ಸೋಮವಾರ, ಏಪ್ರಿಲ್ 28, 2025
HomeCrimeCrime News : ಬೈಕಿನಲ್ಲಿ ಚಲಿಸುತ್ತಿದ್ದ ವ್ಯಕ್ತಿಯ ಬರ್ಬರ ಹತ್ಯೆ : ಐವರು ದುಷ್ಕರ್ಮಿಗಳಿಂದ ಕೃತ್ಯ

Crime News : ಬೈಕಿನಲ್ಲಿ ಚಲಿಸುತ್ತಿದ್ದ ವ್ಯಕ್ತಿಯ ಬರ್ಬರ ಹತ್ಯೆ : ಐವರು ದುಷ್ಕರ್ಮಿಗಳಿಂದ ಕೃತ್ಯ

- Advertisement -

ಬೆಂಗಳೂರು : ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದ ವ್ಯಕ್ತಿಯನ್ನು ಆಟೋದಲ್ಲಿ ಬಂದಿದ್ದ ಐವರು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಮಾರ್ಗೊಂಡನಹಳ್ಳಿಯಲ್ಲಿ ನಡೆದಿದೆ.

ಬೆಂಗಳೂರಿನ ರಾಮಮೂರ್ತಿ ನಗರದ ಬೋವಿ ಕಾಲೋನಿಯ ನಿವಾಸಿಯಾಗಿರುವ ಕುಳ್ಳ ವೆಂಕಟೇಶ್‌ ಎಂಬಾತನೇ ಕೊಲೆಯಾದ ದುರ್ದೈವಿ. ಬೆಂಗಳೂರು ಪೂರ್ವ ವಿಭಾಗದ ಮಾರ್ಗೊಂಡನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ತನ್ನ ದ್ವಿಚಕ್ರವಾಹನದಲ್ಲಿ ಕುಳ್ಳ ವೆಂಕಟೇಶ್‌ ಸಂಚರಿಸುತ್ತಿದ್ದ. ಈ ವೇಳೆಯಲ್ಲಿ ಆಟೋದಲ್ಲಿ ಬಂದಿದ್ದ ಐವರು ದುಷ್ಕರ್ಮಿಗಳು ಬೈಕ್‌ ಅಡ್ಡಗಟ್ಟಿದ್ದಾರೆ. ಕುಳ್ಳ ವೆಂಕಟೇಶ್‌ ಕೆಳಗೆ ಬೀಳುತ್ತಿದ್ದಂತೆಯೇ ದುಷ್ಕರ್ಮಿಗಳು ಮಚ್ಚು ಲಾಂಗುಗಳಿಂದ ಬರ್ಬರವಾಗಿ ಕೊಲೆಗೈದು ಪರಾರಿಯಾಗಿದ್ದಾರೆ.

ಇದನ್ನೂ ಓದಿ : ಬಾನಲ್ಲೇ ಮಧುಚಂದ್ರಕೆ, ಯುಗಪುರುಷ ಸಿನಿಮಾ ಶೈಲಿಯಲ್ಲಿ ಪತ್ನಿಯ ಕೊಲೆ ಯತ್ನ ! ಕೊನೆಗೆ ಚಾಕುವಿನಿಂದ ಇರಿದು ಕೊಲೆ

ಜಮೀನು ವಿಚಾರಕ್ಕೆ ಈ ಕೊಲೆ ನಡೆದಿದೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಅವಲಹಳ್ಳಿ ಹಾಗೂ ಕೆ.ಆರ್.ಪುರಂ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆಯನ್ನು ನಡೆಸುತ್ತಿದ್ದಾರೆ. ಪರಾರಿಯಾಗಿರುವ ದುಷ್ಕರ್ಮಿಗಳಿಗೆ ಪೊಲೀಸರು ಬಲೆ ಬೀಸಿದ್ದು, ಆರೋಪಿಗಳ ಬಂಧನದ ನಂತರವಷ್ಟೇ ಹತ್ಯೆಯ ಹಿಂದಿನ ಕಾರಣ ತಿಳಿಯಲಿದೆ.

ಇದನ್ನೂ ಓದಿ : ಮಸಾಜ್‌ ಸೆಂಟರ್‌ನಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ : ಮಾಲೀಕ ಅರೆಸ್ಟ್‌

ಇದನ್ನೂ ಓದಿ : ಮೊಬೈಲ್‌ ಬಳಕೆದಾರರೇ ಎಚ್ಚರ ! ಯಾಮಾರಿದ್ರೆ ಮಾಯವಾಗುತ್ತೆ ನಿಮ್ಮ ಬ್ಯಾಂಕ್‌ ಡೇಟಾ

( Murder of a man riding a bike Bangalore, 5 Accused Escape )

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular