ಕರ್ನಾಟಕದಲ್ಲಿ ಗ್ಯಾರಂಟಿ ಜಾರಿಯಿಂದ ಹೆಣ್ಣು ಮಕ್ಕಳಿಗೆ ಅನುಕೂಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕರ್ನಾಟಕ ಸರಕಾರ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಿರುವ ಕಾರಣದಿಂದಾಗಿ ಉದ್ಯೋಗ ಕ್ಷೇತ್ರದಲ್ಲಿ ಹೆಣ್ಣು ಮಕ್ಕಳ ಪಾಲುದಾರಿಕೆ ಏರಿಕೆ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ,
ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪೆರೆಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಅವರು, ರಾಜ್ಯದ ಜನತೆಯನ್ನು ಉದ್ದೇಶಿಸಿ ಸಂದೇಶ ನೀಡಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಪಾತ್ರ ಸ್ಮರಣೀಯವಾದುದು ಎಂದಿದ್ದಾರೆ.
ನಮ್ಮ ಸರಕಾರವು ಗ್ಯಾರಂಟಿ ಯೋಜನೆಗಳ ಮೂಲಕ ಯಶಸ್ವಿಯಾಗಿ ಜಾರಿಗೊಳಿಸಿದೆ. ಲಿಂಗ, ಧರ್ಮ ಬೇಧ, ಬಾವ ಇಲ್ಲದೆ, ಸರ್ವರಿಗೂ ಘನತೆಯಿಂದ ಬಾಳಲು ಅಗತ್ಯವಾದ ಆಧುನಿಕ ಸಮಾಜದಲ್ಲಿ ಬದುಕಲು ಅವಶ್ಯಕವಾದ ಪ್ರಾಥಮಿಕ ಅವಶ್ಯಕತೆಯನ್ನು ಈಡೇರಿಸುವ ನಿಟ್ಟಿನಲ್ಲಿ ಕಲ್ಯಾಣ ರಾಜ್ಯವಾಗಿ ಕರ್ನಾಟಕವು ಮಾಡಿರುವ ಸಾಧನೆ ದೇಶಕ್ಕೆ ಮಾದರಿಯಾಗಿದೆ.
ಕರ್ನಾಟಕದ ಸಿಂಗ ಗಂಗಾಧರ ದೇಶಪಾಂಡೆ, ಹರ್ಡೀಕರ್ ಮಂಜಪ್ಪ, ಮೈಲಾರ ಮಹಾದೇವಪ್ಪ, ಆಲೂರು ವೆಂಕಟರಾವ್ ಅವರಂತಹ ದೇಶ ಪ್ರೇಮಿಗಳು ಗಾಂಧೀಜಿ ಅವರ ಕರೆಗೆ ಓಗೊಟ್ಟು ದಂಡೀ ಸತ್ಯಾಗ್ರಹ, ಕರನಿರಾಕರಣ ಚಳುವಳಿಯ ಮೂಲಕ ಬ್ರಿಟೀಷರಿಗೆ ಸವಾಲು ಹಾಕಿದ್ದರು.
ಇದನ್ನೂ ಓದಿ : ದೀಪಾವಳಿಗೆ ದೇಶದ ಜನತೆಗೆ ಭರ್ಜರಿ ಗಿಪ್ಟ್ : ನರೇಂದ್ರ ಮೋದಿ
ಭಾರತ ಸ್ವಾತಂತ್ರ್ಯ ಪಡೆದು 79 ವರ್ಷಗಳ ಕಾಲ ಎದುರಾದ ಸಮಸ್ಯೆಗಳನ್ನು ಭಾರತ ಸಮರ್ಥವಾಗಿ ಎದುರಿಸಿದೆ. ಭಾರತ ಸ್ವಾತಂತ್ರ್ಯವು ಅಖಂಡವಾಗಿಯೂ, ಸಮಗ್ರವಾಗಿಯೂ ಸದಾಕಾಲ ನಳನಳಿಸಬೇಕು ಎಂದು ಅವರು ಕರೆಕೊಟ್ಟಿದ್ದಾರೆ.
ಭಾರತವು ಬ್ರಿಟಿಷರ ದಾಸ್ಯದಿಂದ ಮುಕ್ತಿ ಪಡೆಯಲು ಇಡೀ ದೇಶವೇ ಒಗ್ಗೂಡಿ ಹೋರಾಡುವಲ್ಲಿ ತೋರಿದ ಸ್ಪೂರ್ತಿಯನ್ನೇ ಸಂವಿಧಾನ ಎತ್ತಿ ಹಿಡಿಯುವ ವಿಚಾರದಲ್ಲಿಯೂ ನಾವೆಲ್ಲರೂ ತೋರಬೇಕು. ಬ್ರಿಟಿಷರ ಆಳ್ವಿಕೆಯ ಸಂಕೋಲೆಯಿಂದ ಬಿಡುಗಡೆ ಗೊಳಿಸಿತೋ ಅದೇ ರೀತಿಯಲ್ಲಿ ಸಂವಿಧಾನ ರಕ್ಷಣೆಯ ಪಡತೊಡೊಣಾ ಎಂದು ಕರೆಕೊಟ್ಟಿದ್ದಾರೆ.
ಸಿಎಂ ಸಿದ್ದರಾಮಯ್ಯ ಭಾಷಣ ಹೈಲೆಟ್ಸ್
ಗ್ಯಾರಂಟಿ ಯೋಜನೆಗಳ ಬಗ್ಗೆ ಒತ್ತು: ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳ ಯಶಸ್ಸಿನ ಕುರಿತು ಅವರು ಮಾತನಾಡಿದರು. ‘ಆರ್ಥಿಕ ಸ್ವಾತಂತ್ರ್ಯ’ದ ಥೀಮ್ನಡಿಯಲ್ಲಿ ಈ ಯೋಜನೆಗಳು ಜನರ ಬದುಕನ್ನು ಹೇಗೆ ಬದಲಿಸಿವೆ ಎಂಬುದನ್ನು ಅವರು ವಿವರಿಸಿದರು.
‘ಮೊಬೈಲ್ ಬಿಡಿ – ಪುಸ್ತಕ ಹಿಡಿ’ ಅಭಿಯಾನ: ಯುವಜನರಲ್ಲಿ ಓದುವ ಹವ್ಯಾಸವನ್ನು ಹೆಚ್ಚಿಸಲು ಮತ್ತು ಮೊಬೈಲ್ ಫೋನ್ಗಳ ಅತಿಯಾದ ಬಳಕೆಯನ್ನು ಕಡಿಮೆ ಮಾಡಲು ಸರ್ಕಾರವು ಹೊಸದಾಗಿ ‘ಮೊಬೈಲ್ ಬಿಡಿ – ಪುಸ್ತಕ ಹಿಡಿ’ ಎಂಬ ಕಾರ್ಯಕ್ರಮವನ್ನು ಘೋಷಿಸಿತು.
ರೈತರ ಪರ ನಿಲುವು: ರೈತರಿಗೆ ಕೇಂದ್ರ ಸರ್ಕಾರವು ರಸಗೊಬ್ಬರ ಪೂರೈಸುವಲ್ಲಿ ವಿಳಂಬ ಮಾಡಿದೆ ಎಂದು ಅವರು ಆರೋಪಿಸಿದರು. ಇದೇ ವೇಳೆ, ರೈತರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರವು ಕೈಗೊಂಡಿರುವ ವಿವಿಧ ಕ್ರಮಗಳು ಮತ್ತು ಹೈನುಗಾರಿಕೆಗೆ ನೀಡುತ್ತಿರುವ ಪ್ರೋತ್ಸಾಹದ ಬಗ್ಗೆ ವಿವರಿಸಿದರು.
ಇದನ್ನೂ ಓದಿ : ದರ್ಶನ್ ನಮ್ಮ ಕುಟುಂಬಕ್ಕೆ 20 ಕೋಟಿ ಹಣ ಕೊಟ್ಟಿಲ್ಲ : ರೇಣುಕಾಸ್ವಾಮಿ ತಂದೆ ಸ್ಪಷ್ಟನೆ
ಅಕ್ಕ ಕೆಫೆ ಯೋಜನೆ: ಮಹಿಳೆಯರ ಸಬಲೀಕರಣಕ್ಕಾಗಿ ‘ಅಕ್ಕ ಕೆಫೆ’ ಎಂಬ ಹೊಸ ಯೋಜನೆಯನ್ನು ಪ್ರಾರಂಭಿಸುವುದಾಗಿ ಅವರು ಪ್ರಕಟಿಸಿದರು. ಇದು ಮಹಿಳೆಯರಿಗೆ ಆರ್ಥಿಕ ಸ್ವಾತಂತ್ರ್ಯ ಒದಗಿಸುವ ಮತ್ತೊಂದು ಪ್ರಮುಖ ಹೆಜ್ಜೆಯಾಗಿದೆ.
ರಾಜ್ಯದ ಅಭಿವೃದ್ಧಿ ಮಾದರಿ: ವಿಶ್ವಸಂಸ್ಥೆಯ ಮುಖ್ಯಸ್ಥರೂ ಸೇರಿದಂತೆ ಹಲವು ಅಂತರರಾಷ್ಟ್ರೀಯ ಸಂಸ್ಥೆಗಳು ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು ಶ್ಲಾಘಿಸಿರುವುದನ್ನು ಅವರು ಉಲ್ಲೇಖಿಸಿದರು. ಕರ್ನಾಟಕದ ಅಭಿವೃದ್ಧಿ ಮಾದರಿ ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.
ಸಮಾಜದ ಭದ್ರತೆ ಮತ್ತು ಅಭಿವೃದ್ಧಿ: ಕರ್ನಾಟಕವನ್ನು ನಕ್ಸಲ್ ಮುಕ್ತ ರಾಜ್ಯವೆಂದು ಘೋಷಿಸಲಾಗಿದೆ ಮತ್ತು ರಾಜ್ಯವನ್ನು ಡ್ರಗ್ಸ್ ಮುಕ್ತವನ್ನಾಗಿ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು. ಈ ಹೋರಾಟದಲ್ಲಿ ಎಲ್ಲ ಪ್ರಜೆಗಳೂ ಸಹಕರಿಸಬೇಕು ಎಂದು ಮನವಿ ಮಾಡಿದರು.
Bangalore CM Siddaramaiah Speach Independence day Kannada News



