17 killed Lightning Thunderstorm : ಸಿಡಿಲು, ಗುಡುಗು ಸಹಿತ ಮಳೆಗೆ 17 ಮಂದಿ ಬಲಿ

ಬಿಹಾರ : ಸಿಡಿಲು, ಗುಡುಗು ಸಹಿತ ಬಾರೀ ಮಳೆಗೆ 17 ಮಂದಿ ಬಲಿಯಾಗಿರುವ (17 killed Lightning Thunderstorm ) ಘಟನೆ ಬಿಹಾರದ ಭಾಗಲ್ಪುರ್‌ , ವೈಶಾಲಿ, ಖಗಾರಿಯಾ, ಬಂಕಾ ಹಾಗೂ ಕತಿಹಾರ್‌ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನಡೆದಿದೆ. ಇದೀಗ ಮೃತ ಕುಟುಂಬಕ್ಕೆ ರಾಜ್ಯ ಸರಕಾರ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ.

ಬಿಹಾರದಲ್ಲಿ ಸುರಿದ ಭಾರೀ ಮಳೆಯ ಜೊತೆಗೆ ಸಿಡಿಲ ಆರ್ಭಟಕ್ಕೆ ರಾಜ್ಯದ ಹಲವು ಜಿಲ್ಲೆಗಳು ತತ್ತರಿಸಿ ಹೋಗಿವೆ. ಭಾಗಲ್ಪುರ್ ಜಿಲ್ಲೆಯೊಂದರಲ್ಲಿಯೇ ಆರು ಮಂದಿ ಸಾವನ್ನಪ್ಪಿದ್ದಾರೆ. ಇನ್ನು ವೈಶಾಲಿ ಜಿಲ್ಲೆಯಲ್ಲಿ ಮೂರು, ಖಗಾರಿಯಾ ಮತ್ತು ಬಂಕಾದಿಂದ ತಲಾ ಇಬ್ಬರು, ಕತಿಹಾರ್, ಸಹರ್ಸಾ, ಮಾಧೇಪುರ ಮತ್ತು ಮುಂಗೇರ್‌ ಜಿಲ್ಲೆಯಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಒಟ್ಟು ಬಿಹಾರದಲ್ಲಿ ಸಿಡಿಲು, ಗುಡುಗು ಸಹಿತ ಮಳೆಗೆ 17 ಮಂದಿ ಬಲಿಯಾಗಿದ್ದಾರೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ದುರಂತದ ಕುರಿತು ವಿಷಾದ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಅಲ್ಲದೇ ಹವಾಮಾನ ವೈಪರೀತ್ಯದ ಬಗ್ಗೆ ವಿಪತ್ತು ನಿರ್ವಹಣಾ ಮಂಡಳಿ ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ. ಅಲ್ಲದೇ ನಿವಾಸಿಗಳು ಕೂಡ ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿಕೊಂಡಿದ್ದಾರೆ.

ನೈಋತ್ಯ ಮುಂಗಾರು ಬಿಹಾರ, ಗುಜರಾತ್, ಮಧ್ಯಪ್ರದೇಶ, ಛತ್ತೀಸ್‌ಗಢ, ಗಂಗಾನದಿ ಪಶ್ಚಿಮ ಬಂಗಾಳ, ಜಾರ್ಖಂಡ್ ಮತ್ತು ವಿದರ್ಭ ಪ್ರದೇಶದ ಭಾಗಗಳಲ್ಲಿ ಮುಂದುವರೆದಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿತ್ತು. ಹವಾಮಾನ ಸಂಸ್ಥೆಯ ಭಾನುವಾರದ ಮುನ್ಸೂಚನೆಯು ಬಿಹಾರ, ಜಾರ್ಖಂಡ್, ಒಡಿಶಾ ಮತ್ತು ಗಂಗಾನದಿ ಪಶ್ಚಿಮ ಬಂಗಾಳ ಮುಂದಿನ ಐದು ದಿನಗಳಲ್ಲಿ ಗುಡುಗು ಮತ್ತು ಮಿಂಚುಗಳೊಂದಿಗೆ ವ್ಯಾಪಕ ಮಳೆಯಾಗಲಿದೆ ಎಂದು ಹೇಳಿದೆ.

ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ಇದನ್ನೂ ಓದಿ : PM Narendra Modi stay : ಮೂರನೇ ಬಾರಿಗೆ Radisson Blu ಹೋಟೆಲ್‌ನಲ್ಲಿ ಮೋದಿ ವಾಸ್ತವ್ಯ: ಹೊಟೇಲ್ ಸುತ್ತ ಸರ್ಪಗಾವಲು

ಇದನ್ನೂ ಓದಿ : ICC T20 World Cup : ಇದೇ ಟೀಮ್ ಇಂಡಿಯಾದ ಬೆಸ್ಟ್ ಪ್ಲೇಯಿಂಗ್ XI ; ಇದು News Next ಚಾಯ್ಸ್

17 killed Due to Lightning Thunderstorm in Bihar

Comments are closed.