ಚೆನ್ನೈ : ಭಾರತೀಯ ಸೇನೆಯ ಮುಖ್ಯಸ್ಥರಾಗಿರುವ ಬಿಪಿನ್ ರಾವತ್ ( CDS Gen Bipin Rawat ) ಸೇರಿದಂತೆ ನಾಲ್ವರು ಸೇನಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಫ್ಟರ್ ತಮಿಳುನಾಡಿನ ಕುನೂರಿನಲ್ಲಿ (Army chopper crashes) ಪತನವಾಗಿದೆ. ಘಟನೆಯಲ್ಲಿ ಮೂವರನ್ನು ರಕ್ಷಿಸಲಾಗಿದ್ದು, ಉಳಿದವರಿಗಾಗಿ ಹುಟುಕಾಟ ನಡೆಸಲಾಗುತ್ತಿದೆ.
ತಮಿಳುನಾಡು ರಾಜ್ಯದ ಕುನೂರಿನಲ್ಲಿ ಈ ಘಟನೆ ನಡೆದಿದ್ದು, ಬೆಂಕಿಯ ಕೆನ್ನಾಲಗೆಗೆ ಸಿಲುಕಿರುವ ಸೇನಾ ಹೆಲಿಕಾಪ್ಟ್ರ್ ಹೊತ್ತಿ ಉರಿಯುತ್ತಿದೆ. ಘಟನೆಯಲ್ಲಿ ಮೂವರು ಅಧಿಕಾರಿ ಗಳು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ನೀಲಗಿರಿ ಜಿಲ್ಲೆಯ ವೆಲ್ಲಿಂಗ್ಟನ್ ಕಟೋಂನ್ಮೆಂಟ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆಯಲ್ಲಿ ಓರ್ವ ಅಧಿಕಾರಿ ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯವನ್ನು ನಡೆಸಲಾಗುತ್ತಿದೆ. ಹೊತ್ತಿ ಉರಿಯುತ್ತಿರುವ ಹೆಲಿಕಾಫ್ಟ್ನ ಬೆಂಕಿ ನಂದಿಸಲು ಸ್ಥಳೀಯರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಹರಸಾಹಸವನ್ನು ಪಡುತ್ತಿದ್ದಾರೆ. ಪತನಕ್ಕೆ ಒಳಗಾಗಿರುವ ಹೆಲಿಕಾಫ್ಟರ್ನಲ್ಲಿ ಸೇನಾ ಮುಖ್ಯಸ್ಥರಾದ ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದರು ಎನ್ನಲಾಗುತ್ತಿದೆ.

ಹೆಲಿಕಾಫ್ಟರ್ನಲ್ಲಿ ಸಿಡಿಎಸ್ ಬಿಪಿನ್ ರಾವತ್ ಮತ್ತು ಅವರ ಪತ್ನಿ ಹೆಲಿಕಾಪ್ಟರ್ನಲ್ಲಿದ್ದರು ಎನ್ನಲಾಗುತ್ತಿದೆ. ಅಲ್ಲದೇ ಹೆಲಿಕಾಪ್ಟರ್ನಲ್ಲಿ 14 ಮಂದಿ ಸದಸ್ಯರು ಪ್ರಯಾಣಿಸುತ್ತಿದ್ದರು. ಸದ್ಯದ ಮಾಹಿತಿಯ ಪ್ರಕಾರ ಮೂವರನ್ನು ರಕ್ಷಿಸಲಾಗಿದ್ದು, ಉಳಿದವರಿಗಾಗಿ ಶೋಧ ಕಾರ್ಯವನ್ನು ನಡೆಸಲಾಗುತ್ತಿದೆ. ದಟ್ಟ ಮಂಜು ಅಥವಾ ತಾಂತ್ರಿಕ ದೋಷದಿಂದ ಹೆಲಿಕಾಫ್ಟರ್ ಪತನವಾಗಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಈ ಕುರಿತು ಪ್ರಾಥಮಿಕ ತನಿಖೆಯನ್ನು ನಡೆಸಲಾಗುತ್ತಿದೆ. ತಮಿಳುನಾಡಿನ ಕೂನೂರಿನ ವೆಲ್ಲಿಂಗ್ಟನ್ ಆರ್ಮಿ ಸೆಂಟರ್ನಿಂದ ಹೆಲಿಕಾಪ್ಟರ್ ಹೊರಟಿತ್ತು. ಜಿಲ್ಲಾಡಳಿತ ಹಾಗೂ ಭಾರತೀಯ ಸೇನೆ ಘಟನೆಯ ಕುರಿತು ಯಾವುದೇ ಮಾಹಿತಿಯನ್ನೂ ನೀಡಿಲ್ಲ.

ಇನ್ನು ಸೇನಾ ಹೆಲಿಕಾಫ್ಟರ್ನಲ್ಲಿ ಸೇನಾ ಮುಖ್ಯಸ್ಥರಾದ ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದರು ಅನ್ನೋ ಕುರಿತು ಭಾರತೀಯ ವಾಯು ಸೇನೆ ಟ್ವೀಟರ್ನಲ್ಲಿ ಮಾಹಿತಿಯನ್ನು ಹಂಚಿಕೊಂಡಿದೆ. ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರಿದ್ದ IAF Mi-17V5 ಹೆಲಿಕಾಪ್ಟರ್ ಇಂದು ತಮಿಳುನಾಡಿನ ಕೂನೂರು ಬಳಿ ಅಪಘಾತಕ್ಕೀಡಾಗಿದೆ.
ಅಪಘಾತದ ಕಾರಣ ತಿಳಿಯಲು ತನಿಖೆಗೆ ಆದೇಶಿಸಲಾಗಿದೆ ಎಂದು ಟ್ವೀಟ್ ಮಾಡಿದೆ.
Army Helicopter Crash Live Updates: IAF Mi-17V5 chopper with CDS Bipin Rawat on board crashes in Ooty#Mi17V5 #ARMY #bipinrawat #BREAKING #BreakingNews pic.twitter.com/pkQDPbAYed
— News Next (@newsnext_live) December 8, 2021
An IAF Mi-17V5 helicopter, with CDS Gen Bipin Rawat on board, met with an accident today near Coonoor, Tamil Nadu.
— Indian Air Force (@IAF_MCC) December 8, 2021
An Inquiry has been ordered to ascertain the cause of the accident.
ಇದನ್ನೂ ಓದಿ : Become an IAS officer :ಹನಿಮೂನ್ ದಿನವೇ ಪತ್ನಿಯ ಎದುರು ವಿಚಿತ್ರ ಬೇಡಿಕೆ ಇಟ್ಟ ಪತಿರಾಯ..! ನ್ಯಾಯಕ್ಕಾಗಿ ಕೋರ್ಟ್ ಮೆಟ್ಟಿಲೇರಿದ ಮಹಿಳೆ
ಇದನ್ನೂ ಓದಿ : Suicide Machine : ಉಸಿರು ನಿಂತಿದ್ದೇ ಗೊತ್ತಾಗಲ್ಲ, ಬಂತು ಸುಸೈಡ್ ಮೆಶಿನ್: ಭಾರತದಲ್ಲಿ ಬಳಕೆ ಶಿಕ್ಷಾರ್ಹ ಅಪರಾಧ !
Army chopper crashes in Tamil Nadu, CDS Gen Bipin Rawat was on board