Yogi adityanath: ಮಥುರಾದಲ್ಲಿ ಮಾಂಸ ಮತ್ತು ಮದ್ಯ ಮಾರಾಟ ನಿಷೇಧ: ವ್ಯಾಪಾರಿಗಳಿಗೆ ಶಾಕ್ ನೀಡಿದ ಸಿಎಂ

ಮಥುರಾ: ಶ್ರೀಕೃಷ್ಣನ ಜನ್ಮಸ್ಥಳ ಮಥುರಾದಲ್ಲಿ  ಶಾಶ್ವತವಾಗಿ ಮದ್ಯ ಹಾಗೂ ಮಾಂಸ ಮಾರಾಟ ನಿಷೇಧಿಸಲು ಸಿಎಂ ಯೋಗಿ ಆದಿತ್ಯನಾಥ ನಿರ್ಧರಿಸಿದ್ದು, ಇದಕ್ಕಾಗಿ ಅಗತ್ಯವಾದ ಕಾರ್ಯಯೋಜನೆ ರೂಪಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಾಂಸ ಹಾಗೂ ಮದ್ಯ ಮಾರಾಟದಲ್ಲಿ ತೊಡಗಿಕೊಂಡಿರುವವರನ್ನು ಗುರುತಿಸಿ ಅವರಿಗೆ ಪರ್ಯಾಯ ಯೋಜನೆ ರೂಪಿಸಿಕೊಡಲು ಅಧಿಕಾರಿಗಳಿಗೆ ಸಿಎಂ ಯೋಗಿ ಆದಿತ್ಯನಾಥ ಘೋಷಿಸಿದ್ದಾರೆ. ಸಿಎಂ ಯೋಗಿ ಈ ನಿರ್ಧಾರ ವಿವಾದಕ್ಕೆ ಕಾರಣವಾಗುವ ಸಾಧ್ಯತೆ ಇದೆ.

ಮಥುರಾದಲ್ಲಿ ನಡೆದ ಶ್ರೀಕೃಷ್ಣಜನ್ಮಾಷ್ಟಮಿ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಯೋಗಿ ಆದಿತ್ಯನಾಥ, ಮಥುರಾದಲ್ಲಿ ಮದ್ಯ ಹಾಗೂ ಮಾಂಸ ಮಾರಾಟ ನಿಷೇಧಿಸಲು ನಿರ್ಧರಿಸಲಾಗಿದೆ. ಈ ವ್ಯಾಪಾರದಲ್ಲಿ ತೊಡಗಿಕೊಂಡವರು ಹಾಲಿನ ವ್ಯಾಪಾರದಂತಹ ಪರ್ಯಾಯ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದ್ದಾರೆ.

ಸಿಎಂ ಯೋಗಿ ಆದಿತ್ಯನಾಥ ಈ ಆದೇಶ ಸ್ಥಳೀಯ ವ್ಯಾಪಾರಿಗಳು ಹಾಗೂ ಮದ್ಯ ಮಾರಾಟದಲ್ಲಿ ತೊಡಗಿಕೊಂಡವರ ಅಸಮಧಾನಕ್ಕೆ ಕಾರಣವಾಗಿದ್ದು, ಪ್ರತಿಭಟನೆ ಹಾಗೂ ವಿರೋಧಕ್ಕೆ ಕಾರಣವಾಗುವ ಸಾಧ್ಯತೆ ಇದೆ.

Uttar Pradesh CM Yogi Adityanath Bans Meat, Alcohol Sales in Mathura

Comments are closed.