ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 2026ನೇ ಸಾಲಿನ ಪ್ರೈಸ್ ಮನಿಗಾಗಿ ಅರ್ಜಿ ಆಹ್ವಾನ; ಈ ದಾಖಲೆಗಳಿದ್ದರೆ ತಕ್ಷಣ ಅರ್ಜಿ ಸಲ್ಲಿಸಿ

ಕರ್ನಾಟಕ ರಾಜ್ಯದಲ್ಲಿ ವಿದ್ಯಾಭ್ಯಾಸ ಮಾಡಿರುವ ಅರ್ಹ ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿರುವ ಕೋರ್ಸ್ ಗಳ ಆಧಾರದ ಮೇಲೆ 20,000 ರೂಪಾಯಿ ಯಿಂದ 35,000 ರೂಪಾಯಿವರೆಗೆ ಉಚಿತ ಪ್ರೋತ್ಸಾಹ ಧನ ಸಿಗಲಿದೆ. ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ಮತ್ತು ಅಗತ್ಯ ದಾಖಲೆಗಳ ಸಂಪೂರ್ಣ ವಿವರ ಇಲ್ಲಿದೆ.

.ಬೆಂಗಳೂರು: ಕರ್ನಾಟಕದ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ವೊಂದನ್ನು ನೀಡಿದೆ. ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವತಿಯಿಂದ 2026ನೇ ಸಾಲಿನಲ್ಲಿ ಪ್ರಥಮ ಪ್ರಯತ್ನದಲ್ಲೇ ವಿವಿಧ ಪದವಿ ಹಾಗೂ ಸ್ನಾತಕೋತ್ತರ ಕೋರ್ಸ್‌ಗಳನ್ನು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ‘ಪ್ರೈಸ್ ಮನಿ’ (Prize Money Scheme 2026) ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ರಾಜ್ಯದಲ್ಲಿ ವಿದ್ಯಾಭ್ಯಾಸ ಮಾಡಿರುವ ಅರ್ಹ ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿರುವ ಕೋರ್ಸ್ ಗಳ ಆಧಾರದ ಮೇಲೆ 20,000 ರೂಪಾಯಿ ಯಿಂದ 35,000 ರೂಪಾಯಿವರೆಗೆ ಉಚಿತ ಪ್ರೋತ್ಸಾಹ ಧನ ಸಿಗಲಿದೆ. ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ಮತ್ತು ಅಗತ್ಯ ದಾಖಲೆಗಳ ಸಂಪೂರ್ಣ ವಿವರ ಇಲ್ಲಿದೆ.

ಯಾವ ಕೋರ್ಸ್‌ಗೆ ಎಷ್ಟು ಪ್ರೈಸ್ ಮನಿ ಸಿಗಲಿದೆ ?

ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಇಲಾಖೆಯು ಈ ಕೆಳಗಿನಂತೆ ಪ್ರೋತ್ಸಾಹಧನವನ್ನು ನೇರವಾಗಿ ಬ್ಯಾಂಕ್ ಖಾತೆಗೆ (DBT) ಜಮಾ ಮಾಡಲಿದೆ:

ವಿದ್ಯಾರ್ಥಿ ತೇರ್ಗಡೆಯಾದ ಕೋರ್ಸ್ ಸಿಗಲಿರುವ ಪ್ರೋತ್ಸಾಹಧನ (Prize Money Amount)

ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು (Important Checklist)

ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್ swd.karnataka.gov.in ಅಥವಾ ಕರ್ನಾಟಕ ವಿದ್ಯಾರ್ಥಿ ವೇತನ ತಂತ್ರಾಂಶದ ಲಿಂಕ್‌ಗೆ ಭೇಟಿ ನೀಡಿ.

ಈ ಪ್ರೋತ್ಸಾಹಧನವು ಕೇವಲ ಕರ್ನಾಟಕದ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಒಳಪಡುವ ಮಾನ್ಯತೆ ಪಡೆದ ಕಾಲೇಜುಗಳಲ್ಲಿ ಓದಿದ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ. ದ್ವಿತೀಯ ಪಿಯುಸಿ ವಿದ್ಯಾರ್ಹತೆ, ಡಿಪ್ಲೋಮಾ ಮುಗಿಸಿ ಉನ್ನತ ಶಿಕ್ಷಣಕ್ಕೆ ದಾಖಲಾಗಿರುವ ವಿದ್ಯಾರ್ಥಿಗಳು ಎಸ್‌ಎಸ್‌ಪಿ ಪೋರ್ಟಲ್‌ ನಿಂದ ವಿದ್ಯಾರ್ಥಿ ವೇತನದ ಸ್ಟೇಟಸ್‌ ಪರಿಶೀಲಿಸಬಹುದಾಗಿದೆ.

ಅರ್ಜಿ ಸಲ್ಲಿಕೆಗೆ ಜೂನ್ ತಿಂಗಳ ಕೊನೆಯ ವಾರದವರೆಗೆ ಕಾಲಾವಕಾಶ ನೀಡಲಾಗಿದ್ದರೂ, ಕೊನೆಯ ದಿನಗಳಲ್ಲಿ ಸರ್ವರ್ ದಟ್ಟಣೆಯಿಂದಾಗಿ ವೆಬ್‌ಸೈಟ್ ಕೈಕೊಡುವ ಸಾಧ್ಯತೆ ಇರುತ್ತದೆ. ಆದ್ದರಿಂದ ಅರ್ಹ ವಿದ್ಯಾರ್ಥಿಗಳು ತಡ ಮಾಡದೆ ತಕ್ಷಣವೇ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಉಚಿತ ಆರ್ಥಿಕ ಸೌಲಭ್ಯವನ್ನು ಪಡೆದುಕೊಳ್ಳಿ.

karnataka social welfare department prize money scholarship application open 2026

Exit mobile version