ಸಾರಿಗೆ ಮುಷ್ಕರದ ಎಚ್ಚರಿಕೆ! ಮೇ 20ರಂದು ಬಸ್‌ಗಳು ರಸ್ತೆಗಿಳಿಯುವುದು ಡೌಟು!

ಸಾರಿಗೆ ನೌಕರರ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ನೀಡಿದ್ದ ಪ್ರಸ್ತಾವನೆಯನ್ನು ಸಾರಿಗೆ ಇಲಾಖೆ ನೌಕರರ ಸಮಿತಿ ತಿರಸ್ಕರಿಸಿದೆ

ವೇತನ ಹೆಚ್ಚಳ ಸೇರಿದಂತೆ ವಿವಿಧ ಅನೇಕ ಬೇಡಿಕೆಗಳ ಈಡೇರಿಕೆಯ ವಿಚಾರದಲ್ಲಿ ಅದ್ಯಾಕೋ ಸರ್ಕಾರ ಹಾಗೂ ಸಾರಿಗೆ ಇಲಾಖೆ ನೌಕರರಿಗೆ ತಾಳ ಮೇಳ ಕೂಡಿ ಬರುತ್ತಿಲ್ಲ. ಈಗಾಗಲೇ 12 ಸುತ್ತಿನ ಮಾತುಕತೆ ನಡೆಸಲಾಗಿದ್ದರೂ ಯಾವುದೇ ಪ್ರಯೋಜನವಾದಂತೆ ಕಾಣುತ್ತಿಲ್ಲ. ಸಾರಿಗೆ ನೌಕರರ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ನೀಡಿದ್ದ ಪ್ರಸ್ತಾವನೆಯನ್ನು ಸಾರಿಗೆ ಇಲಾಖೆ ನೌಕರರ ಸಮಿತಿ ತಿರಸ್ಕರಿಸಿದೆ. ಹೀಗಾಗಿ ಮತ್ತೊಮ್ಮೆ ರಾಜ್ಯದ ಪ್ರಯಾಣಿಕರಿಗೆ ಸಾರಿಗೆ ನೌಕರರ ಮುಷ್ಕರದ ಬಿಸಿ ತಟ್ಟುವ ಕಾಲ ಸನ್ನಿಹಿತವಾಗಿದೆ.

ಹೌದು..! ವೇತನ ಏರಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ಸಾರಿಗೆ ನೌಕರರು ಮೇ 20ರಂದು ಅನಿರ್ದಿಷ್ಠಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಹೀಗಾಗಿ ಮೇ ಮೂರನೇ ವಾರದಲ್ಲಿ ಸರ್ಕಾರಿ ಬಸ್​ಗಳು ರೋಡಿಗಿಳಿಯುವುದು ಡೌಟು ಎನ್ನಲಾಗ್ತಿದೆ. ಸರ್ಕಾರ ಹಾಗೂ ಸಾರಿಗೆ ನೌಕರರ ನಡುವಿನ ಹಗ್ಗಜಗ್ಗಾಟದಲ್ಲಿ ಪ್ರಯಾಣಿಕರು ಬಡವಾಗಬೇಕಿದೆ.

ಇದನ್ನೂ ಓದಿ : ಜನಸಾಮಾನ್ಯರಿಗೆ ಬಿಗ್ ಶಾಕ್! ಸನ್ ಫ್ಲವರ್ ಆಯಿಲ್ ದರ ಕೇಳಿದ್ರೆ ಶಾಕ್ ಆಗ್ತೀರಾ! ಎಷ್ಟು ಏರಿಕೆಯಾಗಿದೆ ಗೊತ್ತಾ?

ಇನ್ನು ಸರ್ಕಾರದ ಎದುರು ಸಾರಿಗೆ ಇಲಾಖೆ ನೌಕರರು ಇಟ್ಟಿರುವ ಬೇಡಿಕೆ ನೋಡೋದಾದ್ರೆ, ಕಳೆದ 38 ತಿಂಗಳಿನಿಂದ ಬಾಕಿ ಇರುವ ವೇತನವನ್ನು ಒಮ್ಮೆಲೆ ಪಾವತಿಸಬೇಕು. 2024ರ ಜನವರಿ 1ಕ್ಕೆ ಪೂರ್ವಾನ್ವಯವಾಗುವಂತೆ ಮೂಲವೇತನದಲ್ಲಿ 25 ಪರ್ಸೆಂಟ್​ ಏರಿಕೆ ಮಾಡಬೇಕು. ಮೂಲ ವೇತನದಲ್ಲಿ ತುಟ್ಟಿಭತ್ಯೆಯನ್ನೂಸೇರಿಸಬೇಕು. ಒಪ್ಪಿಕೊಂಡಿರುವ ₹1,272 ಕೋಟಿ ಬಾಕಿ ಮೊತ್ತವನ್ನು ಕಂತುಗಳಲ್ಲಿ ನೀಡುವ ಬದಲು ಏಕಗಂತು ಪಾವತಿ ಮಾಡಬೇಕು. ಬಾಟಾ ಮತ್ತು ಕೋವಿಡ್ ಸಮಯದ ಬಾಕಿ ಹಣವನ್ನು ತಕ್ಷಣವೇ ನೀಡಬೇಕು ಎಂದು ಆಗ್ರಹಿಸಿದೆ.

ಇದನ್ನೂ ಓದಿ : ಶೃಂಗೇರಿ ಚುನಾವಣಾ ಕದನಕ್ಕೆ ಬಿಗ್ ಟ್ವಿಸ್ಟ್: ಶಾಸಕ ರಾಜೇಗೌಡರಿಗೆ ಅಂಚೆ ಮತಗಳ ಮರು ಎಣಿಕೆ ಆಘಾತ; ಶೃಂಗೇರಿ ಶಾಸಕರಾಗ್ತಾರಾ ಡಿಎನ್ ಜೀವರಾಜ್ ?

ಆದರೆ ಸಾರಿಗೆ ನೌಕರರ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಹಿಂದೆಟು ಹಾಕುತ್ತಿದೆ. ಎಲ್ಲಕ್ಕಿಂತ ಮುಖ್ಯವಾಗಿ ಬಾಕಿ ಇರುವ 38 ತಿಂಗಳ ವೇತನವನ್ನು ಒಮ್ಮೆಲೆ ಪಾವತಿಸುವುದು ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆನೋವಾಗಿದೆ. ಆದರೆ ಬೇಡಿಕೆ ಈಡೇರದ ಹೊರತು ಬಸ್​ಗಳು ರಸ್ತೆಗಿಳಿಯುವ ಮಾತೇ ಇಲ್ಲ ಎಂದು ಸಾರಿಗೆ ನೌಕರರು ಪಟ್ಟು ಹಿಡಿದಿದ್ದಾರೆ. ರಾಜ್ಯ ಸರ್ಕಾರ 3 ವರ್ಷಗಳ ಯಶಸ್ವಿ ಆಡಳಿತವನ್ನು ಪೂರ್ಣಗೊಳಿಸುವ ಸಂದರ್ಭದಲ್ಲಿಯೇ ರಾಜ್ಯ ಸಾರಿಗೆ ನೌಕರರು ಈ ನಿರ್ಧಾರಕ್ಕೆ ಬಂದಿದ್ದು, ಈ ಸವಾಲನ್ನು ರಾಜ್ಯ ಸರ್ಕಾರ ಹೇಗೆ ನಿಭಾಯಿಸಲಿದೆ ಅನ್ನೋದನ್ನ ಕಾದು ನೋಡಬೇಕಿದೆ.

Meghana Pranuth | ಮೇಘನಾ ಪ್ರಣೂತ್‌

ಮೇಘನಾ ಪ್ರಣೂತ್‌ ಮೂಲತಃ ಉಡುಪಿ ಜಿಲ್ಲೆಯವರು. ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣವನ್ನು ಪಡೆದಿದ್ದು, ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಸಿನಿಮಾ, ಕ್ರೀಡೆ, ವಾಣಿಜ್ಯ, ಫ್ಯಾಷನ್‌ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದಾರೆ. ಇದೀಗ ನ್ಯೂಸ್‌ ನೆಕ್ಸ್ಟ್‌ನಲ್ಲಿ ನಿರೂಪಕರಾಗಿ, ಕಂಟೆಂಟ್‌ ಕ್ರಿಯೆಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ.

Related Stories