ಧರ್ಮಸ್ಥಳ ವಿಚಾರದಲ್ಲಿ ಸರಕಾರ ಏನು ಮಾಡುತ್ತಿದೆ ? ಶ್ರದ್ದಾ ಕೇಂದ್ರದ ಮೇಲೆ ಯೋಚಿತ ಅಪಪ್ರಚಾರ : ಶಾಸಕ ಸುನಿಲ್‌ ಕುಮಾರ್‌

ಕಾರ್ಕಳ : ಧರ್ಮಸ್ಥಳದಲ್ಲಿ ನಡೆದ ಮಾಧ್ಯಮದವರ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರವನ್ನು ಕಾರ್ಕಳ ಶಾಸಕ ವಿ.ಸುನಿಲ್‌ ಕುಮಾರ್‌ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಅವರು ಸರಕಾರ ಹಾಗೂ ಪೊಲೀಸ್‌ ಇಲಾಖೆ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ.

ಧರ್ಮಸ್ಥಳದ ವಿಚಾರದಲ್ಲಿ ರಾಜ್ಯ ಸರಕಾರ ಏನು ಮಾಡುತ್ತಿದೆ ? ಇದೇನು ತನಿಖೆಯೋ ? ದೊಂಬಿಯೋ ? ಎಂದ ಅವರು, ಹಿಂದೂಗಳ ಶ್ರದ್ದಾ ಕೇಂದ್ರದ ಮೇಲೆ ನಡೆಯುತ್ತಿರುವ ಯೋಚಿತ ಅಪಪ್ರಚಾರದಲ್ಲಿ ಕಾಂಗ್ರೆಸ್‌ ಸರಕಾರ ಯೂ ಟ್ಯೂಬರ್‌ಗಳು ಹಾಗೂ ಅನ್ಯಮತೀಯರ ಕೈಗೊಂಬೆಯಾಗಿ ಕುಣಿಯುತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕದ ಪ್ರಮುಖ ವಾಹಿನಿಯ ವರದಿಗಾರರ ಮೇಲೆ, ಸ್ಥಳೀಯ ನಾಗರಿಕರ ಮೇಲೆ ಈ ಹೋರಾಟಗಾರರ ಸೋಗಿನಲ್ಲಿ ವ್ಯಕ್ತಿಗಳು, ಗೂಂಡಾಗಿರಿ ಮಾಡುತ್ತಿದ್ದರೂ ಪೊಲೀಸ್‌ ಇಲಾಖೆ ಏನು ಮಾಡುತ್ತಿದೆ. ಸಹನೆಗೂ ಒಂದು ಮಿತಿ ಇದೆ. ಮೌನವನ್ನು ದೌರ್ಬಲ್ಯ ಎಂದು ಪರಿಗಣಿಸಬೇಡಿ ಎಂದು ಎಚ್ಚರಿಸಿದ್ದಾರೆ.

Also Read : ಪರಶುರಾಮ ಮೂರ್ತಿ ಸ್ಥಾಪನೆಗೆ ವಾಹನ ಜಾಥಾ

ಧರ್ಮಸ್ಥಳದಲ್ಲಿ ಎಸ್‌ಐಟಿ ತನಿಖೆ ಚುರುಕು

ಧರ್ಮಸ್ಥಳದಲ್ಲಿ ಸಾಮೂಹಿಕವಾಗಿ ಸಮಾಧಿ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ಮುಂದುವರಿದಿದೆ. ದೂರುದಾರ ಒಟ್ಟು 13 ಸ್ಥಳಗಳನ್ನು ಗುರುತಿಸಿದ್ದು ಈ ಪೈಕಿ ಉತ್ಕನನ ಕಾರ್ಯ ಬಹುತೇಕ ಪೂರ್ಣಗೊಂಡಿದೆ.

ಬಂಗ್ಲೆಗುಡ್ಡೆ ಅರಣ್ಯ ಪ್ರದೇಶದಲ್ಲಿ ಅಸ್ತಿ ಪಂಜರದ ಅವಶೇಷಗಳು ಪತ್ತೆಯಾಗಿದೆ ಎನ್ನಲಾಗುತ್ತಿದ್ದು, ಈ ಕುರಿತು ಎಸ್ಐಟಿ ಅಧಿಕಾರಿಗಳು ತನಿಖೆ ಮುಂದುವರಿಸಿದ್ದು, ಧರ್ಮಸ್ಥಳ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

Also Read : ಕರ್ನಾಟಕದಲ್ಲಿ ಮತ್ತೆ ದಲಿತ ಮುಖ್ಯಮಂತ್ರಿ ಕೂಗು

Dharmasthala Case Karkala MLA Sunil Kumar Reaction

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories