ನಕಲಿ ಫಲಾನುಭವಿಗಳ ಪತ್ತೆಗೆ ಸರ್ಕಾರದ ಮಹತ್ವದ ಕ್ರಮ : ರಾಜ್ಯ ಸರ್ಕಾರದಿಂದ ಗ್ಯಾರಂಟಿ ಯೋಜನೆ ಪರಿಷ್ಕರಣೆ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗ್ಯಾರಂಟಿ ಯೋಜನೆಯ ಲಾಭವನ್ನು ರಾಜ್ಯದ ಜನತೆ ಕಳೆದ ಮೂರು ವರ್ಷಗಳಿಂದ ಪಡೆಯುತ್ತಿದ್ದಾರೆ .
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗ್ಯಾರಂಟಿ ಯೋಜನೆಯ ಲಾಭವನ್ನು ರಾಜ್ಯದ ಜನತೆ ಕಳೆದ ಮೂರು ವರ್ಷಗಳಿಂದ ಪಡೆಯುತ್ತಿದ್ದಾರೆ. ಆದರೆ ಈ ಯೋಜನೆಗಳ ಲಾಭ ಪಡೆಯುವವರ ಪೈಕಿ ನಕಲಿ ಫಲಾನುಭವಿಗಳ ಸಂಖ್ಯೆಯೇ ಮಿತಿಮೀರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಅಕ್ರಮ ತಡೆಗೆ ಮಹತ್ವದ ಕ್ರಮ ಕೈಗೊಂಡಿದೆ. ನಿಜವಾದ ಫಲಾನುಭವಿಗಳಿಗೆ ಮಾತ್ರ ಈ ಯೋಜನೆಯ ಲಾಭ ಸಿಗುವಂತೆ ಮಾಡಲು ಹೊಸದಾಗಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ. ಈ ಕುರಿತು ಶೀಘ್ರದಲ್ಲಿಯೇ ರಾಜ್ಯ ಸರ್ಕಾರ ಹೊಸ ಆದೇಶವನ್ನು ಹೊರಡಿಸಲಿದೆ.
ಗ್ಯಾರಂಟಿ ಯೋಜನೆ ಜಾರಿಯಾದ ಬಳಿಕ ಅನೇಕರು ಮೃತಪಟ್ಟಿದ್ದಾರೆ. ಆದರೆ ಈ ಬಗ್ಗೆ ಸರ್ಕಾರಕ್ಕೆ ಮನವರಿಕೆ ಮಾಡಿಸದೇ ಗ್ಯಾರಂಟಿ ಯೋಜನೆಗಳ ಲಾಭವನ್ನು ಅನರ್ಹರು ಪಡೆಯುತ್ತಿದ್ದಾರೆ . ಇದು ಮಾತ್ರವಲ್ಲದೇನಕಲಿ ದಾಖಲೆಗಳನ್ನು ಸೃಷ್ಠಿಸಿ ಯೋಜನೆಯ ಲಾಭ ಪಡೆಯುತ್ತಿರುವವರೂ ಇದ್ದಾರೆ. ಈ ಎಲ್ಲದರ ಬಗ್ಗೆ ಶಾಸಕರ ಸಭೆಯಲ್ಲಿ ಚರ್ಚೆಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಮಹತ್ವದ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ.
Also Read: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 24 ಕೋಟಿ ವಂಚನೆ: ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಕೇಸ್
ಈ ವಿಚಾರವಾಗಿ ಸ್ವತಃ ಡಿಸಿಎಂ ಡಿ.ಕೆ ಶಿವಕುಮಾರ್ ಮಾತನಾಡಿದ್ದು, ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅದರಲ್ಲೂ ಗೃಹಲಕ್ಷ್ಮೀ ಹಾಗೂ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಪಟ್ಟಿ ಪರಿಷ್ಕರಣೆ ಮಾಡುವ ತುರ್ತು ಅನಿವಾರ್ಯತೆ ಎದುರಾಗಿದೆ. ಯೋಜನೆಯ ಫಲಾನುಭವಿಗಳ ಮರಣದ ಬಳಿಕವೂ 100 ಕೋಟಿ ರೂಪಾಯಿಗೂ ಅಧಿಕ ಹಣ ನಕಲಿ ಫಲಾನುಭವಿಗಳ ಪಾಲಾಗುತ್ತಿದೆ. ಹೀಗಾಗಿ ಈ ಎಲ್ಲಾ ಅಕ್ರಮಗಳ ತಡಗೆ ಶೀಘ್ರದಲ್ಲಿಯೇ ಗ್ಯಾರಂಟಿ ಯೋಜನೆಗಳಿಗೆ ಹೊಸದಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಿಸಲಿದ್ದೇವೆ ಎಂದು ಹೇಳಿದರು.
Governments important step to detect fake beneficiaries State government revises guarantee scheme



