ರಾಜ್ಯದಲ್ಲಿ ಸಂಪುಟ ಕಸರತ್ತು ಮತ್ತೊಮ್ಮೆ ಚುರುಕು : ದಿಲ್ಲಿಗೆ ಸಿದ್ದು – ಡಿಕೆಶಿ ಜಂಟಿ ಪಯಣ

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಬಾಕಿಯಿರುವ ಸಚಿವ ಸಂಪುಟ ವಿಸ್ತರಣೆಯ ಪ್ರಕ್ರಿಯೆಗೆ ಕೊನೆಗೂ ಮುಹೂರ್ತ ನಿಗದಿಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಈ ಮಹತ್ವದ ಬೆಳವಣಿಗೆಯ ಹಿನ್ನೆಲೆಯಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಾಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜುಲೈ 5 ರಂದು ಜಂಟಿಯಾಗಿ ನವದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಬಾಕಿಯಿರುವ ಸಚಿವ ಸಂಪುಟ ವಿಸ್ತರಣೆಯ ಪ್ರಕ್ರಿಯೆಗೆ ಕೊನೆಗೂ ಮುಹೂರ್ತ ನಿಗದಿಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಈ ಮಹತ್ವದ ಬೆಳವಣಿಗೆಯ ಹಿನ್ನೆಲೆಯಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಾಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜುಲೈ 5 ರಂದು ಜಂಟಿಯಾಗಿ ನವದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಕಾಂಗ್ರೆಸ್ ಪಕ್ಷದ ಅಗ್ರ ನಾಯಕ ರಾಹುಲ್ ಗಾಂಧಿ ಅವರು ತಮ್ಮ ವಿದೇಶ ಪ್ರವಾಸ ಮುಗಿಸಿ ರಾಜಧಾನಿಗೆ ಮರಳುತ್ತಿರುವ ಬೆನ್ನಲ್ಲೇ ಈ ದಿಲ್ಲಿ ಭೇಟಿ ಆಯೋಜನೆಗೊಂಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

ಉನ್ನತ ಮೂಲಗಳ ಪ್ರಕಾರ, ಜುಲೈ 6 ಮತ್ತು 7ರಂದು ಹೈಕಮಾಂಡ್ ನಾಯಕರೊಂದಿಗೆ ಸಚಿವರ ಆಯ್ಕೆ ಕುರಿತು ಅಂತಿಮ ಸುತ್ತಿನ ಸುದೀರ್ಘ ಚರ್ಚೆಗಳು ನಡೆಯಲಿವೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಜುಲೈ 1೦ ರಿಂದ 12 ರೊಳಗಿನ ಅವಧಿಯಲ್ಲಿ ಹೊಸ ಸಚಿವರ ಪ್ರಮಾಣವಚನ ಕಾರ್ಯಕ್ರಮ ನೆರವೇರಲಿದೆ. ಸಂಪುಟ ಸೇರಲಿರುವ ಸಂಭಾವ್ಯರ ಪಟ್ಟಿಯಲ್ಲಿ ಲಕ್ಷ್ಮಣ ಸವದಿ, ಸಲೀಂ ಅಹ್ಮದ್, ಚೆಲುವರಾಯಸ್ವಾಮಿ, ನರೇಂದ್ರಸ್ವಾಮಿ ಹಾಗೂ ಶರತ್ ಬಚ್ಚೇಗೌಡ ಅವರ ಹೆಸರುಗಳು ಮುಂಚೂಣಿಯಲ್ಲಿ ಕೇಳಿಬರುತ್ತಿವೆ. ಬೆಳಗಾವಿ, ಮಂಡ್ಯ, ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಸಮಾನ ಆದ್ಯತೆ ನೀಡಲು ಹೈಕಮಾಂಡ್ ಚಿಂತನೆ ನಡೆಸಿದೆ.

ಮತ್ತೊಂದೆಡೆ, ಈ ಸಂಪುಟ ಪುನಾರಚನೆಯ ಜೊತೆಯಲ್ಲೇ ರಾಜ್ಯದ ವಿವಿಧ ಪ್ರಮುಖ ನಿಗಮ ಮತ್ತು ಮಂಡಳಿಗಳ ಅಧ್ಯಕ್ಷರ ನೇಮಕಾತಿಯಲ್ಲೂ ಭಾರಿ ಬದಲಾವಣೆಯಾಗುವ ಸಾಧ್ಯತೆಯಿದೆ. ಈ ಹಿಂದೆ ಮಾಡಲಾಗಿದ್ದ ಕೆಲವು ನೇಮಕಾತಿಗಳನ್ನು ರದ್ದುಗೊಳಿಸಿ, ಸಚಿವ ಸ್ಥಾನ ವಂಚಿತರಾದ ನಿಷ್ಠಾವಂತ ನಾಯಕರಿಗೆ ಇಲ್ಲಿ ಸೂಕ್ತ ಸ್ಥಾನಮಾನ ಕಲ್ಪಿಸಿಕೊಡಲು ಕೆಪಿಸಿಸಿ ಗಂಭೀರ ಚಿಂತನೆ ನಡೆಸಿದೆ. ಪ್ರಾದೇಶಿಕ ಸಮತೋಲನ ಕಾಯ್ದುಕೊಳ್ಳುವ ಜೊತೆಗೆ ಮುಂಬರುವ ಚುನಾವಣೆಗಳನ್ನು ಎದುರಿಸಲು ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಈ ಬಾರಿ ಹೈಕಮಾಂಡ್ ನಾಯಕರು ಜಾತಿ ಮತ್ತು ಜಿಲ್ಲಾವಾರು ಲೆಕ್ಕಾಚಾರಗಳಿಗೆ ಹೆಚ್ಚಿನ ಆದ್ಯತೆ ನೀಡಲಿದ್ದಾರೆ ಎನ್ನಲಾಗಿದೆ. ದಿಲ್ಲಿ ಪ್ರವಾಸದ ನಂತರವೇ ಅಂತಿಮ ಪಟ್ಟಿ ಪ್ರಕಟವಾಗಲಿದ್ದು, ಆಕಾಂಕ್ಷಿಗಳಲ್ಲಿ ಢವಢವ ಹೆಚ್ಚಾಗಿದೆ.

Cabinet exercise picks up pace again in the state Siddaramaiah and DKS make a joint trip to Delhi

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »