ಭಾನುವಾರ, ಏಪ್ರಿಲ್ 27, 2025
Homejob Newsಪಿಯುಸಿ. ಪದವೀಧರರಿಗೆ ಆಯುಷ್ ಇಲಾಖೆಯಲ್ಲಿದೆ ಉದ್ಯೋಗಾವಕಾಶ : ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಪಿಯುಸಿ. ಪದವೀಧರರಿಗೆ ಆಯುಷ್ ಇಲಾಖೆಯಲ್ಲಿದೆ ಉದ್ಯೋಗಾವಕಾಶ : ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

- Advertisement -

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು ಆಯುಷ್‌ ನಿರ್ದೇಶನಾಲಯದಲ್ಲಿನ ಮೂಲ ವೃಂದ ಮತ್ತು ಹೈದ್ರಬಾದ್ ಕರ್ನಾಟಕ ವೃಂದದಲ್ಲಿ ಖಾಲಿ ಇರುವ ಒಟ್ಟು 276 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ಸೆಪ್ಟೆಂಬರ್​ 14ರವರೆಗೆ ಅರ್ಜಿಸಲ್ಲಿಸಲು ಸಮಯವಕಾಶವನ್ನು ನೀಡಿದೆ.

ಆಯುಷ್ ವೈದ್ಯಕೀಯ ಮಹಾವಿದ್ಯಾಲಯಗಳಲ್ಲಿನ ಆಯುರ್ವೇದ / ಹೋಮಿಯೋಪತಿ ವಿಷಯಗಳಲ್ಲಿ ಪ್ರಾಧ್ಯಾಪಕರು / ಸಹ ಪ್ರಾಧ್ಯಾಪಕರು / ಸಹಾಯಕ ಪ್ರಾಧ್ಯಾಪಕರು / ಶುಶ್ರೂಷಕರ ಗ್ರೂಪ್‌ ಎ, ಬಿ ಮತ್ತು ಸಿ ವೃಂದದ ತಾಂತ್ರಿಕ ಹುದ್ದೆಗಳಿಗೆ ನೇಮಕ ಪ್ರಕ್ರಿಯೆ ನೆಡೆಸಲಿದೆ.

ವಿದ್ಯಾರ್ಹತೆ:
ವಿದ್ಯಾರ್ಹತೆ: ಗ್ರೂಪ್ -ಎ, ಬಿ ಮತ್ತು ಸಿ ಹುದ್ದೆಗಳಿಗೆ ಪಿಯುಸಿ/ಡಿಪ್ಲೋಮಾ; ಪದವಿ/ಸ್ನಾತಕೋತ್ತರ ಪದವಿ, ಬಿಎಎಂಎಸ್/ಬಿಹೆಚ್ಎಂಎಸ್/ಬಿಯುಎಂಎಸ್/ಬಿಎನ್ ವೈಎಸ್ ವಿದ್ಯಾರ್ಹತೆಯನ್ನು ಕಾನೂನಿನಡಿಯಲ್ಲಿ ಸ್ಥಾಪಿತವಾದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು. ಹಿಂದುಳಿದ ವರ್ಗಗಳಿಗೆ ಗರಿಷ್ಟ 38 ವರ್ಷ ಮತ್ತು ಪ.ಜಾ/ಪ.ಪಂ/ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇರ ನೇಮಕಾತಿ ಮಾಡಲಾಗುವುದು.

ವೇತನದ ವಿವರ:
ಕೆಪಿಎಸ್ಸಿ ಗ್ರೂಪ್ -ಎ, ಬಿ ಮತ್ತು ಸಿ ವೃಂದದ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,600/-ರಿಂದ 97,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್‌ಸೈಟ್ http://www.kpsc.kar.nic.in/ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅರ್ಜಿಯನ್ನು ಸೆಪ್ಟೆಂಬರ್ 14,2020ರೊಳಗೆ ಸಲ್ಲಿಸಬಹುದು.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular