ಸೋಮವಾರ, ಏಪ್ರಿಲ್ 28, 2025
HomeNationalಡಿಕೆ.ಶಿವಕುಮಾರ್'ಗೆ ಕೆಪಿಸಿಸಿ ಪಟ್ಟಾಭಿಷೇಕ: ರಾಷ್ಟ್ರದ ಗಮನಸೆಳೆದ Virtual Rally

ಡಿಕೆ.ಶಿವಕುಮಾರ್’ಗೆ ಕೆಪಿಸಿಸಿ ಪಟ್ಟಾಭಿಷೇಕ: ರಾಷ್ಟ್ರದ ಗಮನಸೆಳೆದ Virtual Rally

- Advertisement -

ಬೆಂಗಳೂರು : ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಸಾರಥಿಯಾಗಲಿದ್ದು, ಪಟ್ಟಾಭಿಷೇಕಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು ನಡೆಯಲಿರುವ ಪಟ್ಟಾಭಿಷೇಕ ಸಮಾರಂಭ ವಿಶ್ವದಾಖಲೆಯನ್ನು ಬರೆಯಲಿದ್ದು, ವರ್ಚುವಲ್ ರಾಲಿ ಇದೀಗ ರಾಷ್ಟ್ರದ ಗಮನ ಸೆಳೆದಿದೆ.

ಕೆಪಿಸಿಸಿ ಕಚೇರಿ ಹಿಂಭಾಗದಲ್ಲಿರುವ ನೂತನ ಸಭಾಂಗಣದಲ್ಲಿ ಹಿರಿಯ ನಾಯಕರ ಉಪಸ್ಥಿತಿಯಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಲು ಪ್ರತಿಜ್ಞಾ ಕಾರ್ಯಕ್ರಮದ ವೇದಿಕೆ ಸಜ್ಜುಗೊಂಡಿದೆ. ಪಟ್ಟಾಭಿಷೇಕದ ಹಿನ್ನೆಲೆಯಲ್ಲಿ ಆಯೋಜಿಸಿರುವ ವರ್ಚುವಲ್ ರಾಲಿಯ ಮೂಲಕ 10 ಲಕ್ಷ ಮಂದಿ ಕಾರ್ಯಕರ್ತರ ಸಮ್ಮುಖದಲ್ಲಿ ಶಿವಕುಮಾರ್ ಅವರು ಕೆಪಿಸಿಸಿಯ 41ನೇ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ.

ಕಾರ್ಯಕ್ರಮ ವೀಕ್ಷಣೆಗೆ ರಾಜ್ಯಾದ್ಯಂತ 7,800 ಕಡೆ ವ್ಯವಸ್ಥೆ ನಡೆಸಲಾಗಿದ್ದು, ಜ್ಯೂಮ್ ಆ್ಯಪ್ ಮೂಲಕ ನೇರವಾಗಿ ಕಾರ್ಯಕ್ರಮ ವೀಕ್ಷಿಸುವ ಹಾಗೂ ಪ್ರತಿಕ್ರಿಯೆ ವ್ಯಕ್ತಪಡಿಸುವ ತಾಂತ್ರಿಕ ವ್ಯವಸ್ಥೆ ಮಾಡಲಾಗಿದೆ. ರಾಜ್ಯದಲ್ಲೇ ಮೊಟ್ಟಮೊದಲ ಬಾರಿಗೆ ನಡೆಯುತ್ತಿರುವ ವರ್ಚುಯಲ್ ಪದಗ್ರಹಣಕ್ಕೆ ಡಿ.ಕೆ.ಶಿವಕುಮಾರ್ ಜು.1ರಂದು ಬುಧವಾರ ಖುದ್ದು ಪ್ರಾಯೋಗಿಕ ಪರೀಕ್ಷೆ ನಡೆಸಿದರು. ರಾಜ್ಯದ್ಯಂತ ಕಾಂಗ್ರೆಸ್ ಕಾರ್ಯಕರ್ತರ ಉತ್ಸಾಹ ಎಲ್ಲೆ ಮೀರಿದ್ದು, ಪ್ರತಿನಗರ, ಪಟ್ಟಣದಲ್ಲೂ ಡಿಕೆ.ಶಿವಕುಮಾರ್ ಅವರಿಗೆ ಶುಭ ಕೋರುವ ಬ್ಯಾನರ್’ಗಳು ರಾರಾಜಿಸುತ್ತಿವೆ.

ರಾಜ್ಯಾದ್ಯಂತ ಬರೋಬ್ಬರಿ 10 ಲಕ್ಷ ಮಂದಿ ಕಾಂಗ್ರೆಸ್ ಕಾರ್ಯಕರ್ತರು ಡಿ.ಕೆ.ಶಿವಕುಮಾರ್ ಜೊತೆ ಧ್ವನಿಗೂಡಿಸಿ ಸಂವಿಧಾನ ಪೀಠಿಕೆ ಓದುವ ಹಾಗೂ ಪ್ರತಿಜ್ಞಾವಿಧಿ ಸ್ವೀಕರಿಸುವ ಮೂಲಕ ಶಿವಕುಮಾರ್ ಪದಗ್ರಹಣಕ್ಕೆ ಸಾಥ್ ನೀಡಲಿದ್ದಾರೆ. ಈ 10 ಲಕ್ಷ ಮಂದಿ ಪಕ್ಷವನ್ನು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ತರುವ ಪ್ರತಿಜ್ಞೆ ಮಾಡಲಿದ್ದಾರೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular