ಹಿಮಾಚಲ ಪ್ರದೇಶ : Himachal Pradesh : ಅವರೆಲ್ಲ ಬೆಳಗ್ಗೆ ಎಂದಿನಂತೆ ತಮ್ಮ ಕೆಲಸಕ್ಕೆ ಹೊರಟವರು, ಭಾನುವಾರದ ರಜೆಯನ್ನು ಮುಗಿಸಿ ಮಕ್ಕಳು ಕೂಡ ಶಾಲೆಗೆ ಹೊರಟಿದ್ದರು. ಆದರೆ ವಿಧಿಯಾಟ ಅವರ ಬಾಳಲ್ಲಿ ಇನ್ನೊಂದು ಕತೆಯನ್ನೇ ಬರೆದಿತ್ತು. ಖಾಸಗಿ ಬಸ್ ಹತ್ತಿ ಹೊರಟಿದ್ದ ಅವರ ಬಾಳಲ್ಲಿ ಸಂಪೂರ್ಣ ಕತ್ತಲು ಕವಿದಿತ್ತು. ಖಾಸಗಿ ಬಸ್ ಕಂದಕಕ್ಕೆ ಉರುಳಿದ ಪರಿಣಾಮ ಶಾಲಾ ಮಕ್ಕಳು ಸೇರಿದಂತೆ 16 ಮಂದಿ ಮೃತಪಟ್ಟಿದ್ದಾರೆ. ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಕುಲು ಡೆಪ್ಯೂಟಿ ಕಮಿಷನರ್ ಅಶುತೋಷ್ ಗರ್ಗ್ ಈ ವಿಚಾರವಾಗಿ ಅಧಿಕೃತ ಮಾಹಿತಿಯನ್ನು ನೀಡಿದ್ದು ಸಾಯಿಂಜ್ಗೆ ತೆರಳುತ್ತಿದ್ದ ಬಸ್ ಬೆಳಗ್ಗೆ 8:30ರ ಸುಮಾರಿಗೆ ಜಂಗ್ಲಾ ಗ್ರಾಮದ ಬಳಿಯಲ್ಲಿ ಕಂದಕಕ್ಕೆ ಉರುಳಿದೆ ಎಂದು ಮಾಹಿತಿ ನೀಡಿದ್ದಾರೆ.
ಅಪಘಾತದ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸ್ ಅಧಿಕಾರಿಗಳು ಹಾಗೂ ಜಿಲ್ಲಾಡಳಿತ ಸ್ಥಳಕ್ಕೆ ಧಾವಿಸಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಕೂಡಲೇ ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಚಿಕಿತ್ಸೆ ಮುಂದುವರಿದಿದೆ ಎಂದು ಅಶುತೋಷ್ ಗರ್ಗ್ ಮಾಹಿತಿ ನೀಡಿದ್ದಾರೆ. ಗಾಯಗೊಂಡವರಲ್ಲಿ ಬಹುತೇಕರ ಸ್ಥಿತಿ ಚಿಂತಾಜನಕವಾಗಿರೋದ್ರಿಂದ ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆಯೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ನಡುವೆ ಹಿಮಾಚಲ ಪ್ರದೇಶ ಸಿಎಂ ಜೈರಾಮ್ ಠಾಕೂರ್ ಈ ವಿಚಾರವಾಗಿ ಟ್ವೀಟ್ ಮಾಡಿದ್ದು ಗಾಯಾಳುಗಳಿಗೆ ನೆರವಾಗಲು ಸಂಪೂರ್ಣ ರಕ್ಷಣಾ ತಂಡ ಅಪಘಾತ ನಡೆದ ಸ್ಥಳದಲ್ಲಿದೆ ಎಂದು ಹೇಳಿದ್ದಾರೆ.
ಕುಲ್ಲುವಿನ ಸೈಂಜ್ ಕಣಿವೆಯಲ್ಲಿ ಖಾಸಗಿ ಬಸ್ ಅಪಘಾತಕ್ಕೆ ಒಳಗಾದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಗಾಯಾಳುಗಳನ್ನು ರಕ್ಷಿಸುವ ಹಾಗೂ ಆಸ್ಪತ್ರೆಗೆ ಸಾಗಿಸುವ ಕಾರ್ಯಗಳನ್ನು ಮಾಡಲು ರಕ್ಷಣಾ ತಂಡ ಸ್ಥಳದಲ್ಲಿದೆ.ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ನಾನು ಪ್ರಾರ್ಥಿಸುತ್ತೇನೆ ಅಂತಾ ಹಿಮಾಚಲ ಪ್ರದೇಶ ಸಿಎಂ ಜೈರಾಮ್ ಠಾಕೂರ್ ಟ್ವೀಟಾಯಿಸಿದ್ದಾರೆ.
10 ದಿನಗಳ ಹಿಂದೆಯಷ್ಟೇ ಹಿಮಾಚಲ ಪ್ರದೇಶ ಶಿಮ್ಲಾ ಜಿಲ್ಲೆಯಲ್ಲಿ ಪಿಕಪ್ ವಾಹನ ಕಂದಕಕ್ಕೆ ಉರುಳಿದ ಪರಿಣಾಮ 28 ಮಂದಿ ಗಾಯಗೊಂಡಿದ್ದರು. 9 ಮಂದಿ ಸ್ಥಿತಿ ಗಂಭೀರವಾಗಿದ್ದು ಇವರನ್ನು ಇಂದಿರಾ ಗಾಂಧಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಥಿಯೋಗ್ ಬಳಿಯ ಬುಗಾರೊ ನುಲ್ಲಾ ಎಂಬಲ್ಲಿ ಪಿಕಪ್ ವಾಹನವು ಕಮರಿಗೆ ಬಿದ್ದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದೆಹಲಿಯ ಗುರುದ್ವಾರದಲ್ಲಿ ಮಲಗುತ್ತಿದ್ದ ಹುಡುಗ.. ಈಗ ಕ್ರಿಕೆಟ್ ಜಗತ್ತಿನ ಟಾಕ್ ಆಫ್ ದಿ ಟೌನ್ !
ಗುಡ್ ನ್ಯೂಸ್ : ರೋಹಿತ್ ಶರ್ಮಾಗೆ ಕೋವಿಡ್ ನೆಗೆಟಿವ್ !
Himachal Pradesh: 16, including school children, dead as private bus falls into gorge in Kullu
Comments are closed.