ಕರ್ನಾಟಕ ಚುನಾವಣೆಯಿಂದ ರಾಜ್ಯದ ಭವಿಷ್ಯ ನಿರ್ಧಾರ ಎಂದ ಪ್ರಧಾನಿ ಮೋದಿ

ಬೀದರ್‌ : ಪ್ರಧಾನಿ ನರೇಂದ್ರ ಮೋದಿ ಶನಿವಾರ ಬೀದರ್ ಜಿಲ್ಲೆಯ ಹುಮ್ನಾಬಾದ್‌ನಲ್ಲಿ (Prime Minister Modi to visit) ತಮ್ಮ ಎರಡು ದಿನಗಳ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿದಾಗ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸಾರ್ವಜನಿಕ ಸಭೆಯಲ್ಲಿ, ಕರ್ನಾಟಕ ವಿಧಾನಸಭೆ ಚುನವಾಣೆಯು ರಾಜ್ಯದ ಭವಿಷ್ಯವನ್ನು ನಿರ್ಧರಿಸುತ್ತದೆ. ಹೀಗಾಗಿ ಈ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಗೆದ್ದು, ಆಡಳಿತಕ್ಕೆ ಬಂದರೆ, ಕರ್ನಾಟಕವು ಭಾರತದಲ್ಲಿ ನಂಬರ್‌ 1 ಸ್ಥಾನ ಪಡೆಯಲಿದೆ ಎಂದಿದ್ದಾರೆ.

ಅಷ್ಟೇ ಅಲ್ಲದೇ ರಾಜ್ಯ ಚುನಾವಣೆಯು ಕೇವಲ ಐದು ವರ್ಷಗಳ ಕಾಲ ಸರಕಾರವನ್ನು ಆಯ್ಕೆ ಮಾಡುವುದಲ್ಲ. ಆದರೆ ಅದನ್ನು ದೇಶದ ನಂಬರ್ 1 ರಾಜ್ಯವನ್ನಾಗಿ ಮಾಡುವ ದೃಷ್ಟಿಕೋನಕ್ಕಾಗಿ ರಾಜ್ಯದ ಭವಿಷ್ಯವನ್ನು ನಿರ್ಧರಿಸುತ್ತದೆ ಮತ್ತು “ಇದಕ್ಕೆ ಡಬಲ್ ಎಂಜಿನ್ ಸರಕಾರವು ಬಹಳ ಮುಖ್ಯವಾಗಿದೆ” ಎಂದು ಅವರು ಒತ್ತಿ ಹೇಳಿದರು.

ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿದೆ. ಮತ ಭೇಟಿಗಾಗಿ ಪ್ರತಿಯೊಂದು ಪಕ್ಷದ ಅಭ್ಯರ್ಥಿಗಳು ಪಣ ತೊಟ್ಟು ನಿಂತಿದ್ದಾರೆ. ಡಬಲ್‌ ಇಂಜಿನ್‌ ಸರಕಾರಕ್ಕಾಗಿ ಪಣ ತೊಟ್ಟ ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿಗೆ ಆಗಮಿಸಲಿದ್ದು, ಎರಡು ದಿನಗಳ ಕರ್ನಾಟಕ ಪ್ರವಾಸ ಕೈಗೊಂಡಿರುವ ಹಿನ್ನೆಲೆಯಲ್ಲಿ ರೋಡ್ ಶೋ ನಡೆಸಲಿದ್ದಾರೆ. 224 ಸ್ಥಾನಗಳಿಗೆ ಕರ್ನಾಟಕ ವಿಧಾನಸಭಾ ಚುನಾವಣೆಯು ಮೇ 10 ರಂದು ನಡೆಯಲಿದೆ ಮತ್ತು ಮತಗಳ ಎಣಿಕೆ ಮೇ 13 ರಂದು ನಡೆಯಲಿದೆ. ಇದು ಫೆಬ್ರವರಿಯಿಂದ ಈ ವರ್ಷ ಕರ್ನಾಟಕಕ್ಕೆ ಪ್ರಧಾನಿ ಮೋದಿಯವರ ಒಂಬತ್ತನೇ ಭೇಟಿಯಾಗಿದೆ.

ಕರ್ನಾಟಕ ಚುನಾವಣೆ 2023 : ಪ್ರಧಾನಿ ಮೋದಿಯವರ ಪ್ರಚಾರದ ವೇಳಾಪಟ್ಟಿ :
ಸಭೆಯ ಬಳಿಕ ವಿಮಾನದಲ್ಲಿ ವಿಜಯಪುರಕ್ಕೆ ತೆರಳಲಿರುವ ಮೋದಿ, ಮಧ್ಯಾಹ್ನ 1 ಗಂಟೆಗೆ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಅವರು ಬೆಳಗಾವಿ ಜಿಲ್ಲೆಯ ಕುಡಚಿಗೆ ಹಾರಿ ಅಲ್ಲಿ ಮಧ್ಯಾಹ್ನ 2. 45 ಕ್ಕೆ ಮತದಾರರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸಂಜೆ ಬೆಂಗಳೂರು ಉತ್ತರ ಭಾಗದಲ್ಲಿ ರೋಡ್ ಶೋ ನಡೆಸಲು ಪ್ರಧಾನಿ ಬೆಂಗಳೂರಿಗೆ ತೆರಳಲಿದ್ದಾರೆ. ಬೆಂಗಳೂರಿನಲ್ಲಿ ತಂಗಿರುವ ಮೋದಿ ಭಾನುವಾರ ಬೆಳಗ್ಗೆ ಕೋಲಾರಕ್ಕೆ ತೆರಳಿ 11.30ಕ್ಕೆ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಮಧ್ಯಾಹ್ನ 1.30ಕ್ಕೆ ರಾಮನಗರ ಜಿಲ್ಲೆಯ ಚನ್ನಪಟ್ಟಣಕ್ಕೆ ಭೇಟಿ ನೀಡಲಿದ್ದಾರೆ.

ಇದನ್ನೂ ಓದಿ : ಕರ್ನಾಟಕ ವಿಧಾನಸಭೆ ಚುನಾವಣೆ : ಇಂದು ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ ಸಂಪೂರ್ಣ ವಿವರ ಇಲ್ಲಿದೆ

ತಮ್ಮ ಪ್ರವಾಸದ ವೇಳೆ, ಮೋದಿ ಅವರು ಹಾಸನ ಜಿಲ್ಲೆಯ ದೇವಾಲಯಗಳ ಪಟ್ಟಣವಾದ ಬೇಲೂರಿಗೆ ಭೇಟಿ ನೀಡಲಿದ್ದಾರೆ. ಪ್ರಧಾನಿ ಮೋದಿಯವರ ಸಾರ್ವಜನಿಕ ಸಭೆಗಾಗಿ ಬೇಲೂರಿನಲ್ಲಿ ಬೃಹತ್ ಪಂಗಡವನ್ನು ಸಿದ್ಧಪಡಿಸಲಾಗುತ್ತಿದೆ. ಲಕ್ಷಗಟ್ಟಲೆ ಜನರು ಪ್ರಧಾನಿಯನ್ನು ನೋಡಲು ಮತ್ತು ಕೇಳಲು ಬರುವ ನಿರೀಕ್ಷೆಯಿದೆ. ಎಎನ್‌ಐ ಪ್ರಕಾರ, ಪ್ರಧಾನಿ ಕಾರ್ಯಕ್ರಮದ ವ್ಯವಸ್ಥೆಗಳನ್ನು ನೋಡಿಕೊಳ್ಳುತ್ತಿರುವ ಬಿಜೆಪಿ ಕಾರ್ಯಕರ್ತರು ಸಾರ್ವಜನಿಕ ಸಭೆಯಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಹೇಳಿದರು. ಅದೇ ದಿನ ಸಂಜೆ ಮೈಸೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ ನಡೆಸಲಿದ್ದಾರೆ. ಕಾರ್ಯಕ್ರಮದ ನಂತರ ಅವರು ಮೈಸೂರಿನಿಂದ ದೆಹಲಿಗೆ ಮರಳಲಿದ್ದಾರೆ.

Prime Minister Modi to visit : Prime Minister Modi said that Karnataka elections will decide the future of the state

Comments are closed.