ಸೋಮವಾರ, ಏಪ್ರಿಲ್ 28, 2025
HomeCrimeThanjavur : ತೇರು ಎಳೆಯುವ ವೇಳೆಯಲ್ಲಿ ವಿದ್ಯುತ್‌ ಅವಘಡ : 11 ಮಂದಿ ದುರ್ಮರಣ

Thanjavur : ತೇರು ಎಳೆಯುವ ವೇಳೆಯಲ್ಲಿ ವಿದ್ಯುತ್‌ ಅವಘಡ : 11 ಮಂದಿ ದುರ್ಮರಣ

- Advertisement -

ಚೆನ್ನೈ : ದೇವರ ರಥೋತ್ಸವದ ವೇಳೆಯಲ್ಲಿ ವಿದ್ಯುತ್‌ ತಂತಿ ತಗುಲಿ 11 ಮಂದಿ ಸಾವನ್ನಪ್ಪಿರುವ (11 die in high-voltage) ಘಟನೆ ತಮಿಳುನಾಡಿನ ತಾಂಜಾವೂರು (Thanjavur) ಸಮೀಪದ ಕಾಳಿಮೇಡು ಗ್ರಾಮದಲ್ಲಿ ನಡೆದಿದೆ. ಗುರು ಪೂಜೆಯ ಹಿನ್ನೆಲೆಯಲ್ಲಿ ಚಿತ್ರೈ ಉತ್ಸವದ ಮೆರವಣಿಗೆ ಮಧ್ಯರಾತ್ರಿ 12 ಗಂಟೆಯಿಂದ ಬೆಳಗಿನ ಜಾವದ ವರೆಗೆ ನಡೆದಿದ್ದು. ಈ ವೇಳೆಯಲ್ಲಿ ಈ ಅವಘಡ ಸಂಭವಿಸಿದೆ.

ಕಾಳಿಮೇಡು ಮೇಲಿನ ದೇವಸ್ಥಾನದಲ್ಲಿ 94ನೇ ಚಿತ್ರೋತ್ಸವದ ಮುನ್ನಾದಿನ ರಾತ್ರಿ ಉತ್ಸವ ಸಡಗರ ಸಂಭ್ರಮದಿಂದ ನಡೆಯಿತು. ರಥವನ್ನು ಮಣ್ಣಿನ ರಸ್ತೆಯಲ್ಲಿ ತರಲಾಗಿತ್ತು. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಕಾಳಿಮೇಡು ಪ್ರದೇಶದ ಪುತಲೂರು ರಸ್ತೆಯಲ್ಲಿ ರಥ ನಿಂತಾಗ ಹೈವೋಲ್ಟೇಜ್ ತಂತಿ ತಗುಲಿ ರಥಕ್ಕೆ ವಿದ್ಯುತ್ ಸ್ಪರ್ಶವಾಗಿತ್ತು. ಘಟನೆಯಲ್ಲಿ ಇಬ್ಬರು ಬಾಲಕರು ಸೇರಿದಂತೆ 11 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 11ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಎಲ್ಲಾ ಗಾಯಾಳುಗಳನ್ನು ತಂಜೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರಲ್ಲಿ ನಾಲ್ವರನ್ನು ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ವೇಳೆ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದ ಒಬ್ಬಾಕೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇದರಿಂದಾಗಿ ರಥೋತ್ಸವದಲ್ಲಿ ವಿದ್ಯುತ್ ಅವಘಡದಿಂದ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ : ಸಹಾಯಕ ಪ್ರಾಧ್ಯಾಪಕ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪಿ ಬಂಧನ

ಇದನ್ನೂ ಓದಿ : Gang Rape : ಸಾಮೂಹಿಕ ಅತ್ಯಾಚಾರವೆಸಗಿ ಮಹಿಳೆಯ ಹತ್ಯೆ : ಮತ್ತೊಂದು ನೀಚ ಕೃತ್ಯ

11 electrocuted during temple chariot procession in Tamil Nadu’s Thanjavur

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular