ಮದ್ಯದಲ್ಲಿ ವಿಷ ಬೆರೆಸಿ 8 ಮಂದಿಯ ಹತ್ಯೆ.. ಆರೋಪಿಯ ಕೃತ್ಯ ಕೇಳಿದರೆ ಬೆಚ್ಚಿಬೀಳುತ್ತೀರಿ!

ಛತ್ತೀಸ್‌ಗಢದ ಖಾರ್ವೆ ಗ್ರಾಮದಲ್ಲಿ ವಿಷ ಬೆರೆಸಿದ ಮದ್ಯ ನೀಡಿ ಎಂಟು ಮಂದಿಯನ್ನು ಹತ್ಯೆ ಮಾಡಿರುವ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದು, ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ ಬಹಿರಂಗವಾಗಿದೆ.

ಛತ್ತೀಸ್‌ಗಢದ ಬಲೋದಬಜಾರ್ ಜಿಲ್ಲೆಯ ಖಾರ್ವೆ ಗ್ರಾಮದಲ್ಲಿ ನಡೆದ ಸರಣಿ ಸಾವುಗಳ ಪ್ರಕರಣಕ್ಕೆ ಬೆಚ್ಚಿಬೀಳಿಸುವ ತಿರುವು ಸಿಕ್ಕಿದೆ. ಒಂದೇ ಗ್ರಾಮದ ಎಂಟು ಮಂದಿಗೆ ವಿಷ ಬೆರೆಸಿದ ಮದ್ಯ ನೀಡಿ ಹತ್ಯೆ ಮಾಡಿರುವ ಆರೋಪದ ಮೇಲೆ ಅದೇ ಗ್ರಾಮದ ನಿವಾಸಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ರಾಮ್ ಸಹಾಯ್ ಜೈಸ್ವಾಲ್ ಎಂದು ಗುರುತಿಸಲಾಗಿದೆ. ಕಳೆದ ಫೆಬ್ರವರಿಯಿಂದ ಗ್ರಾಮದಲ್ಲಿ ನಡೆದ ಅನುಮಾನಾಸ್ಪದ ಸಾವುಗಳ ಕುರಿತು ತನಿಖೆ ನಡೆಸಿದ ವೇಳೆ ಈ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತನಿಖೆಯ ಪ್ರಕಾರ, ಆರೋಪಿ ಮೊದಲು ಸುಹಾಗಾ (ಬೊರಾಕ್ಸ್) ಪುಡಿ ಹಾಗೂ ಇಲಿ ವಿಷವನ್ನು ಮಿಶ್ರಣ ಮಾಡಿ ಅದರ ಪರಿಣಾಮವನ್ನು ನಾಯಿಯ ಮೇಲೆ ಪರೀಕ್ಷಿಸಿದ್ದ ಎನ್ನಲಾಗಿದೆ. ಅದು ಯಶಸ್ವಿಯಾಗಿದೆ ಎಂದು ಖಚಿತವಾದ ಬಳಿಕ ತನ್ನೊಂದಿಗೆ ಮದ್ಯದ ವಿಚಾರವಾಗಿ ಜಗಳವಾಡಿದ್ದವರನ್ನು ಗುರಿಯಾಗಿಸಿಕೊಂಡು ವಿಷ ಬೆರೆಸಿದ ಮದ್ಯ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ವಿಷ ಮಿಶ್ರಿತ ಮದ್ಯ ಸೇವಿಸಿದ ಎಲ್ಲರೂ ಸಾವನ್ನಪ್ಪಿದ್ದು, ಯಾರಿಗೂ ಅನುಮಾನ ಬಾರದಂತೆ ಮೃತರ ಅಂತ್ಯಸಂಸ್ಕಾರದಲ್ಲೂ ಆರೋಪಿ ಭಾಗವಹಿಸಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಅಂಶ ತನಿಖೆ ವೇಳೆ ಬಹಿರಂಗವಾಗಿದ್ದು, ಪ್ರಕರಣಕ್ಕೆ ಮತ್ತಷ್ಟು ಗಂಭೀರತೆ ತಂದಿದೆ.

ಸದ್ಯ ಆರೋಪಿ ಪೊಲೀಸ್ ವಶದಲ್ಲಿದ್ದು, ಘಟನೆಯ ಹಿಂದಿನ ಉದ್ದೇಶ ಮತ್ತು ಇನ್ನಿತರ ಮಾಹಿತಿ ಕುರಿತು ತನಿಖೆ ಮುಂದುವರಿದಿದೆ. ಈ ಸರಣಿ ಹತ್ಯೆ ಪ್ರಕರಣ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

Sai Teja | ಸಾಯಿತೇಜ

Sai Teja | ಸಾಯಿತೇಜ ಕಳೆದ 7 ವರ್ಷಗಳ ಡಿಜಿಟಲ್ ಮೀಡಿಯಾ ಅನುಭವ ಹೊಂದಿದ್ದಾರೆ. ಸಾಯಿತೇಜಾ ಅವರು, ಮಾಹಿತಿ ತಂತ್ರಜ್ಞಾನ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ತಂತ್ರಜ್ಞಾನ ಹಾಗೂ ಬಿಸಿನೆಸ್, ಆಟೋಮೊಬೈಲ್‌ ಕ್ಷೇತ್ರದ ಪತ್ರಿಕೋದ್ಯಮದಲ್ಲಿ ಪರಿಣತಿಯನ್ನು ಹೊಂದಿದ್ದಾರೆ. ಆನ್‌ಲೈನ್‌ ಸುದ್ದಿ ಲೋಕದಲ್ಲಿ ಅಪಾರವಾದ ಜ್ಞಾನವನ್ನು ಹೊಂದಿದ್ದಾರೆ. ಕನ್ನಡ ನ್ಯೂಸ್‌ ನೆಕ್ಸ್ಟ್‌ನಲ್ಲಿ ಉಪ ಸಂಪಾದಕರಾಗಿ ಕೆಲಸ ಮಾಡುತ್ತಿದ್ದಾರೆ. More »

Related Stories