bomb threat : ಡಿಕೆಶಿ ಮಾಲೀಕತ್ವದ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದು ಅದೇ ಶಾಲೆಯ ವಿದ್ಯಾರ್ಥಿ : ತನಿಖೆಯಲ್ಲಿ ಬಯಲಾಯ್ತು ಸತ್ಯಾಂಶ
ಬೆಂಗಳೂರು : bomb threat : ರಾಜ್ಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾಲೀಕತ್ವದ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಪ್ರಕರಣದಲ್ಲಿ ಸ್ಫೋಟಕ ಮಾಹಿತಿಯೊಂದು ಲಭ್ಯವಾಗಿದೆ. ಬಾಂಬ್ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿಯನ್ನು ರಾಜ ರಾಜೇಶ್ವರಿ ನಗರ ಠಾಣಾ ಪೊಲೀಸರು ಪತ್ತೆ ಮಾಡಿದ್ದಾರೆ. ರಾಜ ರಾಜೇಶ್ವರಿ ನಗರದ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್ಗೆ ಬಾಂಬ್ ಬೆದರಿಕೆ ಹಾಕಿದವನು ಇದೇ ಶಾಲೆಯ ವಿದ್ಯಾರ್ಥಿ ಎನ್ನುವುದು ತನಿಖೆಯಲ್ಲಿ ಬಯಲಾಗಿದೆ. ಇದೇ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಪರೀಕ್ಷೆಗೆ ಹೆದರಿ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಓದುವುದರಲ್ಲಿ ಬುದ್ಧವಂತನಾಗಿದ್ದ ಈತ ಈ ಬಾರಿಯ ಪರೀಕ್ಷೆಗೆ ಯಾವುದೇ ತಯಾರಿ ನಡೆಸಿರಲಿಲ್ಲ. ಹೀಗಾಗಿ ಜುಲೈ 21ರಂದು ನಡೆಯಬೇಕಿದ್ದ ಪರೀಕ್ಷೆಯಲ್ಲಿ ತಾನು ಅನುತ್ತೀರ್ಣನಾಗುತ್ತೇನೆಂಬ ಭಯ ಈತನಿಗೆ ಕಾಡಿತ್ತು. ಹೀಗಾಗಿ ಹೇಗಾದರೂ ಮಾಡಿ ಪರೀಕ್ಷೆಯಿಂದ ತಪ್ಪಿಸಿಕೊಳ್ಳಬೇಕು ಎಂದು ಪ್ಲಾನ್ ಹಾಕಿದ್ದ ಈ ವಿದ್ಯಾರ್ಥಿಯು ತನ್ನ ಸ್ವಂತ ಲ್ಯಾಪ್ಟಾಪ್ನಿಂದ ಶಾಲೆಗೆ ಬಾಂಬ್ ಬೆದರಿಕೆ ಇ ಮೇಲೆ ಕಳುಹಿಸಿದ್ದ ಎನ್ನಲಾಗಿದೆ.
ಹುಚ್ಚ ವೆಂಕಟ್ ಹೆಸರಿನಲ್ಲಿ ಇ ಮೇಲ್ ಖಾತೆ ರಚಿಸಿದ್ದ ಈತ ಅದರ ಮೂಲಕವೇ ಭಾನುವಾರ ಸಂಜೆ ನ್ಯಾಷನಲ್ ಹಿಲ್ ವ್ಯೂವ್ ಶಾಲೆಯ ಅಧಿಕೃತ ಮೇಲ್ ಐಡಿಗೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ. ಈ ಬಗ್ಗೆ ಆತನ ಪೋಷಕರಿಗೂ ಸಹ ಯಾವುದೇ ಸುಳಿವಿರಲಿಲ್ಲ. ಭಾನುವಾರ ಮೇಲ್ ಕಳಿಸಿದ್ದ ಈತ ಸೋಮವಾರದಂದು ಎಂದಿನಂತೆ ಶಾಲೆಗೆ ತೆರಳಿದ್ದ.
ಪೊಲೀಸರು ಬಂದ ಶಾಲೆಯನ್ನು ತಪಾಸಣೆ ಕೈಗೊಳ್ಳುವಾಗಲೂ ಶಾಲೆಯಲ್ಲೇ ಇದ್ದ ಈತ ಈ ಬಗ್ಗೆ ಯಾರಲ್ಲೂ ಹೇಳಿಕೊಂಡಿರಲಿಲ್ಲ. ಆದರೆ ಇದೀಗ ತನಿಖೆಯಲ್ಲಿ ಸತ್ಯಾಂಶ ಹೊರ ಬಿದ್ದಿದ್ದು ಪೊಲೀಸರು ವಿದ್ಯಾರ್ಥಿನಿಯನ್ನು ವಶಕ್ಕೆ ಪಡೆದು ಬಾಲ ನ್ಯಾಯ ಕಾಯ್ದೆಯ ಅಡಿಯಲ್ಲಿ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ .
ಇದನ್ನು ಓದಿ : Mani Ratnam : ಖ್ಯಾತ ನಿರ್ದೇಶಕ, ನಿರ್ಮಾಪಕ ಮಣಿರತ್ನಂಗೆ ಕೊರೊನಾ ಸೋಂಕು : ಆಸ್ಪತ್ರೆಗೆ ದಾಖಲು
ಇದನ್ನೂ ಓದಿ : KS Eshwarappa : ಮುಸಲ್ಮಾನರು ಎಲ್ಲಿರ್ತಾರೋ ಅಲ್ಲಿ ಸಿದ್ದರಾಮಯ್ಯ ಚುನಾವಣೆಗೆ ನಿಲ್ತಾರೆ : ಕೆ.ಎಸ್ ಈಶ್ವರಪ್ಪ ವ್ಯಂಗ್ಯ
hoax bomb threat from bangalore public school student
Comments are closed.