ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶೈಕ್ಷಣಿ ವರ್ಷವನ್ಮು ಜೂನ್ 15 ರಿಂದ ಆರಂಭಿಸುವ ಕುರಿತು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಪ್ರೌಢಶಾಲಾ ಬೇಸಿಗೆ ಅವಧಿಯನ್ನು 15 ದಿನಗಳ ಕಾಲ ಮುಂದುವರಿಸಲಾಗಿದೆ.
ಜೂ.14ರವರೆಗೆ ಬೇಸಿಗೆ ರಜೆ ವಿಸ್ತರಿಸಲಾಗಿದೆ. ಆದರೆ, ಜೂನ್ 15ರಿಂದ 8, 9, 10ನೆ ತರಗತಿಗಳಿಗೆ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶೈಕ್ಷಣಿಕ ಅವಧಿಯನ್ನು ಶಿಕ್ಷಣ ಇಲಾಖೆ ಮತ್ತೆ ಪರಿಷ್ಕರಿಸಿದೆ.
ಸರಕಾರಿ ಶಾಲೆಯ ಶೇ.70ರಷ್ಟು ಮಕ್ಕಳಿಗೆ ಆನ್ಲೈನ್ ಪಾಠಗಳನ್ನು ಕೇಳಲು ಸಾಧ್ಯವಾಗಿಲ್ಲ. ಕೆಲ ಕಂಪೆನಿಗಳ ಸಾಮಾಜಿಕ ಹೊಣೆಗಾರಿಕೆ ನಿಧಿಗಳಿಂದ ಮಕ್ಕಳಿಗೆ ಟ್ಯಾಬ್ ಕೊಡಿಸುವ ಪ್ರಯತ್ನ ನಡೆದಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ವಿ.ಅನ್ಬುಕುಮಾರ್ ತಿಳಿಸಿದ್ದಾರೆ.
