ಜೂನ್ ಅಂತ್ಯದೊಳಗೆ ಸಂಪುಟ ವಿಸ್ತರಣೆ ಪಕ್ಕಾ : ಹಾಲಾಡಿ, ಲಿಂಬಾವಳಿ ಸೇರಿ ನಾಲ್ವರ ಸೇರ್ಪಡೆ

0

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಆತಂಕದ ನಡುವಲ್ಲೇ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿವೆ. ಜೂನ್ ಅಂತ್ಯದೊಳಗೆ ರಾಜ್ಯದ ಸಚಿವ ಸಂಪುಟ ವಿಸ್ತರಣೆಯಾಗುವುದು ಬಹುತೇಕ ಖಚಿತ. ಕುಂದಾಪುರ ಶಾಸಕರ ಹಾಲಾಡಿ ಶ್ರೀನಿವಾಸ ಶೆಟ್ಟಿ, ಅರವಿಂದ ಲಿಂಬಾವಳಿ, ರಾಮದಾಸ್ ಹಾಗೂ ರೆಬೆಲ್ ಶಾಸಕ ಉಮೇಶ್ ಕತ್ತಿ ಸಂಪುಟ ಸೇರ್ಪಡೆಯಾಗುವುದು ಖಚಿತವಾಗಿದೆ.

Yediyurappa 1
ಜೂನ್ ಅಂತ್ಯದೊಳಗೆ ಸಂಪುಟ ವಿಸ್ತರಣೆ ಪಕ್ಕಾ : ಹಾಲಾಡಿ, ಲಿಂಬಾವಳಿ ಸೇರಿ ನಾಲ್ವರ ಸೇರ್ಪಡೆ 4

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ದ ಮುನಿಸಿಕೊಂಡಿರುವ ಉತ್ತರ ಕರ್ನಾಟಕ ಭಾಗದ ಶಾಸಕರು ರಹಸ್ಯ ಸಭೆ ನಡೆಸಿದ ಬೆನ್ನಲ್ಲೇ ರಾಜಕೀಯ ಚಟುವಟಿಕೆ ಗರಿಗೆದರಿದೆ. ಶಾಸಕರ ಅಸಮಾಧಾನ ತಣಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡಲು ಬಿ.ಎಸ್.ಯಡಿಯೂರಪ್ಪ ಮನಸ್ಸು ಮಾಡಿದ್ದಾರೆ.

Alvas1
ಜೂನ್ ಅಂತ್ಯದೊಳಗೆ ಸಂಪುಟ ವಿಸ್ತರಣೆ ಪಕ್ಕಾ : ಹಾಲಾಡಿ, ಲಿಂಬಾವಳಿ ಸೇರಿ ನಾಲ್ವರ ಸೇರ್ಪಡೆ 5

ಈ ಕುರಿತು ಪಕ್ಷ ಹೈಕಮಾಂಡ್ ಬಳಿಯೂ ಅನುಮತಿ ಕೋರಿದ್ದಾರೆ. ಈಗಾಗಲೇ ಉಮೇಶ್ ಕತ್ತಿ ಹಾಗೂ ರಾಮದಾಸ್ ಜೊತೆಗೆ ಸಿಎಂ ಯಡಿಯೂರಪ್ಪ ಮಾತುಕತೆ ನಡೆಸಿದ್ದಾರೆ. ಅಲ್ಲದೇ ಅರವಿಂದ ಲಿಂಬಾವಳಿ ಈ ಬಾರಿ ಸಂಪುಟ ಸೇರುವುದು ಬಹುತೇಕ ಖಚಿತ. ಉಳಿದಂತೆ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಲು ಯಡಿಯೂರಪ್ಪ ಮುಂದಾಗಿದ್ದಾರೆ.

Vidana soudha
ಜೂನ್ ಅಂತ್ಯದೊಳಗೆ ಸಂಪುಟ ವಿಸ್ತರಣೆ ಪಕ್ಕಾ : ಹಾಲಾಡಿ, ಲಿಂಬಾವಳಿ ಸೇರಿ ನಾಲ್ವರ ಸೇರ್ಪಡೆ 6

ಹಾಲಾಡಿ ಶ್ರೀನಿವಾಸ ಶೆಟ್ಟಿ, ರಾಮದಾಸ್, ಉಮೇಶ್ ಕತ್ತಿ ಹಾಗೂ ಅರವಿಂದ ಲಿಂಬಾವಳಿ ಅವರ ಹೆಸರನ್ನು ಈಗಾಗಲೇ ಯಡಿಯೂರಪ್ಪ ಹೈಕಮಾಂಡ್ ಗೆ ಕಳುಹಿಸಿಕೊಟ್ಟಿದ್ದಾರೆ. ಹೈಕಮಾಂಡ್ ಒಪ್ಪಿಗೆ ಕೊಟ್ರೆ ಜೂನ್ ಮೊದಲ ವಾರದಲ್ಲಿಯೇ ಸಂಪುಟಕ್ಕೆ ನಾಲ್ವರು ಸೇರ್ಪಡೆಯಾಗಲಿದ್ದಾರೆ. ಇಲ್ಲವಾದ್ರೆ ಜೂನ್ ಅಂತ್ಯದೊಳಗೆ ಸಂಪುಟ ವಿಸ್ತರಣೆ ಮಾಡುವ ಕುರಿತು ಯಡಿಯೂರಪ್ಪ ನಾಲ್ವರು ಶಾಸಕರಿಗೆ ಆಶ್ವಾಸನೆ ನೀಡಿದ್ದಾರೆನ್ನಲಾಗುತ್ತಿದೆ.

Leave A Reply

Your email address will not be published.