ಮಂಗಳವಾರ, ಏಪ್ರಿಲ್ 29, 2025
HomeNationalಸಹಕಾರಿ ಬ್ಯಾಂಕುಗಳಲ್ಲಿ ಠೇವಣಿ ಇಟ್ಟಿದ್ದೀರಾ : ಕೇಂದ್ರ ಸರಕಾರದಿಂದ ಗುಡ್‌ನ್ಯೂಸ್‌

ಸಹಕಾರಿ ಬ್ಯಾಂಕುಗಳಲ್ಲಿ ಠೇವಣಿ ಇಟ್ಟಿದ್ದೀರಾ : ಕೇಂದ್ರ ಸರಕಾರದಿಂದ ಗುಡ್‌ನ್ಯೂಸ್‌

- Advertisement -

ನವದೆಹಲಿ : ಇತ್ತೀಚಿನ ವರ್ಷಗಳಲ್ಲಿ ಹಲವು ಬ್ಯಾಂಕುಗಳು ದಿವಾಳಿಯಾಗಿವೆ. ಇದರಿಂದಾಗಿ ಲಕ್ಷಾಂತರ ಮಂದಿ ಠೇವಣಿದಾರರು ಹಣ ಕಳೆದುಕೊಂಡು ಕಂಗಾಲಾಗಿದ್ದಾರೆ. ಇಂತಹ ಗ್ರಾಹಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಗುಡ್‌ನ್ಯೂಸ್‌ ಕೊಟ್ಟಿದೆ.

ಬ್ಯಾಂಕುಗಳಲ್ಲಿ ಠೇವಣಿ ಇಟ್ಟಿರುವ ಗ್ರಾಹಕರ ರಕ್ಷಣೆಗಾಗಿ ಕೇಂದ್ರ ಸರಕಾರ ವಿಮೆ ಖಾತರಿ ಮೊತ್ತವನ್ನು 1 ಲಕ್ಷ ರೂಪಾಯಿಯಿಂದ 5 ಲಕ್ಷ ರೂಪಾಯಿಗೆ ಏರಿಕೆ ಮಾಡಿದೆ. ಇದರಿಂದಾಗಿ ಸಹಕಾರಿ ಬ್ಯಾಂಕುಗಳಲ್ಲಿ ಠೇವಣಿ ಇಟ್ಟಿರುವ ಲಕ್ಷಾಂತರ ಗ್ರಾಹಕರಿಗೆ ಅನುಕೂಲವಾಗಲಿದೆ.

ಕೇಂದ್ರ ಸರಕಾರ ಹಳೆಯ ನಿಮಯದಲ್ಲಿ ಬದಲಾವಣೆ ತಂದಿದೆ. ಕೇಂದ್ರ ಸರಕಾರದ ವಿಮೆ ಖಾತರಿ ಮೊತ್ತ ಸಾರ್ವಜನಿಕ ಹಾಗೂ ಖಾಸಗಿ ಬ್ಯಾಂಕುಗಳಿಗೆ ಮಾತ್ರವಲ್ಲದೇ ಈ ನಿಮಯ, ವಿಮೆ ಖಾತರಿ, ಸಹಕಾರಿ ಬ್ಯಾಂಕುಗಳು, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದ ಸಹಕಾರ ಸೊಸೈಟಿ ರಿಜಿಸ್ಟರ್‌ ಅಡಿಯಲ್ಲಿ ನೊಂದಾಯಿತ ಹಣಕಾಸು ಸಂಸ್ಥೆಗಳಿಗೂ ಅನ್ವಯವಾಗಲಿದೆ.

ಈ ನಿಯಮದ ಪ್ರಕಾರ ನೀವು ಠೇವಣಿ ಇಟ್ಟಿರುವ ಬ್ಯಾಂಕುಗಳು ದಿವಾಳಿಯಾದ್ರೆ ನಿಮಗೆ ಕನಿಷ್ಠ ಐದು ಲಕ್ಷ ರೂಪಾಯಿ ಪರಿಹಾರ ಲಭ್ಯವಾಗಲಿದೆ. ಸರಕಾರ ಈ ನಿಮಯದಿಂದ ಕೋಟ್ಯಾಂತರ ಠೇವಣಿದಾರರಿಗೆ ಅನುಕೂಲವಾಗಲಿದೆ.

( Have Deposits in Cooperative Banks: Good News from Central Government )

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular