Group Captain Varun Singh : ಹೆಲಿಕಾಪ್ಟರ್ ದುರಂತದಲ್ಲಿ ಗಾಯಗೊಂಡಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ನಿಧನ
ಬೆಂಗಳೂರು : ಡಿಸೆಂಬರ್ 8ರಂದು ಸಿಡಿಎಸ್ ಜನರಲ್ ಬಿಪಿನ್ ರಾವತ್ ಹಾಗೂ ಇತರೆ 12 ಮಂದಿಯನ್ನು ಬಲಿತೆಗೆದುಕೊಂಡಿದ್ದ ಹೆಲಿಕಾಪ್ಟರ್ ( Chopper Crash ) ದುರಂತದಲ್ಲಿ ಬದುಕುಳಿದಿದ್ದ ಏಕೈಕ ಸೇನಾನಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್(Group Captain Varun Singh) ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಹೆಲಿಕಾಪ್ಟರ್ ದುರಂತದಲ್ಲಿ ರಕ್ಷಿಸಲ್ಪಟ್ಟಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ರನ್ನು ಮೊದಲು ವೆಲ್ಲಿಂಗ್ಟನ್ ಮಿಲಿಟರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಮಿಲಿಟರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ವರುಣ್ ಸಿಂಗ್ರನ್ನು ಲೈಫ್ ಸಪೋರ್ಟ್ನಲ್ಲಿ ಇಡಲಾಗಿತ್ತು.
ಡಿಸೆಂಬರ್ 8ರಂದು ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಗಾಯಗೊಂಡು ಇಂದು ಬೆಳಗ್ಗೆ ನಿಧನರಾದ ಕೆಚ್ಚೆದಯ ವೀರ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ ನಿಧನ ವಾರ್ತೆಯನ್ನು ತಿಳಿಸಲು ಭಾರತೀಯ ವಾಯುಪಡೆಯು ದುಃಖಿತವಾಗಿದೆ. ವರುಣ್ ಸಿಂಗ್ ನಿಧನಕ್ಕೆ ಭಾರತೀಯ ವಾಯುಪಡೆ ಸಂತಾಪ ಸೂಚಿಸುತ್ತಿದೆ. ಹಾಗೂ ದುಃಖತೃಪ್ತ ಕುಟುಂಬದವರ ಜೊತೆಯಲ್ಲಿ ಐಎಫ್ ದೃಢವಾಗಿ ನಿಂತಿದೆ ಎಂದು ಟ್ವೀಟ್ ಮಾಡಲಾಗಿದೆ. ಶೌರ್ಯ ಚಕ್ರ ಪ್ರಶಸ್ತಿ ವಿಜೇತ ವರುಣ್ ಸಿಂಗ್ ಬದುಕುಳಿಯಲೆಂದು ದೇಶದ ಮೂಲೆ ಮೂಲೆಯ ಜನರು ಪ್ರಾರ್ಥಿಸಿದ್ದರು. ಮೊನ್ನೆ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದ ಏಕೈಕ ಸೇನಾನಿ ಇವರಾಗಿದ್ದರು.
ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಬಚಾವಾಗಿದ್ದ ಏಕೈಕ ಸೇನಾಧಿಕಾರಿ ವರುಣ್ ಸಿಂಗ್ !
ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ದುರಂತಕ್ಕೀಡಾಗಿದ್ದು ಈ ಅಪಘಾತದಲ್ಲಿ ಜನರಲ್ ಬಿಪಿನ್ ರಾವತ್ ಸೇರಿದಂತೆ 13 ಮಂದಿ ಸಾವನ್ನಪ್ಪಿದ್ದಾರೆ ಎಂಬ ಅಧಿಕೃತ ಮಾಹಿತಿ ಹೊರಬಿದ್ದಿದೆ. ಬಿಪಿನ್ ರಾವತ್ ಜೊತೆ ಪ್ರಯಾಣ ಮಾಡುತ್ತಿದ್ದ ಪತ್ನಿ ಮಧುಲಿಕಾ ರಾವತ್ ಕೂಡ ಈ ಅಪಘಾತದಲ್ಲಿ ನಿಧನರಾಗಿದ್ದಾರೆ,
ವೆಲ್ಲಿಂಗ್ಟನ್ನ ಡಿಫೆನ್ಸ್ ಸರ್ವೀಸ್ ಸ್ಟಾಫ್ ಕಾಲೇಜಿಗೆ ಭೇಟಿ ನೀಡಲೆಂದು ಎಂಐ 15 ವಿ5 ಹೆಲಿಕಾಪ್ಟರ್ನಲ್ಲಿ ಒಟ್ಟು 14 ಮಂದಿ ಪ್ರಯಾಣಿಸುತ್ತಿದ್ದರು. ತಮಿಳುನಾಡಿನ ನೀಲಗಿರಿ ಅರಣ್ಯ ವ್ಯಾಪ್ತಿಯ ಕುನೂರು ಎಂಬಲ್ಲಿ ಈ ದುರ್ಘಟನೆ ಸಂಭವಿಸಿದೆ. ದುರಂತ ಸ್ಥಳದಲ್ಲಿಯೇ ಸಾಕಷ್ಟು ಮೃತ ದೇಹಗಳು ಪತ್ತೆಯಾಗಿದ್ದವು. ಡಿಎನ್ಎ ಪರೀಕ್ಷೆ ಮೂಲಕ ಮೃತ ದೇಹಗಳ ಗುರುತು ಪತ್ತೆ ಹಚ್ಚಲಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಿಪಿನ್ ರಾವತ್ರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ವಿಧಿವಶರಾಗಿದ್ದಾರೆ.
14 ಮಂದಿ ಪ್ರಯಾಣಿಸುತ್ತಿದ್ದ ಈ ಹೆಲಿಕಾಪ್ಟರ್ನಲ್ಲಿದ್ದ ಏಕೈಕ ಸೇನಾಧಿಕಾರಿ ಮಾತ್ರ ಬದುಕುಳಿದಿದ್ದಾರೆ. ಭಾರತೀಯ ವಾಯುಪಡೆ ನೀಡಿರುವ ಮಾಹಿತಿಯ ಪ್ರಕಾರ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಎಸ್ಸಿ ಎಂಬವರು ಮಾತ್ರ ಈ ದುರ್ಘಟನೆಯಿಂದ ಬಚಾವಾಗಿದ್ದಾರೆ. ವರುಣ್ ಸಿಂಗ್ ಗಾಯಗಳಾಗಿದ್ದು ವೆಲ್ಲಿಂಗ್ಟನ್ ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಗಿದೆ. 2020ರಲ್ಲಿ ವೈಮಾನಿಕ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ತನ್ನ ಎಲ್ಸಿಎ ತೇಜಸ್ ಯುದ್ಧ ವಿಮಾನವನ್ನು ಉಳಿಸಿದ್ದಕ್ಕಾಗಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ರಿಗೆ ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯಂದು ಕೇಂದ್ರ ಸರ್ಕಾರ ಶೌರ್ಯ ಚಕ್ರ ನೀಡಿ ಗೌರವಿಸಿದೆ.
ಇದನ್ನು ಓದಿ: Pet Dog Died :ಪೊಲೀಸರ ವಿರುದ್ಧ ಸಾಕು ನಾಯಿ ಕೊಂದ ಆರೋಪ ಹೊರಿಸಿದೆ ಈ ಕುಟುಂಬ..!
ಇದನ್ನೂ ಓದಿ: Jarkiholi master plan : ಬಿಜೆಪಿಗೆ ಅನಿವಾರ್ಯವಾದ್ರಾ ಲಖನ್ : ರಮೇಶ್ ಜಾರಕಿಹೊಳಿ ಪ್ಲ್ಯಾನ್ ಏನು ಗೊತ್ತಾ?!
Group Captain Varun Singh, Injured In Chopper Crash, Dies In Hospital
Comments are closed.