ಬೆಳ್ತಂಗಡಿ : ರಾತ್ರಿ ವೇಳೆ ಮನೆಗೆ ಎಂಟ್ರಿಕೊಟ್ಟ ಚಿರತೆ : ಸಾಕು ನಾಯಿ ಹೊತ್ತೊಯ್ದು ಪರಾರಿ

ಬೆಳ್ತಂಗಡಿ : ran away with a pet dog: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿಗ ವ್ಯಾಘ್ರಗಳ ಕಾಟ ಜೋರಾಗಿದೆ. ಬೆಳ್ತಂಗಡಿ(Belthangady) ತಾಲೂಕಿನ ದಿಡುಪೆ ಗ್ರಾಮದ ಕೊಂಡಾಳು ಎಂಬಲ್ಲಿ ಮನೆಯ ಹೊರಗಡೆ ಮಲಗಿದ್ದ ಸಾಕು ನಾಯಿಯನ್ನು ಚಿರತೆ ಹೊತ್ತೊಯ್ದ ಘಟನೆಯು ಬೆಳಕಿಗೆ ಬಂದಿದೆ.

ಕೊಂಡಾಳು ನಾರಾಯಣ ಗೌಡ ಎಂಬವರಿಗೆ ಸೇರಿದ ಮನೆಯಲ್ಲಿ ಈ ಘಟನೆ ನಡೆದಿದೆ. ಚಿರತೆ ನಾಯಿಯನ್ನು ಹೊತ್ತೊಯ್ಯುತ್ತಿರುವ ದೃಶ್ಯಾವಳಿಗಳು ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸ್ಥಳೀಯವಾಗಿ ವೈರಲ್​ ಆಗಿದೆ.

ರಾತ್ರಿ ವೇಳೆಗೆ ಕೊಂಡಾಳು ನಾರಾಯಣಗೌಡ ಎಂಬವರ ಮನೆಗೆ ಬಂದ ಚಿರತೆಯು ಅಲ್ಲೇ ಮಲಗಿದ್ದ ನಾಯಿಯನ್ನು ತಿನ್ನಲು ಹೊಂಚು ಹಾಕಿದೆ.

ಅಲ್ಲೇ ಮಲಗಿದ್ದ ಬೆಕ್ಕು ಚಿರತೆ ದಾಳಿಯಿಂದ ಪಾರಾಗಿದೆ. ಆದರೆ ನಾಯಿಯನ್ನು ಚಿರತೆಯು ಹೊತ್ತೊಯ್ದಿದೆ. ಸ್ಥಳೀಯ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್​ ಆಗುತ್ತಿದ್ದಂತೆಯೇ ದಿಡುಪೆ ಗ್ರಾಮಸ್ಥರು ಕಂಗಾಲಾಗಿದ್ದಾರೆ.

Also Read: ಸುರತ್ಕಲ್​ : ಬ್ಲಾಕ್‌ ಕಾಂಗ್ರೆಸ್‌ ಉಪಾಧ್ಯಕ್ಷನಿಂದ 1 ಕೋಟಿ ರೂಪಾಯಿ ವಂಚನೆ : ದೂರು ದಾಖಲು

ಈ ಹಿಂದೆ ಕೂಡ ಅನೇಕ ಬಾರಿ ದಿಡುಪೆ ಪರಿಸರದಲ್ಲಿ ಈ ರೀತಿ ಚಿರತೆಯು ಸಾಕು ಪ್ರಾಣಿಗಳನ್ನು ಹೊತ್ತೊಯ್ದಿತ್ತು. ಹೀಗಾಗಿ ಈ ಪರಿಸರದಲ್ಲಿ ಇದೀಗ ಸಂಜೆಯಾಗುತ್ತಿದ್ದಂತೆಯೇ ಮನೆಯಿಂದ ಹೊರ ಬರಲು ಗ್ರಾಮಸ್ಥರು ಯೋಚಿಸುವಂತಾಗಿದೆ.

ಸ್ಥಳೀಯ ಅರಣ್ಯಾಧಿಕಾರಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಚಿರತೆ ಸೆರೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »

Related Stories