- Advertisement -
ಮಂಗಳೂರು : ರಾಜ್ಯ ಸರಕಾರ ಕೊರೊನಾ ನಿಯಂತ್ರಣದ ಹಿನ್ನೆಲೆ ಯಲ್ಲಿ ಹೊಸ ಮಾರ್ಗಸೂಚಿ ಪ್ರಕಟವಾದ ಬೆನ್ನಲ್ಲೆ ಮಂಗಳೂರು ವಿಶ್ವವಿದ್ಯಾ ನಿಲಯ ಎಪ್ರಿಲ್ 21 ರಿಂದ ನಡೆಯ ಬೇಕಾಗಿದ್ದ ಎಲ್ಲಾ ಪರೀಕ್ಷೆಗಳನ್ನು ರದ್ದು ಮಾಡಿ ಆದೇಶ ಹೊರಡಿಸಿದೆ.
ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಶಾಲಾ, ಕಾಲೇಜುಗಳನ್ನು ಬಂದ್ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಹೀಗಾಗಿ ಪರೀಕ್ಷೆಗಳನ್ನು ಪರ್ಯಾಯ ದಿನಾಂಕದಂದು ನಿಗದಿಪಡಿಸಲಾಗು ವುದು ಎಂದು ಪರೀಕ್ಷಾಂಗ ಮುಖ್ಯಸ್ಥ ಪ್ರೋ.ಧರ್ಮಾ ತಿಳಿಸಿದ್ದಾರೆ.