Karuru Vijay rally : ಕರೂರು ವಿಜಯ್ ರ್ಯಾಲಿ ದುರಂತ: ಮೃತರ ಸಂಖ್ಯೆ 39ಕ್ಕೆ ಏರಿಕೆ, ಕೊಲೆ ಯತ್ನ ಪ್ರಕರಣ ದಾಖಲು
Karuru Vijay rally : ಕರೂರು- ನಟ ಹಾಗೂ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಮುಖ್ಯಸ್ಥ ವಿಜಯ್ ಅವರ ರಾಜಕೀಯ ರ್ಯಾಲಿ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ.
ಈ ದುರಂತಕ್ಕೆ ಸಂಬಂಧಿಸಿದಂತೆ ರ್ಯಾಲಿ ಸಂಘಟಕರ ವಿರುದ್ಧ ಕೊಲೆ ಯತ್ನ ಸೇರಿದಂತೆ ಹಲವು ಪ್ರಕರಣ ದಾಖಲಾಗಿದೆ. ಕರೂರು ದುರಂತದಲ್ಲಿ ಕಾಲ್ತುಳಿತಕ್ಕೆ ಒಟ್ಟು 39 ಮಂದಿ ಸಾವನ್ನಪ್ಪಿದ್ದಾರೆ ಎಂದು ತಮಿಳುನಾಡು ಆರೋಗ್ಯ ಸಚಿವರು ದೃಢಪಡಿಸಿದ್ದಾರೆ.
ಮೃತರ ಪೈಕಿ 17 ಮಹಿಳೆಯರು ಮತ್ತು 9 ರಿಂದ 10 ಮಕ್ಕಳು ಸೇರಿದ್ದಾರೆ. ಇನ್ನು ಘಟನೆಯಲ್ಲಿ 80ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಈ ಪೈಕಿ 51 ಜನರು ತೀವ್ರ ನಿಗಾ ಘಟಕ (ICU)ದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಕರೂರು ದುರಂತ : ಆಯೋಜಕನ ವಿರುದ್ದ ಕ್ರಿಮಿನಲ್ ಕೇಸ್
TVK ಪಕ್ಷದ ಕರೂರು ಪಶ್ಚಿಮ ಜಿಲ್ಲಾಧ್ಯಕ್ಷ ಮತ್ತು ರ್ಯಾಲಿ ಸಂಘಟಕರಾದ ವಿ.ಪಿ. ಮಥಿಯಳಗನ್ ಅವರ ವಿರುದ್ಧ ಕೊಲೆ ಯತ್ನ (Attempt to Murder) ಮತ್ತು ಇತರ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಘಟನೆಯ ಕುರಿತು ಸಂಪೂರ್ಣ ತನಿಖೆ ನಡೆಸಲು ನಿವೃತ್ತ ನ್ಯಾಯಮೂರ್ತಿ ಅರುಣಾ ಜಗದೀಶನ್ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗವನ್ನು ರಚಿಸಲಾಗಿದೆ.
ಇದನ್ನೂ ಓದಿ : vijay tvk rally stampede Chennai : ನಟ ವಿಜಯ್ ರಾಲಿ : ತಮಿಳುನಾಡಲ್ಲಿ 30 ಅಧಿಕ ಮಂದಿ ದುರ್ಮರಣ
ಮೃತ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಣೆ
ಕರೂರು ದುರಂತ ಸ್ಥಳಕ್ಕೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟ್ಯಾಲಿನ್ ನಿನ್ನೆ ರಾತ್ರಿ ಭೇಟಿ ನೀಡಿದ್ದರು. ಮೃತಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ ಅವರು ಮೃತರಿಗೆ ತಲಾ ₹10 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ₹1 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಕೇಂದ್ರ ಗೃಹ ಸಚಿವಾಲಯವು ರಾಜ್ಯ ಸರ್ಕಾರದಿಂದ ಘಟನೆಯ ಕುರಿತು ವರದಿಯನ್ನು ಕೇಳಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ದುರಂತಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : Swamiji Chaitanyananda Saraswati arrested: ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ : ಸ್ವಾಮೀಜಿ ಚೈತನ್ಯಾನಂದ ಸರಸ್ವತಿ ಅರೆಸ್ಟ್
ಕರೂರು ದುರಂತಕ್ಕೆ ಕಾರಣಗಳೇನು ?
- ರ್ಯಾಲಿ ಸ್ಥಳದಲ್ಲಿ ಜನಸಂದಣಿ ನಿರ್ವಹಣೆಯ ಸಂಪೂರ್ಣ ವೈಫಲ್ಯವೇ ಈ ದುರಂತಕ್ಕೆ ಮುಖ್ಯ ಕಾರಣ ಎಂದು ಹೇಳಲಾಗಿದೆ:
- ಅತಿಯಾದ ಜನಸಂದಣಿ: ರ್ಯಾಲಿಗೆ ಕೇವಲ 10,000 ಜನರಿಗೆ ಅನುಮತಿ ಪಡೆಯಲಾಗಿದ್ದರೂ, 30,000 ಕ್ಕೂ ಹೆಚ್ಚು ಜನರು ಸೇರಿದ್ದರು.
- ನಟ ವಿಜಯ ಆಗಮನ ವಿಳಂಭ: ಮಧ್ಯಾಹ್ನ 12.30ಕ್ಕೆ ನಿಗದಿಯಾಗಿದ್ದ ನಟ ವಿಜಯ್, ಸಂಜೆ 7.40ಕ್ಕೆ ಆಗಮಿಸಿದರು. ಇದರಿಂದಾಗಿ ಜನರು ಬೆಳಿಗ್ಗೆಯಿಂದಲೇ ಕುಡಿಯುವ ನೀರು ಮತ್ತು ಆಹಾರವಿಲ್ಲದೆ ತೀವ್ರ ಬಿಸಿಲು ಮತ್ತು ದಣಿವಿನಿಂದ ಕಾಯುತ್ತಿದ್ದರು.
- ಕಾಲ್ತುಳಿತದ ಕಿಡಿ: ಫ್ಲಡ್ಲೈಟ್ಗಳು ಆಫ್ ಆದಾಗ ಅಥವಾ ವಿಜಯ್ ವೇದಿಕೆ ಮೇಲೆ ಬಂದಾಗ ಅವರನ್ನು ನೋಡಲು ಏಕಾಏಕಿ ಜನರು ನುಗ್ಗಿದ್ದರಿಂದ ಕಾಲ್ತುಳಿತ ಉಂಟಾಯಿತು ಎಂದು ವರದಿಯಾಗಿದೆ.
- ಇದೇ ಸಮಯದಲ್ಲಿ ಮರವೊಂದರ ಕೊಂಬೆ ಮುರಿದು ಬಿದ್ದಿದ್ದೂ ನೂಕುನುಗ್ಗಲಿಗೆ ಕಾರಣವಾಯಿತು ಎಂದು ಹೇಳಲಾಗಿದೆ.
- ನಟ ವಿಜಯ್ ಅವರು ಘಟನೆಯ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದು, ತಮ್ಮ ಹೃದಯ ಛಿದ್ರವಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಈ ದುರಂತಕ್ಕೆ ಸಂಘಟಕರ ನಿರ್ಲಕ್ಷ್ಯ ಮತ್ತು ಜನಸಂದಣಿ ನಿರ್ವಹಣೆಯ ಸ್ಪಷ್ಟ ವೈಫಲ್ಯವೇ ಕಾರಣ ಎಂದು ದೂರಲಾಗಿದೆ.



