ಇಂಜಿನಿಯರಿಂಗ್, ಡಿಪ್ಲೋಮಾ ಪರೀಕ್ಷೆ ಮುಂದೂಡಿಕೆ : ಕೊನೆಗೂ ಎಚ್ಚೆತ್ತ ಉನ್ನತ ಶಿಕ್ಷಣ ಸಚಿವರು

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಕೊರೊನಾ ಕರ್ಪ್ಯೂ ಜಾರಿ ಮಾಡಲಾಗಿದೆ. ಇದರ ಬೆನ್ನಲ್ಲೇ ಇಂಜಿನಿಯರಿಂಗ್ ಹಾಗೂ ಡಿಪ್ಲೋಮಾ ಪರೀಕ್ಷೆಗಳನ್ನು ಕೊನೆಗೂ ಮುಂದೂಡಿಕೆ ಮಾಡಲಾಗಿದೆ.

ಕೊರೊನಾ ಕರ್ಪ್ಯೂ ಹಿನ್ನೆಲೆಯಲ್ಲಿ ಇಂದಿನಿಂದ ನಡೆಯಬೇಕಾಗಿದ್ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ಈ ಕುರಿತು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು ಟ್ವೀಟ್ ಮಾಡಿದ್ದು, ಎಂಜಿನಿಯರಿಂಗ್, ಪಾಲಿಟೆಕ್ನಿಕ್‍ನ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಎರಡನೇ ಅಲೆಯ ನಡುವೆ ನಾಡಿನ ಕ್ಷೇಮಕ್ಕಾಗಿ ಕೊರೊನಾ ಕರ್ಫ್ಯೂ ವಿಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಸದ್ಯಕ್ಕೆ ಪರೀಕ್ಷೆಗಳನ್ನು ಮೂಂದೂಡಿಕೆ ಮಾಡಲಾಗಿದೆ. ಕೊರೊನಾ ಕರ್ಪ್ಯೂ ಅವಧಿ ಮುಗಿದ ನಂತರ ಪರೀಕ್ಷೆಗಳು ಯಾವಾಗ ನಡೆಯಲಿದೆ ಅನ್ನೋ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ. ಇದರಿಂದಾಗಿ ಕೊರೊನಾ ಆತಂಕದಲ್ಲಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿಗಳು ಮಾತ್ರ ನಿರಾಳರಾಗಿದ್ದಾರೆ.

Comments are closed.