Sushil Kumar : ಸಾಗರ್‌ ರಾಣಾ ಕೊಲೆ ಪ್ರಕರಣ : ಸುಶೀಲ್‌ ಕುಮಾರ್‌ಗೆ ಜಾಮೀನು ನಿರಾಕರಿಸಿದ ಹೈಕೋರ್ಟ್‌

ನವದೆಹಲಿ : ಸಾಗರ್‌ ರಾಣಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಸ್ತಿಪಟು ಸುಶೀಲ್ ಕುಮಾರ್ ಅವರಿಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.

ಸುಶೀಲ್ ಕುಮಾರ್ ತನ್ನ ವಿರುದ್ಧ ಸುಳ್ಳು ಪ್ರಕರಣವನ್ನು ಸೃಷ್ಟಿಸಲಾಗಿದೆ. ಹೀಗಾಗಿ ಪ್ರಕರಣದಲ್ಲಿ ತನಗೆ ಜಾಮೀನು ನೀಡುವಂತೆ ನ್ಯಾಯಾಲಯಕ್ಕೆ ಕೋರಿದ್ದರು. ಆದರೆ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಶಿವಾಜಿ ಆನಂದ್ ಅವರು ಪ್ರಾಸಿಕ್ಯೂಷನ್ ಮತ್ತು ಪ್ರತಿವಾದದ ವಾದಗಳನ್ನು ಸುದೀರ್ಘವಾಗಿ ಆಲಿಸಿದ ನಂತರ ಸುಶೀಲ್ ಕುಮಾರ್ ಗೆ ಜಾಮೀನು ನೀಡಲು ನಿರಾಕರಿಸಿದ್ದಾರೆ.

ಸುಶೀಲ್‌ ಕುಮಾರ್‌ ಹಾಗೂ ಸ್ನೇಹಿತರು ಸೇರಿಕೊಂಡು ಜೂನಿಯರ್‌ ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ ಸಾಗರ್‌ ರಾಣಾನನ್ನು ಕೊಲೆ ಮಾಡಿದ್ದು. ನಂತರ ಆತನ ಸ್ನೇಹಿತರ ಮೇಲೆ ಹಲ್ಲೆ ನಡೆಸಿದ್ದರು. ಪ್ರಕರಣದಲ್ಲಿ ಸುಶೀಲ್‌ ಕುಮಾರ್‌ ಹೆಸರು ಕೇಳಿಬಂದ ಬೆನ್ನಲ್ಲೇ 38 ವರ್ಷದ ಕುಸ್ತಿಪಟು ಸುಶೀಲ್‌ ಕುಮಾರ್‌ನನ್ನು ಮೇ 23 ರಂದು ಬಂಧಿಸಲಾಗಿತ್ತು. ಕಳೆದ ಜೂನ್ 2, 2021 ರಿಂದಲೂ ಜೈಲಿನಲ್ಲಿಯೇ ಉಳಿದುಕೊಂಡಿದ್ದಾರೆ.

ಇದನ್ನೂ ಓದಿ : T20 World Cup 2021 : 1 ಗಂಟೆಯಲ್ಲಿ ಸೋಲ್ಡೌಟ್‌ ಆಯ್ತು ಭಾರತ – ಪಾಕ್‌ ಪಂದ್ಯದ ಟಿಕೆಟ್‌

ಇದನ್ನೂ ಓದಿ : Sagar Rana ಕೊಲೆ ಪ್ರಕರಣ : ಖ್ಯಾತ ಕುಸ್ತಿಪಟು ಸುಶೀಲ್ ಕುಮಾರ್ ಅರೆಸ್ಟ್

( Sagar Rana Murder Case Delhi HC refuses to grant bail to Sushil Kumar )

Comments are closed.