ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಗುಡ್ ನ್ಯೂಸ್

0

ಬೆಂಗಳೂರು : ರಾಜ್ಯದಲ್ಲಿ ಹಲವು ವರ್ಷಗಳಿಂದಲೂ ವರ್ಗಾವಣೆಯ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ರಾಜ್ಯ ಸರಕಾರ ಗುಡ್ ನ್ಯೂಸ್ ನೀಡಲು ಮುಂದಾಗಿದೆ. ಮುಂದಿನ ಎರಡರಿಂದ ಮೂರು ದಿನಗಳ ಒಳಗಾಗಿ ಶಿಕ್ಷಕರ ವರ್ಗಾವರಣೆಯ ವೇಳಾಪಟ್ಟಿಯನ್ನು ಪ್ರಕಟಿಸಲು ಶಿಕ್ಷಣ ಇಲಾಖೆ ಮುಂದಾಗಿದೆ.

ನೂತನ ವರ್ಗಾವಣೆ ಕಾಯ್ದೆಯ ಅಡಿಯಲ್ಲಿ ಶಿಕ್ಷಕರನ್ನು ವರ್ಗಾವಣೆಗೊಳಿಸಬೇಕೆಂದು ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ ಷಡಕ್ಷರಿ ಅವರ ನೇತೃತ್ವದ ನಿಯೋಗ ಶಿಕ್ಷಣ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಾಗಿರುವ ಜಗದೀಶ್ ಅವರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಿದ್ದರು.

ಇದಕ್ಕೆ ಪೂರಕವಾಗಿ ಸ್ಪಂದಿಸಿರುವ ಆಯುಕ್ತರು ಮುಂದಿನ ಎರಡರಿಂದ ಮೂರು ದಿನಗಳ ಒಳಗಾಗಿ ವೇಳಾಪಟ್ಟಿಯನ್ನು ಪ್ರಕಟಿಸುವ ಭರವಸೆಯನ್ನು ನೀಡಿದ್ದರು. ಮಾತ್ರವಲ್ಲ ಸರಕಾರಿ ನೌಕರರ ಸಂಘದವರು ಸಲ್ಲಿಸಿರುವ ವಿವಿಧ ಬೇಡಿಕೆಗಳನ್ನು ಕೂಡ ಈಡೇರಿಸುವ ನಿಟ್ಟಿನಲ್ಲಿ ಭರವಸೆಯನ್ನು ನೀಡಿದ್ದಾರೆಂದು ತಿಳಿದುಬಂದಿದೆ.

Leave A Reply

Your email address will not be published.