ಬೆಂಗಳೂರು : ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೆರ 17 ಮಂದಿ ಮುಸ್ಲೀ ನೌಕರರನ್ನು ಕೆಲಸದಿಂದ ಅಮಾನತ್ತು ಮಾಡಲಾಗಿತ್ತು. ಇದೀಗ ಎಲ್ಲಾ ಸಿಬ್ಬಂದಿಗಳನ್ನು ಮರು ನೇಮಕ ಮಾಡಿಕೊಳ್ಳಲಾಗಿದೆ.
ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಸಿಬ್ಬಂದಿಗಳು ಬಾಗಿಯಾಗಿಲ್ಲ, ಈ ಸಿಬ್ಬಂದಿಗಳನ್ನು ಮರು ನೇಮಕ ಮಾಡಿಕೊಳ್ಳುವಂತೆ ಕ್ರಿಸ್ಟಲ್ ಇನ್ಫೋ ಸೀಸ್ಟಮ್ಸ್ ಅಂಡ್ ಸರ್ವಿಸಸ್ ಸಂಸ್ಥೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ದಕ್ಷಿಣ ವಲಯ ಉಸ್ತುವಾರಿ ಐಎಎಸ್ ಅಧಿಕಾರಿ ತುಳಸಿ ಮದ್ದಿನೇನಿ ಅವರು ಅಮಾನತು ರದ್ದು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಬ್ಬಂದಿಗಳು ಇಂದು ಕೆಲಸಕ್ಕೆ ಹಾಜರಾಗುವ ಸಾಧ್ಯತೆಯಿದೆ.
ಸಂಸದ ತೇಜಸ್ವಿ ಸೂರ್ಯ ಹಾಗೂ ಬಿಜೆಪಿ ಶಾಸಕರು ವಾರ್ ರೂಂ ನಲ್ಲಿ ಬೆಡ್ ಬ್ಲಾಕಿಂಗ್ ದಂಧೆ ನಡೆಯುತ್ತಿ ರುವ ಕುರಿತು ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ 17 ಮುಸ್ಲಿಂ ನೌಕರರನ್ನು ಅಮಾನತು ಮಾಡಲಾಗಿತ್ತು.
