ಕೊಲ್ಕತಾ : ಪೌರತ್ವತಿದ್ದುಪಡಿ ಕಾಯ್ದೆ ವಿಷಯದಲ್ಲಿ ಹಸ್ತಕ್ಷೇಪ ಮಾಡಿರುವ ಪಾಕಿಸ್ತಾನಕ್ಕೆ ತೀವ್ರ ತರಾಟೆಗೆ ತೆಗೆದುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ನಿಮ್ಮ ದೇಶದಲ್ಲಿದ್ದ ನಮ್ಮ ಹಿಂದೂ ಅಲ್ಪಸಂಖ್ಯಾತರಿಗೆ ಏಕೆ ಕಿರುಕುಳ ನೀಡಿದಿರಿ ಎಂದು ಪ್ರಶ್ನಿಸಿದರು. ಕೊಲ್ಕತ್ತಾದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯನ್ನು ಮತ್ತೊಮ್ಮೆ ಬಲವಾಗಿ ಸಮರ್ಥಿಸಿಕೊಂಡರು.
ಭಾರತದ ಈ ವಿಷಯದಲ್ಲಿ ಪಾಕಿಸ್ತಾನ ಮೂಗು ತೂರಿಸುತ್ತಿದೆ. ಇದು ನಮಗೆ ಸಂಬಂಧಪಟ್ಟ ವಿಷಯ. ಇಷ್ಟಕ್ಕೂ ಆ ದೇಶದಿಂದ ಧಾರ್ಮಿಕ ಕಿರುಕುಳ ತಾಳಲಾರದೆ ಭಾರತಕ್ಕೆ ಬಂದಿರುವ ಹಿಂದೂ ಅಲ್ಪಸಂಖ್ಯಾತರಿಗೆ ನಾವು ಪೌರತ್ವ ನೀಡುತ್ತಿದ್ದೇವೆ. ಇಷ್ಟಕ್ಕೂ ನೀವು ಹಿಂದೂ ಅಲ್ಪಸಂಖ್ಯಾತರಿಗೆ ಏಕೆ ವಿನಾ ಕಾರಣ ಕಿರುಕುಳ ನೀಡಿದಿರಿ ಎಂದು ಮೋದಿ ತರಾಟೆಗೆ ತೆಗೆದುಕೊಂಡರು.