ ಬಳಕೆಗಾಗಿ ಡೌನ್​ಲೋಡ್​ ಮಾಡಿಕೊಳ್ಳಬಹುದಾಗಿದೆ.

ಲಕ್ಷಾಂತರ ವಿದ್ಯಾರ್ಥಿಗಳು ಇಂದು ಫಲಿತಾಂಶ ವೀಕ್ಷಣೆಗೆ ವೆಬ್​ಸೈಟ್​ಗೆ ಲಾಗಿನ್​ ಆಗುವುದರಿಂದ ತಾತ್ಕಾಲಿಕ ತಂತ್ರಾಶದ ಸಮಸ್ಯೆ ಎದುರಾಗಬಹುದು ಎಂದು ಶಿಕ್ಷಣ ಮಂಡಳಿ ತಿಳಿಸಿದೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು ದೃತಿಗೆಡದೇ ತಾಳ್ಮೆಯಿಂದ ಫಲಿತಾಂಶಕ್ಕಾಗಿ ಕಾಯಬೇಕು. ವೆಬ್​ಸೈಟ್​ನಲ್ಲಿ ಫಲಿತಾಂಶ ವೀಕ್ಷಣೆ ಸಾಧ್ಯವಾಗದೇ ಹೋದಲ್ಲಿ ನೇರವಾಗಿ ನಿಮ್ಮ ಕಾಲೇಜುಗಳಿಗೆ ತೆರಳಿ ಫಲಿತಾಂಶ ಪರಿಶೀಲಿಸುವಂತೆ ಸೂಚನೆ ನೀಡಲಾಗಿದೆ.
ಪರೀಕ್ಷಾ ಅಂಕಗಳ ಮೇಲೆ ಅಸಮಾಧಾನ ಇರುವ ವಿದ್ಯಾರ್ಥಿಗಳಿಗೆ ತಮ್ಮ ಉತ್ತರ ಪತ್ರಿಕೆಯ ಪುನರ್​ಪರಿಶೀಲನೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನ ಮತ್ತು ಮರು-ಎಣಿಕೆಗೆ ನಿಬಂಧನೆಗಳನ್ನು ನೀಡಲಾಗಿದ್ದು, ಅಭ್ಯರ್ಥಿಗಳು ಕೆಎಸ್ಇಎಬಿ ನಿಗದಿಪಡಿಸಿದ ಸಮಯದೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಪ್ರಕ್ರಿಯೆಗೆ ಸಂಬಂಧಿಸಿದ ವಿವರವಾದ ಮಾರ್ಗಸೂಚಿಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವ ನಿರೀಕ್ಷೆಯಿದೆ.

ಇದನ್ನೂ ಓದಿ: ದ್ವಿತೀಯ ಪಿಯುಸಿ ಫಲಿತಾಂಶ ಯಾವಾಗ? ದಿನಾಂಕ, ವೆಬ್‌ಸೈಟ್‌ ಮಾಹಿತಿ ಇಲ್ಲಿದೆ ನೋಡಿ

ಈ ನಡುವೆ, ಒಂದು ಅಥವಾ ಹೆಚ್ಚಿನ ವಿಷಯಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗಳಿಗೆ ಹಾಜರಾಗಲು ಅವಕಾಶ ನೀಡಲಾಗುವುದು ಎಂದು ಪರೀಕ್ಷಾ ಮಂಡಳಿ ತಿಳಿಸಿದೆ. ಈ ಪರೀಕ್ಷೆಗಳ ಅಧಿಕೃತ ವೇಳಾಪಟ್ಟಿಯನ್ನು ಇನ್ನೂ ಘೋಷಿಸಲಾಗಿಲ್ಲವಾದರೂ, ಹಿಂದಿನ ಶೈಕ್ಷಣಿಕ ವರ್ಷಗಳ ಮಾದರಿಯನ್ನು ಅನುಸರಿಸಿ ಮುಂದಿನ ಎರಡು ತಿಂಗಳೊಳಗೆ ಅವುಗಳನ್ನು ನಡೆಸುವ ಸಾಧ್ಯತೆಯಿದೆ.

ಹೀಗಾಗಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ದೃತಿಗೆಡದೇ, ಮರುಮೌಲ್ಯಮಾಪನ ಅಥವಾ ಪೂರಕ ಪರೀಕ್ಷೆಗಳ ಮೂಲಕ ಮತ್ತೊಮ್ಮೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಾಧ್ಯವಿದೆ. ಈ ಸಂದರ್ಭದಲ್ಲಿ ಉಪನ್ಯಾಸಕರು ಹಾಗೂ ಪೋಷಕರು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಬೇಕು ಎಂದು ಶಿಕ್ಷಣ ತಜ್ಞರು ಮನವಿ ಮಾಡಿದ್ದಾರೆ.

ರಶ್ಮಿ ಎಸ್. | Rashmi S.

ರಶ್ಮಿ ಎಸ್. ನ್ಯೂಸ್‌ ನೆಕ್ಸ್ಟ್‌ ಕನ್ನಡ ( News Next Kannada) ದಲ್ಲಿ ಕಂಟೆಂಟ್‌ ರೈಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ಹತ್ತು ವರ್ಷಗಳ ಕಾಲ ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ರಾಜಕೀಯ, ಕ್ರೀಡೆ, ವಾಣಿಜ್ಯ, ಸಿನಿಮಾ, ಸ್ಥಳೀಯ ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರೆ. More »

Related Stories