ಕರ್ನಾಟಕದಲ್ಲಿ ಮುಂಗಾರು ಮಾರುತಗಳು ಸದ್ಯ ಅತ್ಯಂತ ಚುರುಕುಗೊಂಡಿದ್ದು, ವರುಣನ ಅಬ್ಬರ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಇದರ ಬೆನ್ನೆಲ್ಲೇ ಹವಾಮಾನ ಇಲಾಖೆಯು ಮುಂಬರುವ ನಾಲ್ಕು ದಿನಗಳ ಕಾಲ ರಾಜ್ಯಾದ್ಯಂತ ವ್ಯಾಪಕ ಹಾಗೂ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ. ಸುರಕ್ಷತೆಯ ದೃಷ್ಟಿಯಿಂದ ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಜುಲೈ 2ರವರೆಗೆ ಹವಾಮಾನ ಇಲಾಖೆಯು ‘ಆರೆಂಜ್ ಅಲರ್ಟ್’ ಘೋಷಿಸಿದೆ. ಪ್ರಮುಖವಾಗಿ ಜೂನ್ 30ರಂದು ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.
ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾಸನ, ಶಿವಮೊಗ್ಗ ಹಾಗೂ ಮೈಸೂರು ಸೇರಿದಂತೆ ಹಲವು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣದಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Also Read: ನಶೆ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಕ್ರಮ : 100 ಕೋಟಿ ನಷ್ಟವಾದ್ರೂ ಡೋಂಟ್ಕೇರ್ ಎಂದ ಸಿಎಂ
ರಾಜಧಾನಿ ಬೆಂಗಳೂರು, ಗ್ರಾಮಾಂತರ ಪ್ರದೇಶಗಳು ಹಾಗೂ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಹಗುರದಿಂದ ಸಾಧಾರಣ ಮಳೆ ಸಾಧ್ಯತೆಯಿದೆ. ಮಳೆ ತೀವ್ರತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಕರಾವಳಿ ಭಾಗದ ತಗ್ಗು ಪ್ರದೇಶದ ನಿವಾಸಿಗಳು ಎಚ್ಚರಿಕೆಯಿಂದಿರಲು ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಲು ಸೂಚಿಸಲಾಗಿದೆ.
Heavy rains to continue for next four days Orange alert issued for coastal and mountainous areas



