1 – 5 Class ಕರ್ನಾಟಕದಲ್ಲಿ ಸದ್ಯಕ್ಕೆ ಆರಂಭವಿಲ್ಲ : ಸಿಎಂ ಬಸವರಾಜ್‌ ಬೊಮ್ಮಾಯಿ

ಬೆಂಗಳೂರು : ರಾಜ್ಯದಲ್ಲಿ 1 ರಿಂದ 5 ನೇ ತರಗತಿವರೆಗಿನ ಮಕ್ಕಳಿಗೆ ಭೌತಿಕ ತರಗತಿಗಳನ್ನು ಪುನರಾರಂಭಿಸುವ ಕುರಿತು ಸದ್ಯಕ್ಕೆ ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ರಾಜ್ಯದಲ್ಲಿ 6-8 ನೇ ತರಗತಿಗಳು ಆರಂಭಗೊಂಡಿವೆ. ಶಾಲೆಗಳು ಯಾವ ರೀತಿಯಲ್ಲಿ ಸಾಗುತ್ತವೆ. ಸಾಧಕ ಬಾಧಕಗಳ ಕುರಿತು ಚರ್ಚೆಯನ್ನು ನಡೆಸಿ ನಂತರದಲ್ಲಿ1 ರಿಂದ 5 ನೇ ತರಗತಿಗಳನ್ನು ಆರಂಭಿಸುವ ಕುರಿತು ನಿರ್ಧಾರ ಮಾಡುತ್ತೇವೆ ಎಂದಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿ ಜನಾಶೀರ್ವಾದ ಯಾತ್ರೆಯ ಸಂದರ್ಭದಲ್ಲಿ ಕೊರೊನಾ ನಿಯಮ ಉಲ್ಲಂಘನೆಯಾಗಿದೆ. ಹೀಗಾಗಿ ಕೋವಿಡ್-19 ಶಿಷ್ಟಾಚಾರವನ್ನು ಉಲ್ಲಂಘಿಸಲಾದ ಇತ್ತೀಚಿನ ನಿದರ್ಶನಗಳ ಹಿನ್ನೆಲೆಯಲ್ಲಿ ಸರಕಾರ ಕೋವಿಡ್‌ ಮಾರ್ಗಸೂಚಿಯನ್ನು ಪರಿಷ್ಕರಣೆ ಮಾಡಿದೆ. ಸಾರ್ವಜನಿಕ ಸಭೆ, ಸಾಮಾರಂಭಗಳಿಗೆ ಸರಕಾರ ಬ್ರೇಕ್‌ ಹಾಕಲಿದೆ ಎಂದಿದ್ದಾರೆ.

ಇದನ್ನೂ ಓದಿ : ರಾಜ್ಯದಲ್ಲಿ ಪ್ರಾಥಮಿಕ ಶಾಲೆಗಳ ಆರಂಭ : ಸ್ಪಷ್ಟೀಕರಣ‌ ಕೊಟ್ಟ ಆರೋಗ್ಯ ಸಚಿವ ಸುಧಾಕರ್

ಇದನ್ನೂ ಓದಿ : SSLC ಉತ್ತೀರ್ಣರಾದವರಿಗೆ ಇಲ್ಲಿದೆ ಗುಡ್‌ನ್ಯೂಸ್‌ : ಡಿಪ್ಲೋಮಾ ಪ್ರವೇಶಕ್ಕೆ ಸೆ.20ರ ವರೆಗೆ ಅವಕಾಶ

(Karnataka chief minister Basavaraj Bommai reaction About 1 to 5th class start )

Comments are closed.