ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ ಭಾಗ್ಯ : ಶೀಘ್ರದಲ್ಲೇ ಬರಲಿದೆ ಹೊಸ ನಿಯಮ

ಸರ್ಕಾರಿ ಕಿರಿಯ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳ ಶಿಕ್ಷಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಇನ್ಮುಂದೆ ಈ ಶಿಕ್ಷಕರಿಗೆ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ಪಡೆಯಲು ಅವಕಾಶ ಇರಲಿದೆ. ದಶಕಗಳ ಹಳೆಯ ನಿಯಮಾವಳಿಗೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ಮುಂದಾಗಿದ್ದು ಈ ಮೂಲಕ ಶಾಲಾ ಶಿಕ್ಷಕರಿಗೆ ಬಡ್ತಿ ಭಾಗ್ಯ ನೀಡಲಿದೆ.
ಒಂದು ವೇಳೆ ಈ ನಿಯಮ ಜಾರಿಗೆ ಬಂದಲ್ಲಿ, 1ರಿಂದ 5ನೇ ತರಗತಿ ಹಾಗೂ 6 ರಿಂದ 8ನೇ ತರಗತಿಗಳಿಗೆ ಬೋಧನೆ ಮಾಡುವ ಶಿಕ್ಷಕರು ಬಡ್ತಿ ಪಡೆಯಲಿದ್ದಾರೆ. ಇನ್ನು ಈ ಬಡ್ತಿಯನ್ನು ಪಡೆಯಲು ಶಿಕ್ಷಕರು ಕನಿಷ್ಟ 12 ವರ್ಷಗಳ ಸೇವಾ ಅನುಭವ ಹೊಂದಿರುವುದು ಕಡ್ಡಾಯವಾಗಿರಲಿದೆ. ಒಂದು ವೇಳೆ ಶಿಕ್ಷಕರು ಈ ಬಡ್ತಿಯನ್ನು ನಿರಾಕರಿಸಿದಲ್ಲಿ ಜ್ಯೇಷ್ಠತೆಯ ಆಧಾರದ ಮೇಲೆ ಈ ಬಡ್ತಿ ಬೇರೆಯವರ ಪಾಲಾಗಲಿದೆ.
ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳ ನಿಯಮಗಳಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. 12 ವರ್ಷಗಳ ಸೇವೆ ಸಲ್ಲಿಸಿದ ಹಿರಿಯ ಹಾಗೂ ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಈ ಬದಲಾವಣೆಯಿಂದ ಅನುಕೂಲವಾಗಲಿದೆ. ಪ್ರತಿ ಮೂರು ಮುಖ್ಯೋಪಾಧ್ಯಯ ಹುದ್ದೆಗಳಲ್ಲಿ 2 ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕರ ಪಾಲಾದರೆ 1 ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರ ಪಾಲಾಗಲಿದೆ.

ಇದನ್ನೂ ಓದಿ: SSLC ಪರೀಕ್ಷೆ ಹೊಸ ಗೈಡ್​ಲೈನ್ಸ್​: ಶಿಕ್ಷಕರಿಗೆ ಮೊಬೈಲ್​ ಬಳಕೆ ನಿರ್ಬಂಧ, ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ರೆ ಜೈಲೂಟ

ಹೊಸ ಶಿಕ್ಷಕರ ಬಡ್ತಿ ನಿಯಮಗಳ ಕರಡು ಪ್ರತಿ ಪ್ರಕಟಿಸಿರುವ ಸರಕಾರ, ಈ ಬಗ್ಗೆ ಆಕ್ಷೇಪಣೆಗಳ ಸಲ್ಲಿಕೆಗೆ ಜ.21 ರಿಂದ 15 ದಿನಗಳವರಗೆ ಕಾಲಾವಕಾಶ ನೀಡಲಾಗಿದೆ..ಸಾರ್ವಜನಿಕರು ಅಥವಾ ಸಂಬಂಧಪಟ್ಟವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಿಗೆ ಆಕ್ಷೇಪಣೆಗಳನ್ನು ಲಿಖಿತವಾಗಿ ಸಲ್ಲಿಸಬಹುದಾಗಿದೆ.

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories