ಸರಕಾರಿ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರಕಾರ

0

ಬೆಂಗಳೂರು :  ಸರಕಾರಿ ನೌಕರಿಯಲ್ಲಿ ಇದ್ದುಕೊಂಡೇ ಮತ್ತೊಂದು ಹುದ್ದೆಗೆ ಅರ್ಜಿ ಸಲ್ಲಿಸುವವರಿಗೆ ರಾಜ್ಯ ಸರಕಾರ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ಸರ್ಕಾರಿ ನೌಕರ ಮತ್ತೊಂದು ಸರ್ಕಾರಿ ಹುದ್ದೆಗೆ ಆಯ್ಕೆಗಾಗಿ ಅರ್ಜಿ ಸಲ್ಲಿಸುವ  ಮುನ್ನವೇ ಎನ್ಒಸಿ ಪಡೆಯುವುದಕ್ಕೆ ವಿನಾಯಿತಿ ನೀಡಿದೆ.

ಸರ್ಕಾರಿ ಹುದ್ದೆಯಲ್ಲಿದ್ದು, ಮತ್ತೊಂದು ಸರ್ಕಾರಿ ಹುದ್ದೆಗಾಗಿ ಅರ್ಜಿ ಸಲ್ಲಿಸಲು ತಾವು ಕರ್ತವ್ಯ ನಿರ್ವಹಿಸುತ್ತಿರುವ ಇಲಾಖೆಯಿಂದ ಎನ್ ಒಸಿ ( ನೋ ಅಬ್ಜೆಕ್ಷನ್ ಪ್ರಮಾಣ ಪತ್ರ)  ಪಡೆಯುವುದು ಕಡ್ಡಾಯವಾಗಿತ್ತು. ಆದ್ರೆ, ಇದೀಗ ಎನ್ ಒಸಿ ಪಡೆಯುವ ಅವಶ್ಯಕತೆ ಇಲ್ಲ ರಾಜ್ಯ ಸರ್ಕಾರ ತಿಳಿಸಿದೆ.

ಸರ್ಕಾರಿ ನೌಕರರಾಗಿದ್ದು, ಮತ್ತೊಂದು ಸರ್ಕಾರಿ ಹುದ್ದೆಗಾಗಿ ಅರ್ಜಿ ಸಲ್ಲಿಸುವಾಗಲೇ ತಾವು ಕರ್ತವ್ಯ ನಿರ್ವಹಿಸುತ್ತಿರುವ ಇಲಾಖೆಯಿಂದ  ಕಡ್ಡಾಯವಾಗಿ ನಿರಾಪೇಕ್ಷಣ ಪ್ರಮಾಣ ಪತ್ರ ಪ್ರಮಾಣ ಪತ್ರ(ಎನ್‌ಒಸಿ) ಪಡೆಯಬೇಕಾಗಿತ್ತು. ಆದ್ರೀಗ ಇಂತಹ ನೇಮಕಾತಿ ನಿಯಮ ದಲ್ಲಿ ಬದಲಾವಣೆ ಮಾಡಲಾಗಿದ್ದು, ಕಲಂ 11ರಂತೆ ಸರ್ಕಾರಿ ಹುದ್ದೆ ಹೊಂದಿರುವ ವ್ಯಕ್ತಿಯು, ಮತ್ತೊಂದು ಸರ್ಕಾರಿ ಹುದ್ದೆಗೆ ನೇರವಾಗಿ ಯೇ ನೇಮಕಾತಿ ಪ್ರಾಧಿಕಾರಕ್ಕೆ ಅರ್ಜಿಯನ್ನು ಸಲ್ಲಿಸಬಹುದು ಎಂದು ಸ್ಪಷ್ಟಪಡಿಸಿದೆ.

ಈ ಕುರಿತಂತೆ ರಾಜ್ಯ ಸರ್ಕಾರ ವಿಶೇಷ ರಾಜ್ಯ ಪತ್ರ ಹೊರಡಿಸಿದ್ದು, ಆದ್ರೆ, ಮತ್ತೊಂದು ಸರ್ಕಾರಿ ಹುದ್ದೆಗಾಗಿ ಅರ್ಜಿ ಸಲ್ಲಿಸಿದ ನಂತರ ಸರ್ಕಾರಿ ನೌಕರ ಆ ಹುದ್ದೆಗೆ ನೇಮಕವಾದಲ್ಲಿ, ತಪ್ಪದೇ ತಮ್ಮ ಮಾತೃ ಇಲಾಖೆಗೆ ತಾವು ನೇಮಕಗೊಂಡಿರುವ ಬಗ್ಗೆ ಪ್ರಮಾಣಪತ್ರವನ್ನು ಸಲ್ಲಿಸಬೇಕು. ತಮ್ಮ ಮಾತೃ ಇಲಾಖೆಯ ಗಮನಕ್ಕೆ ತಂದು ನೇಮಕಗೊಂಡಿರುವ ಮತ್ತೊಂದು ಹುದ್ದೆಗೆ ರಿಪೋರ್ಟ್ ಮಾಡಿಕೊಳ್ಳಬೇಕು ಎಂದು ತಿಳಿಸಿದೆ. ರಾಜ್ಯ ಸರಕಾರದ ಹೊಸ ಆದೇಶ ಇದೀಗ ಸರಕಾರಿ ನೌಕರರಿಗೆ ಖುಷಿಯನ್ನು ಕೊಟ್ಟಿದೆ.

Leave A Reply

Your email address will not be published.