ಉಡುಪಿ ಜಿಲ್ಲೆಯಲ್ಲಿ ಪ್ರವಾಹ ಭೀತಿ : ಮಾನಿ ಜಲಾಶಯದಿಂದ ನೀರು ಹೊರಕ್ಕೆ

Udupi Flood Threat : ಕುಂದಾಪುರ : ವಾರಾಹಿ ಯೋಜನೆಯ ಮಾನಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆಯಾಗುತ್ತಿದ್ದು, ಜಲಾಶಯಕ್ಕೆ ಹೇರಳ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.
ಸತತವಾಗಿ ಬೀಳುತ್ತಿರುವ ಮಳೆಯಿಂದಾಗಿ ಜಲಾಶಯದ ನೀರಿನ ಮಟ್ಟ ಏರುತ್ತಿದೆ. ಮಾನಿ ಜಲಾಶಯವು ಗರಿಷ್ಠ ಮಟ್ಟ 594.36 ಮೀಟರ್ ಆಗಿದ್ದು, ಈಗಿನ ನೀರಿನ ಮಟ್ಟ 588.26 ಮೀಟರ್ ನಷ್ಟಿದೆ. ಮಾನಿ ಜಲಾಶಯದ ಒಳ ಹರಿವು 5087 ಕ್ಯೂಸೆಕ್ಸ್ ಆಗಿದೆ.
ಇದೇ ರೀತಿಯಾಗಿ ಮಳೆ ಸುರಿಯುತ್ತಿದ್ದರೆ ಜಲಾಶಯ ಗರಿಷ್ಠ ಮಟ್ಟವನ್ನು ತಲುಪುತ್ತಿದ್ದು, ಯಾವುದೇ ಕ್ಷಣದಲ್ಲಿಯೂ ಜಲಾಶಯದಿಂದ ನೀರನ್ನು ಹೊರ ಬಿಡಲಾಗುತ್ತದೆ.
ಮಾನಿ ಜಲಾಶಯದಿಂದ ಕೆಳಭಾಗದಲ್ಲಿರುವ ಪ್ರದೇಶಗಳಲ್ಲಿನ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡುವಂತೆ ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ ಕಾರ್ಯನಿರ್ವಾಹಕ ಅಭಿಯಂತರ ಸೂಚಿಸಿದ್ದಾರೆ.
ಹೊಸನಗರದಲ್ಲಿ ಭಾರೀ ಮಳೆ, ಮಾನಿ ಜಲಾಶಯ ಭರ್ತಿ
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನಲ್ಲಿರುವ ಮಾಣಿ ಜಲಾಶಯದಲ್ಲಿ ದಾಖಲೆ ಪ್ರಮಾಣದ ನೀರು ಸಂಗ್ರಹವಾಗಿದೆ. ನಿರಂತರ ಮಳೆಯಿಂದಾಗಿ ಒಳಹರಿವು ಹೆಚ್ಚಾಗಿದೆ.
ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ ಯಾವುದೇ ಸಮಯದಲ್ಲಿ ಹೆಚ್ಚುವರಿ ನೀರನ್ನು ಹೊರಬಿಡಲು ಅಧಿಕಾರಿಗಳು ಸಿದ್ಧರಾಗಿದ್ದಾರೆ. ಉಡುಪಿ ಜಿಲ್ಲೆಯ ವಾರಾಹಿ ಮತ್ತು ಹಾಲಾಡಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ.
ಈ ಹಿನ್ನೆಲೆಯಲ್ಲಿ ನದಿಪಾತ್ರದಲ್ಲಿ ವಾಸಿಸುತ್ತಿರುವ ಗ್ರಾಮಸ್ಥರಿಗೆ ಮತ್ತು ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಂತೆ ಸೂಚಿಸಿದ್ದಾರೆ.
ಜಲಾಶಯದಿಂದ ನೀರು ಹೊರಕ್ಕೆ ಬಿಟ್ರೆ ಹಾಲಾಡಿ ಹಾಗೂ ವಾರಾಹಿ ನದಿ ಹರಿಯುವ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಲಿದೆ. ಈ ಕುರಿತು ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ: ಉಡುಪಿ ಜಿಲ್ಲೆಯಲ್ಲಿ ಈಗಾಗಲೇ ಭಾರತೀಯ ಹವಾಮಾನ ಇಲಾಖೆಯಿಂದ (IMD) ರೆಡ್ ಅಲರ್ಟ್ ಘೋಷಿಸಲಾಗಿದೆ.
ಮುಂದಿನ ಕೆಲವು ದಿನಗಳ ಕಾಲ (ಜುಲೈ 27, 2025 ರವರೆಗೆ) ಭಾರೀ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಈ ನಿರಂತರ ಮಳೆಯು ನದಿಗಳ ಹರಿವನ್ನು ಮತ್ತಷ್ಟು ಹೆಚ್ಚಿಸಿ ಪ್ರವಾಹದ ಪರಿಸ್ಥಿತಿಯನ್ನು ಉಲ್ಬಣಗೊಳಿಸಬಹುದು.
ಸದ್ಯದ ಪರಿಸ್ಥಿತಿಯಲ್ಲಿ, ಉಡುಪಿ ಜಿಲ್ಲೆಯ ನದಿಪಾತ್ರದ ಜನರು ಮತ್ತು ಕರಾವಳಿ ಪ್ರದೇಶದವರು ತೀವ್ರ ಎಚ್ಚರಿಕೆ ವಹಿಸಬೇಕು ಮತ್ತು ಜಿಲ್ಲಾಡಳಿತ ನೀಡುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸುರಕ್ಷಿತ ಸ್ಥಳಗಳಿಗೆ ತೆರಳಲು ಸಿದ್ಧರಾಗಿರುವುದು ಉತ್ತಮ.
Udupi Flood Threat : ಎಲ್ಲೆಲ್ಲಾ ಪ್ರವಾಹ ಭೀತಿ ?
ವಾರಾಹಿ, ಹಾಲಾಡಿ, ಕುಬ್ಜಾ, ಖೇಟಾ, ಚಕ್ರಾ, ಪಂಚಗಂಗಾವಳಿ ಮುಂತಾದ ನದಿಗಳ ಪಾತ್ರದಲ್ಲಿರುವ ಎಲ್ಲಾ ತಗ್ಗು ಪ್ರದೇಶಗಳು ಪ್ರವಾಹಕ್ಕೆ ಒಳಗಾಗುವ ಸಾಧ್ಯತೆ ಇದೆ.
ಉಡುಪಿ ನಗರದ ತಗ್ಗು ಪ್ರದೇಶಗಳು: ಉಡುಪಿ ನಗರದ ಕೆಲವು ಭಾಗಗಳು, ವಿಶೇಷವಾಗಿ ಮಠದ ಕೆರೆ, ಬೈಲಕೆರೆ, ನಿಟ್ಟೂರು, ಕೊಡಂಕೂರು, ಚಿಟ್ಪಾಡಿ ಪ್ರದೇಶಗಳು ಕೃತಕ ನೆರೆಗೆ ಒಳಗಾಗುವ ಸಾಧ್ಯತೆ ಇದೆ. ಈ ಹಿಂದೆಯೂ ಈ ಪ್ರದೇಶಗಳು ಜಲಾವೃತಗೊಂಡಿವೆ.
ಕುಂದಾಪುರ, ಬ್ರಹ್ಮಾವರ, ಹೆಬ್ರಿ, ಕಾರ್ಕಳ, ಬೈಂದೂರು ಮತ್ತು ಕಾಪು ತಾಲ್ಲೂಕುಗಳ ತಗ್ಗು ಪ್ರದೇಶಗಳು ಜಲಾವೃತಗೊಳ್ಳುವ ಸಾಧ್ಯತೆಯಿದೆ. ಕಳೆದ ವರ್ಷ ಹೆಬ್ರಿ ತಾಲ್ಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿ ಎಂಬಲ್ಲಿ ಮೇಘಸ್ಫೋಟವಾದಾಗ ಭೀಕರ ಪ್ರವಾಹ ಉಂಟಾಗಿತ್ತು.
Flood threat in Udupi district Water released from Mani Dam In Kannada News



