ಬೆಂಗಳೂರಿನಲ್ಲಿ ವಾಣಿಜ್ಯ ಎಲ್ಪಿಜಿ ಹಾಹಾಕಾರ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ತುರ್ತು ಪತ್ರ
ಬೆಂಗಳೂರಿನ ಹೋಟೆಲ್ಗಳು, ರೆಸ್ಟಾರೆಂಟ್ಗಳು, ಪಿಜಿಗಳು ಹಾಗೂ ಕ್ಯಾಟರಿಂಗ್ ವ್ಯವಸ್ಥೆಗಳನ್ನು ಸೇರಿಸಿ ಪ್ರತಿನಿತ್ಯ 50 ಸಾವಿರ ವಾಣಿಜ್ಯ ಸಿಲಿಂಡರ್ಗಳ ಅಗತ್ಯವಿದೆ. ಆದರೆ ಪ್ರಸ್ತುತ ಕೇವಲ 1 ಸಾವಿರ ಸಿಲಿಂಡರ್ ಮಾತ್ರ ಪೂರೈಕೆ ಆಗುತ್ತಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಾಣಿಜ್ಯ ಸಿಲಿಂಡರ್ಗಳಿಗೆ ತೀವ್ರ ಅಭಾವ ಉಂಟಾಗಿದ್ದು, ಹೋಟೆಲ್ ಮತ್ತು ಐಟಿ ಉದ್ಯಮಗಳ ಮೇಲೆ ಗಂಭೀರ ಪರಿಣಾಮ ಬೀರಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ವಾಣಿಜ್ಯ ಸಿಲಿಂಡರ್ಗಳ ಅಗತ್ಯ ಪೂರೈಕೆ ಸಾಧ್ಯವಾಗದ ಹಿನ್ನೆಲೆಯಲ್ಲಿ ಜನತೆ ಸಂಕಷ್ಟಕ್ಕೆ ಸಿಲುಕಿದ್ದು ಸಿಲಿಂಡರ್ಗಳ ಪೂರೈಕೆ ಸುಗುಮಗೊಳಿಸುವಂತೆ ಆಗ್ರಹಿಸಿ ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದಿಪ್ ಸಿಂಗ್ ಪುರಿ ಅವರಿಗೆ ಪತ್ರ ಬರೆದಿದ್ದಾರೆ.
ಬೇಡಿಕೆ 50 ಸಾವಿರ, ಪೂರೈಕೆ 1 ಸಾವಿರ..!
ಬೆಂಗಳೂರಿನ ಹೋಟೆಲ್ಗಳು, ರೆಸ್ಟಾರೆಂಟ್ಗಳು, ಪಿಜಿಗಳು ಹಾಗೂ ಕ್ಯಾಟರಿಂಗ್ ವ್ಯವಸ್ಥೆಗಳನ್ನು ಸೇರಿಸಿ ಪ್ರತಿನಿತ್ಯ 50 ಸಾವಿರ ವಾಣಿಜ್ಯ ಸಿಲಿಂಡರ್ಗಳ ಅಗತ್ಯವಿದೆ. ಆದರೆ ಪ್ರಸ್ತುತ ಕೇವಲ 1 ಸಾವಿರ ಸಿಲಿಂಡರ್ ಮಾತ್ರ ಪೂರೈಕೆ ಆಗುತ್ತಿದೆ. ಇದರಿಂದಾಗಿ ಹೋಟೆಲ್ ಉದ್ಯಮ ನೆಲಕಚ್ಚುವ ಭೀತಿಯಲ್ಲಿದ್ದು, ಈಗಾಗಲೇ ಅನೇಕ ಹೋಟೆಲ್ಗಳು, ಕ್ಯಾಂಟೀನ್ಗಳು ಮುಚ್ಚುವ ಹಂತ ತಲುಪಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ .
ಜನಸಾಮಾನ್ಯರಿಗೂ ತಟ್ಟಿದೆ ವಾಣಿಜ್ಯ ಸಿಲಿಂಡರ್ ಅಭಾವದ ಭೀತಿ :
ಇನ್ನು ವಾಣಿಜ್ಯ ಸಿಲಿಂಡರ್ಗಳ ಕೊರತೆಯಿಂದ ಕೇವಲ ಹೋಟೆಲ್ ಉದ್ಯಮಿಗಳಿಗೆ ಮಾತ್ರ ತೊಂದರೆಯಾಗಿಲ್ಲ, ಹೋಟೆಲ್ ಆಹಾರವನ್ನೇ ಅವಲಂಬಿಸಿರುವ ಲಕ್ಷಾಂತರ ಜನರಿಗೂ ಸಮಸ್ಯೆಯಾಗುತ್ತಿದೆ. ಪಿಜಿಗಳು ಹಾಗೂ ಹೋಟೆಲ್ಗಳು ಮುಚ್ಚುತ್ತಿರುವುದರಿಂದ ವಿದ್ಯಾರ್ಥಿಗಳು ಹಾಗೂ ಪಿಜಿಗಳಲ್ಲಿ ವಾಸವಿರುವ ಐಟಿ ಉದ್ಯೋಗಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದು ಕೃಷಿ ಉತ್ಪನ್ನಗಳ ಮಾರುಕಟ್ಟೆಯ ಮೇಲೂ ಪರಿಣಾಮ ಬೀರಿದೆ. ಅಲ್ಲದೇ ಎಲ್ಪಿಜಿ ಸಿಲಿಂಡರ್ಗಳನ್ನು ಅವಲಂಬಿಸಿರುವ ಆಟೋ ಚಾಲಕರ ಜೀವನೋಪಾಯಕ್ಕೂ ತೊಂದರೆಯಾಗಿದೆ ಎಂದು ಪತ್ರದಲ್ಲಿ ಸಿಎಂ ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ: ಗ್ಯಾಸ್ ಕೊರತೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ಎಸ್ಪಿ ಎಚ್ಚರಿಕೆ
ಭಾರತವು 2 ಎಲ್ಪಿಜಿ ಅನಿಲ ಸಿಲಿಂಡರ್ಗಳನ್ನು ಸ್ವೀಕರಿಸಲಿದ್ದು ಇದರಿಂದ ಸದ್ಯದ ಸಮಸ್ಯೆ ಗಣನೀಯವಾಗಿ ಕಡಿಮೆಯಾಗಲಿದೆ. ಹಾಗೂ ಬೆಂಗಳೂರು ನಗರಕ್ಕೆ ಹೆಚ್ಚಿನ ಪಾಲನ್ನು ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.



