ಮಂಗಳವಾರ, ಜೂನ್ 17, 2025
Homeeducation1ನೇ ತರಗತಿ ದಾಖಲಾತಿಗೆ ವಯೋಮಿತಿ ಹೆಚ್ಚಳ : ರಾಜ್ಯ ಸರಕಾರದ ಆದೇಶದಲ್ಲೇನಿದೆ ?

1ನೇ ತರಗತಿ ದಾಖಲಾತಿಗೆ ವಯೋಮಿತಿ ಹೆಚ್ಚಳ : ರಾಜ್ಯ ಸರಕಾರದ ಆದೇಶದಲ್ಲೇನಿದೆ ?

- Advertisement -

ಬೆಂಗಳೂರು : ಮಕ್ಕಳನ್ನು ಶಾಲೆಗೆ ದಾಖಲು ಮಾಡುವ ಕನಿಷ್ಠ ವಯೋಮಿತಿಗೆ ಸಂಬಂಧಿಸಿದಂತೆ (raises minimum age limit) ರಾಜ್ಯ ಸರಕಾರ ಹೊಸ ಆದೇಶವನ್ನು ಹೊರಡಿಸಿದೆ. ಹೊಸ ಆದೇಶ ಅನ್ವಯ 1ನೇ ತರಗತಿ ದಾಖಲಾತಿ ಪಡೆಯಬೇಕಾದ್ರೆ ಮಕ್ಕಳಿಗೆ ಕಡ್ಡಾಯವಾಗಿ 6 ವರ್ಷ ಪೂರ್ಣಗೊಂಡಿರಬೇಕು ಎಂದು ತಿಳಿಸಿದೆ.

ರಾಜ್ಯ ಸರಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ಹೊರಡಿಸಿರುವ ಆದೇಶದ ಆರ್ ಟಿ ಇ ಕಾಯ್ದೆ 2009 ಮತ್ತು ಕಡ್ಡಾಯ ಶಿಕ್ಷಣ ನಿಯಮಗಳು 2012ರಂತೆ ಶೈಕ್ಷಣಿಕ ವರ್ಷದ ಜೂನ್ 1 ರಂದು ಕಡ್ಡಾಯವಾಗಿ 6 ವರ್ಷ ಪೂರ್ಣಗೊಂಡಿರಬೇಕು. ಈ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಮಕ್ಕಳಿಗೆ 5.5 ವರ್ಷ ಆಗಿದ್ದರು ಕೂಡ ಪ್ರವೇಶಾವಕಾಶವನ್ನು ನೀಡಲಾಗುತ್ತಿತ್ತು. ಆದ್ರೀಗ ಕನಿಷ್ಠ ವಯೋಮಿತಿಯನ್ನು ಹೆಚ್ಚಳ ಮಾಡಲಾಗಿದ್ದು, ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರಬೇಕು.

Karnataka Government raises minimum age limit 6 years for admission to class 1

ರಾಜ್ಯ ಸರಕಾರ ಎಲ್‌ಕೆಜಿ, ಯುಕೆಜಿ ದಾಖಲಾತಿಗೆ ವಯಸ್ಸನ್ನು ನಿಗದಿ ಪಡಿಸಿತ್ತು. ಆಲ್ಲದೇ ಒಂದನೇ ತರಗತಿ ಪ್ರವೇಶಾವಕಾಶಕ್ಕೆ ವಯೋಮಿತಿಯಲ್ಲಿ ಸಡಿಲಿಕೆಯನ್ನು ಮಾಡಲಾಗಿತ್ತು. ಈ ಕುರಿತು ಕಳೆದ ಎರಡು ವರ್ಷಗಳ ಹಿಂದೆಯೇ ಆದೇಶವೊಂದನ್ನು ಹೊರಡಿಸಲಾಗಿತ್ತು. ಹಳೆಯ ಆದೇಶವನ್ನು ರಾಜ್ಯ ಸರಕಾರ ರದ್ದುಗೊಳಿಸಿದೆ.

Karnataka Government raises minimum age limit 6 years for admission to class 1

ಇದನ್ನೂ ಓದಿ : karnataka cet : ಜುಲೈ 30ರಂದು ಸಿಇಟಿ ಫಲಿತಾಂಶ ಪ್ರಕಟ : ಸಚಿವ ಡಾ.ಸಿ.ಎನ್​ ಅಶ್ವತ್ಥ ನಾರಾಯಣ ಮಾಹಿತಿ

ಜುಲೈ 30ರಂದು ಸಿಇಟಿ ಫಲಿತಾಂಶ ಪ್ರಕಟ : ಸಚಿವ ಡಾ.ಸಿ.ಎನ್​ ಅಶ್ವತ್ಥ ನಾರಾಯಣ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ನಡೆದಿರುವ ಸಿಇಟಿ ಪರೀಕ್ಷೆಯ ಫಲಿತಾಂಶಗಳನ್ನು ಜುಲೈ 30ರಂದು ಪ್ರಕಟಿಸುವುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್​ ಅಶ್ವತ್ಥ ನಾರಾಯಣ ಮಾಹಿತಿ ನೀಡಿದ್ದಾರೆ. ಜೂನ್​ ಮಧ್ಯ ವಾರದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಲಾಗಿತ್ತು. ಇಂದು ಸಚಿವ ಡಾ.ಸಿ.ಎನ್​ ಅಶ್ವತ್ಥ ನಾರಾಯಣ ಫಲಿತಾಂಶ ಘೋಷಣೆಯ ದಿನಾಂಕವನ್ನು ಪ್ರಕಟಿಸಿದ್ದಾರೆ.

ಪರೀಕ್ಷಾ ಅಕ್ರಮಗಳು ಬೆಳಕಿಗೆ ಬರುತ್ತಿರುವ ಬೆನ್ನಲ್ಲೇ ಈ ಬಾರಿ ಸಿಇಟಿ ಪರೀಕ್ಷೆಗಳನ್ನು ಅತ್ಯಂತ ಕಟ್ಟುನಿಟ್ಟಾಗಿ ಹಾಗೂ ಭದ್ರತೆಗಳ ಸಮೇತ ನಡೆಸಲಾಗಿತ್ತು. ಈ ಬಾರಿ ಸಿಬಿಎಸ್​ಇ ಹಾಗೂ ಐಸಿಎಸ್​ಇ ಪಠ್ಯ ಕ್ರಮದ ವಿದ್ಯಾರ್ಥಿಗಳಿಗೂ ಜೂನ್​ ಮಧ್ಯಭಾಗದಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಕುಳಿತುಕೊಳ್ಳಲು ಅವಕಾಶವನ್ನು ನೀಡಲಾಗಿತ್ತು. ವಿದ್ಯಾರ್ಥಿಗಳು ಜುಲೈ 26ರರ(ಮಂಗಳವಾರ) ಒಳಗಾಗಿ ತಮ್ಮ ಅಂಕಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್​ಸೈಟ್​ನಲ್ಲಿ ನಮೂದಿಸಬೇಕು ಎಂದು ಸೂಚನೆ ನೀಡಲಾಗಿದೆ.

ಜೂನ್​ 16,17 ಹಾಗೂ 18ರಂದು ರಾಜ್ಯದಲ್ಲಿ ಸಿಇಟಿ ಪರೀಕ್ಷೆಗಳನ್ನು ನಡೆಸಲಾಗಿತ್ತು.ಜುಲೈ 30ರಂದು ಪ್ರಕಟವಾಗುವ ಫಲಿತಾಂಶವನ್ನು ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್​ಸೈಟ್​ kea.kar.nic.in ನಲ್ಲಿ ವೀಕ್ಷಿಸಬಹುದಾಗಿದೆ . ಇಂಜಿನಿಯರಿಂಗ್​ ಸೇರಿದಂತೆ ವಿವಿಧ ವೃತ್ತಿ ಪರ ಕೋರ್ಸ್​ಗಳಿಗೆ ಸಿಇಟಿ ಅಂಕ ಮುಖ್ಯವಾಗಿದೆ.

ಇದನ್ನೂ ಓದಿ : Coal India Recruitment 2022 : ಕೋಲ್ ಇಂಡಿಯಾ ಲಿಮಿಟೆಡ್ ನೇಮಕಾತಿ 2022 : ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ! ಆಗಸ್ಟ್ 07 ಅರ್ಜಿ ಸಲ್ಲಿಸಲು ಕೊನೆಯ ದಿನ

Karnataka Government raises minimum age limit 6 years for admission to class 1

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular