Chandragutti Fair | Nude Worship ritual | Shivamogga News: ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಚಂದ್ರಗುತ್ತಿಯಲ್ಲಿ ಫೆಬ್ರವರಿ 24 ಮತ್ತು 25 ರಂದು ಶ್ರೀ ರೇಣುಕಾಂಬ ದೇವಿಯ ಜಾತ್ರಾ ಮಹೋತ್ಸವ ನಡೆಯಲಿದೆ. ಈ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಎರಡು ದಿನಗಳ ಕಾಲ ‘ಬೆತ್ತಲೆ ಸೇವೆ’ಯನ್ನು ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಆದೇಶ ಹೊರಡಿಸಿದ್ದಾರೆ.
ಪ್ರಮುಖ ಅಂಶಗಳು:
ನಿಷೇಧದ ಹಿನ್ನೆಲೆ: ಕರ್ನಾಟಕ ಪೊಲೀಸ್ ಕಾಯ್ದೆ 1963 ರ ಕಲಂ 35 ರ ಅನ್ವಯ ಈ ನಿರ್ಬಂಧ ಹೇರಲಾಗಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಅನಿಷ್ಟ ಪದ್ಧತಿಗಳನ್ನು ತಡೆಯುವುದು ಈ ಆದೇಶದ ಮುಖ್ಯ ಉದ್ದೇಶವಾಗಿದೆ.
ಯಾವ ಸೇವೆಗಳಿಗೆ ನಿಷೇಧ?:
- ವರದಾ ನದಿಯಲ್ಲಿ ಧಾರ್ಮಿಕ ಸ್ನಾನ ಮಾಡುವುದು.
- ದೇವರಿಗೆ ಮುಡಿ ಕೊಡುವುದು.
- ಪಡ್ಲಿಗಿ ತುಂಬಿಸುವುದು.
- ಪ್ರಮುಖವಾಗಿ ‘ಬೆತ್ತಲೆ ಸೇವೆ’ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
SBI ಯೂತ್ ಫಾರ್ ಇಂಡಿಯಾ ಫೆಲೋಶಿಪ್ 2026: ಪದವೀಧರರಿಗೆ ಸುವರ್ಣಾವಕಾಶ!
ಯಾವುದಕ್ಕೆ ಅವಕಾಶವಿದೆ?
ಈ ನಿಷೇಧಾಜ್ಞೆಯು ಕೇವಲ ಉಲ್ಲೇಖಿತ ಸೇವೆಗಳಿಗೆ ಮಾತ್ರ ಸೀಮಿತವಾಗಿದೆ. ಶ್ರೀ ರೇಣುಕಾಂಬ ದೇವಿಯ ರಥೋತ್ಸವ, ಪೂಜಾ ಕಾರ್ಯಗಳು ಮತ್ತು ಇತರ ಧಾರ್ಮಿಕ ವಿಧಿವಿಧಾನಗಳನ್ನು ನಡೆಸುವುದಕ್ಕೆ ಯಾವುದೇ ಅಡ್ಡಿಯಿರುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಜಾತ್ರೆಯ ಸಮಯದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮತ್ತು ಸರ್ಕಾರದ ಆದೇಶ ಉಲ್ಲಂಘನೆಯಾಗದಂತೆ ಪೋಲಿಸ್ ಇಲಾಖೆ ಹಾಗೂ ಸ್ಥಳೀಯ ಆಡಳಿತವು ಬಿಗಿ ಬಂದೋಬಸ್ತ್ ಕೈಗೊಳ್ಳಲಿದೆ.


