ಸೋಮವಾರ, ಜೂನ್ 16, 2025
Homeನಮ್ಮ ಬೆಂಗಳೂರುHeavy Rain in Bangalore : ರಣಮಳೆಗೆ ಮುದ್ದೆಯಾದ ಬೆಂಗಳೂರು

Heavy Rain in Bangalore : ರಣಮಳೆಗೆ ಮುದ್ದೆಯಾದ ಬೆಂಗಳೂರು

- Advertisement -

ಬೆಂಗಳೂರು : Heavy Rain in Bangalore ರಣಮಳೆಗೆ ಮುದ್ದೆಯಾದ ಬೆಂಗಳೂರಿಗರು ಕಳೆದ ಎರಡು ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಬೆಂಗಳೂರು ಅಕ್ಷರಶಃ ತತ್ತರಿಸಿ ಹೋಗಿದೆ. ನಿನ್ನೆ ರಾತ್ರಿಯೂ ಬೆಂಗಳೂರಿನ ಹಲವೆಡೆ ಭಾರಿ ಮಳೆಯಾಗಿದ್ದು, ಈಗಾಗಲೇ ನೀರು ತುಂಬಿದ್ದ ಪ್ರದೇಶದಲ್ಲಿ ಮತ್ತಷ್ಟು ಸಮಸ್ಯೆ ತಂದಿಟ್ಟಿದೆ.

ಇಕೋಸ್ಪೇಸ್ ಬಳಿಯ ಮಾರತಹಳ್ಳಿ-ಸರ್ಜಾಪುರ ಮಾರ್ಗದ ಎರಡೂ ಬದಿಯ ರಸ್ತೆ ಜಲಾವೃತಗೊಂಡಿದೆ. ನಿನ್ನೆ ಒಂದು ಭಾಗದ ರಸ್ತೆ ಮಾತ್ರ ಮಳೆ ನೀರಿನಿಂದ ಮುಳುಗಿತ್ತು. ಇಂದು ಎರಡು ಬದಿಯ ರಸ್ತೆ ಜಲಾವೃತಗೊಂಡಿದೆ. ರಸ್ತೆ ಮೇಲೆ ನೀರು ರಭಸವಾಗಿ ಹರಿಯುತ್ತಿದೆ. ವಿಭೂತಿಪುರ ಕೆರೆ, ಸಾವಳಕೆರೆಗಳು ಭರ್ತಿಯಾಗಿರುವುದರಿಂದ ನೀರು ರಸ್ತೆಗೆ ನುಗ್ಗುತ್ತಿದೆ.

ಮಾರತ್ ಹಳ್ಳಿ, ಸರ್ಜಾಪುರ, ಎಲೆಕ್ಟ್ರಾನಿಕ್ ಸಿಟಿ, ವರ್ತೂರು, ಇಂದಿರಾನಗರ ಸೇರಿದಂತೆ ಅನೇಕ ಏರಿಯಾಗಳಲ್ಲಿ ಹೆಚ್ಚಾಗಿ ಐಟಿ-ಬಿಟಿ ಕಂಪನಿಗಳೇ ಇವೆ. ಇಲ್ಲಿನ ಉದ್ಯೋಗಿಗಳು ನಿತ್ಯ ಐಶಾರಾಮಿ ಕಾರಿನಲ್ಲೇ ಓಡಾಡ್ತಿದ್ರು. ಆದ್ರೆ, ಮಳೆಯಿಂದಾಗಿ ಈ ಎಲ್ಲ ಏರಿಯಾಗಳು ಜಲಾವೃತವಾಗಿ ಈಗ ಟ್ರ್ಯಾಕ್ಟರ್ ಗಳಮೂಲಕ ಪ್ರಯಾಣಿಸುವ ಸ್ಥಿತಿ ಬಂದಿದೆ. ಹೀಗಾಗಿ ಕೆಲ ಕಂಪನಿಗಳು ರಜೆ ಘೋಷಿಸಿದ್ರೆ, ಇನ್ ಕೆಲವು ಕಂಪನಿಗಳು ವರ್ಕ್ ಫ್ರಮ್ ಹೋಂಗೆ ಸೂಚನೆ ನೀಡಿವೆ.

ಸರ್ಜಾಪುರದ ರೈನ್ ಬೋ ಡ್ರೈವರ್ ಲೇಔಟ್, ಸನ್ನಿ ಬ್ರೂಕ್ಸ್ ಲೇಔಟ್, ರಾಮಗೊಂಡನಹಳ್ಳಿಯ ಹಲವು ಏರಿಯಾ ಸೇರಿದಂತೆ ಅನೇಕ ಪ್ರತಿಷ್ಠಿತ ಬಡಾವಣೆಗಳು ನೀರಿನಲ್ಲೇ ಮುಳುಗಿ ಹೋಗಿವೆ. ಸದ್ಯ ಮುಳುಗಿರೋ ಏರಿಯಾದಲ್ಲಿ ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಎಸ್ ಡಿಆರ್ ಎಫ್ ಸಿಬ್ಬಂದಿ ರಕ್ಷಣಾ ಕಾರ್ಯ ನಡೆಸ್ತಿದ್ದಾರೆ. ವಿಮಾನ ಸಂಚಾರ ಅಸ್ತವ್ಯವಸ್ತ: ಇನ್ನು ಎರಡು ದಿನಗಳಿಂದಲೂ ಮೋಡ ಕವಿದ ವಾತಾವರಣ ಇದ್ದು, ರಾತ್ರಿ ಪೂರ್ತಿ ಮಳೆ ಸುರಿಯುತ್ತಿದೆ. ಹವಾಮಾನ ವೈಪರಿತ್ಯದಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟದಲ್ಲೂ ವ್ಯತ್ಯಾಸವಾಗಲಿದೆ ಅಮಥಾ KIAL ಅಧಿಕಾರಿಗಳು ಹೇಳಿದ್ದಾರೆ.

ಕುಡಿಯುವ ನೀರಿಗೂ ಕಂಟಕ : ಒಂದ್ಕಡೆ ಮಳೆ ಆದ್ರೆ ಮತ್ತೊಂದೆಡೆ ಬೆಂಗಳೂರಿಗೆ ಇಂದು ಮತ್ತು ನಾಳೆ ಕಾವೇರಿ ನಿರು ಸಿಗೋದಿಲ್ಲ ಅಂತಾ  ಜಲಮಂಡಳಿ ಅಧಿಕಾರಿಗಳು ಹೇಳಿದ್ದಾರೆ. ಆ ಮೂಲಕ ಗಾಯದ ಮೇಲೆ ಬರೆ ಎಳೆದಂತಾಗಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿರುವ ಬೆಂಗಳೂರು ಜಲಮಂಡಳಿಯ ಪಂಪಿಂಗ್​ ಸ್ಟೇಷನ್​ಗೆ ನೀರು ನುಗ್ಗಿದೆ.ಇದರಿಂದ ಪಂಪ್​ಗಳು ಹಾಳಾಗಿವೆ.

ಸದ್ಯ ಯಂತ್ರಗಳ ರಿಪೇರಿ ಕೆಲಸ ಚುರುಕಾಗಿ ನಡೆಯುತ್ತಿದೆ. ಹೀಗಾಗಿ ಯಂತ್ರಾಗಾರ ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ಮಾಡಲು ಇನ್ನೂ ಒಂದು ದಿನದ ಸಮಯ ಬೇಕಿರೋದ್ರಿಂದ, ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸರಬರಾಜಿನಲ್ಲಿ ವೆತ್ಯಯ ಉಂಟಾಗಿದೆ. ಹೀಗಾಗಿ ಜಲಮಂಡಳಿ ವತಿಯಿಂದಲೇ ನಗರದ ಹಲವೆಡೆ ಟ್ಯಾಂಕರ್ ಮೂಲಕ ಉಚಿತ ನೀರು ಪೂರೈಸಲಾಗುತ್ತಿದೆ.

ಇದನ್ನೂ ಓದಿ : Delhi Rajpath : ‘ರಾಜ್ ಪಥ್’ ಇನ್ಮುಂದೆ ‘ಕರ್ತವ್ಯ’ಪಥ್

ಇದನ್ನೂ ಓದಿ : HDFC Bank:ಎಚ್‌ಡಿಎಫ್‌ಸಿ ಬ್ಯಾಂಕ್ ಗ್ರಾಹಕರಿಗೆ ಇಲ್ಲಿದೆ ಸಿಹಿ ಸುದ್ದಿ, ಹೊಸದಾಗಿ ಎಸ್‌ಎಂಎಸ್ ಬ್ಯಾಂಕಿಂಗ್ ವೈಶಿಷ್ಟ್ಯವನ್ನು ಪರಿಚಯಿಸಿದೆ

Heavy Rain in Bangalore- employees of IT companies were forced to use tractors to reach their offices

RELATED ARTICLES

Most Popular